Andolana originals

ಮಡಿಕೇರಿಯಲ್ಲಿ ಬಂಟರ ಭವನ ನಿರ್ಮಾಣಕ್ಕೆ ಸಿದ್ಧತೆ

ನವೀನ್ ಡಿಸೋಜ

೧೨ ರಿಂದ ೧೫ ಕೋಟಿ ರೂ.ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ೦.೫೨ ಎಕರೆ ಜಾಗ 

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಸುಮಾರು ೧೨ರಿಂದ ೧೫ ಕೋಟಿ ರೂ. ವೆಚ್ಚದಲ್ಲಿ ಬಂಟರ ಸಮುದಾಯ ಭವನ ನಿರ್ಮಾಣವಾಗಲಿದ್ದು, ಶುಕ್ರವಾರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಲಿದೆ.

ಕೊಡಗು ಜಿಲ್ಲೆಯಲ್ಲಿ ಸುಸಜ್ಜಿತವಾದ ಬಂಟರ ಭವನ ನಿರ್ಮಾಣವಾಗಬೇಕೆಂಬುದು ಸಮುದಾಯದವರ ಹಲವು ವರ್ಷಗಳ ಕನಸಾಗಿತ್ತು. ಈ ಕನಸು ಈಗ ನನಸಾಗುತ್ತಿದ್ದು, ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಕೊಡಗು ಬಂಟರ ಭವನ ನಿರ್ಮಾಣಕ್ಕೆ ತಯಾರಿ ನಡೆಸಲಾಗಿದೆ.

ದಾನಿ ದಿ. ಡಾ. ಬಿ.ಟಿ. ಪ್ರೇಮನಾಥ್ ಪೂಂಜಾ ಅವರು ಭವನ ನಿರ್ಮಾಣಕ್ಕಾಗಿ ೦.೫೨ ಎಕರೆ ಜಾಗವನ್ನು ದಶಕದ ಹಿಂದೆಯೇ ದಾನವಾಗಿ ನೀಡಿದ್ದರು. ಅದೇ ಸ್ಥಳದಲ್ಲಿ ಆಧುನಿಕ ಶೈಲಿಯಲ್ಲಿ ಸುಸಜ್ಜಿತ ಭವನ ನಿರ್ಮಾಣಕ್ಕೆ ಚಿಂತನೆ ನಡೆದಿತ್ತು. ಆದರೆ, ಕಾಮಗಾರಿ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಸುಸಜ್ಜಿತ ಭವನ ನಿರ್ಮಾಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಸ್ಥಳದಲ್ಲಿ ಮಣ್ಣು ತೆಗೆದು ಸಮತಟ್ಟು ಮಾಡುವ ಕೆಲಸ ನಡೆಸಲಾಗಿದೆ. ಒಂದು ತಿಂಗಳಿನಿಂದ ಕಾಮಗಾರಿ ಸಂಬಂಧ ಸಿದ್ಧತಾ ಕೆಲಸ ನಡೆಯುತ್ತಿದೆ. ಆದಷ್ಟು ಶೀಘ್ರದಲ್ಲಿ ಬಂಟರ ಭವನದ ಕಾಮಗಾರಿಯನ್ನು ಆರಂಭಿಸಿ ಪೂರ್ಣಗೊಳಿಸಲು ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘ ನಿರ್ಧರಿಸಿವೆ.

ಮೇ ೧ರಂದು ಬೆಳಿಗ್ಗೆ ೧೧ ಗಂಟೆಗೆ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯಲಿದ್ದು, ೨,೦೦೦ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕ್ಯಾ.ಬ್ರಿಜೇಶ್ ಚೌಟ, ಎಂಎಲ್‌ಸಿ ಸುಜಾ ಕುಶಾ ಲಪ್ಪ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಹೀಗಿರಲಿದೆ ಭವನ..!: 

ಒಟ್ಟು ನಾಲ್ಕು ಅಂತಸ್ತುಗಳಲ್ಲಿ ಭವನ ನಿರ್ಮಾಣವಾಗಲಿದೆ. ನೆಲಮಾಳಿಗೆಯಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತದೆ. ಒಂದು ಮಹಡಿಯಲ್ಲಿ ಭೋಜನಾಲಯ, ಮತ್ತೊಂದು ಮಹಡಿಯಲ್ಲಿ ಸುಮಾರು ೮೦೦ ಮಂದಿ ಆಸೀನರಾಗಲು ಸಾಧ್ಯವಾಗುವ ಸಭಾಂಗಣವನ್ನು ಅತ್ಯಾಧುನಿಕ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ. ಉಳಿದ ಒಂದು ಮಹಡಿಯಲ್ಲಿ ಕೋಣೆಗಳನ್ನು ನಿರ್ಮಿಸಲಾಗುತ್ತದೆ ಎಂದು ಬಂಟರ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್ ರೈ ತಿಳಿಸಿದ್ದಾರೆ.

” ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಕೊಡಗು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಮೇ ೧ರಂದು ೧೧ ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ದಿವಂಗತ ಪ್ರೇಮನಾಥ್ ಪೂಂಜಾ ಅವರಿಗೆ ಮರಣೋತ್ತರವಾಗಿ ವಿಶೇಷ ಬಿರುದು ಪ್ರದಾನ ಮಾಡಲಾಗುವುದು.”

-ಬಿ.ಡಿ. ಜಗದೀಶ್ ರೈ, ಕೊಡಗು ಜಿಲ್ಲಾ ಬಂಟರ ಸಂಘದ ಜಿಲ್ಲಾಧ್ಯಕ್ಷರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

6 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

6 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

6 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

6 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

6 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

6 hours ago