Andolana originals

ವಿಆರ್‌ಡಿಎಲ್ ಬೆನ್ನಲ್ಲೇ ಐಪಿಎಚ್‌ಎಲ್ ಲ್ಯಾಬ್ ಆರಂಭಕ್ಕೆ ಸಿದ್ಧತೆ

ನವೀನ್ ಡಿಸೋಜ

ಕೋಯಿಮ್ಸ್‌ನಲ್ಲಿ ಉತ್ತಮ ಆರೋಗ್ಯ ಸೇವೆ; ಅತ್ಯಾಧುನಿಕ ಲ್ಯಾಬ್‌ಗಳಿಂದ ಸಾಂಕ್ರಾಮಿಕ ರೋಗ ಪತ್ತೆಗೆ ಅನುಕೂಲ

ಮಡಿಕೇರಿ: ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ರೋಗಿಗಳಿಗಾಗಿ ಒಂದೊಂದಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿಆರ್‌ಡಿಎಲ್ ಸೇವೆ ಆರಂಭದ ಬೆನ್ನಲ್ಲೇ ಐಪಿಎಚ್‌ಎಲ್ ಲ್ಯಾಬ್ ಆರಂಭಿಸಲು ಸಿದ್ಧತೆ ನಡೆದಿದೆ.

ನಗರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾದ ಬಳಿಕ ಜಿಲ್ಲೆಯಲ್ಲಿ ಹಲವು ಆರೋಗ್ಯ ಸೇವೆಗಳು ಲಭ್ಯವಾಗುತ್ತಿವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರಬೇಕಾದ ಸೇವೆಗಳು ಒಂದೊಂದಾಗಿ ದೊರಕುತ್ತಿದ್ದು, ಅದರ ಸಾಲಿಗೀಗ ಎರಡು ಪ್ರಮುಖ ಪ್ರಯೋಗಾಲಯಗಳು ಸೇರ್ಪಡೆಯಾಗುತ್ತಿವೆ.

ಈಗಾಗಲೇ ಬಹುತೇಕ ಎಲ್ಲ ರೀತಿಯ ಪರೀಕ್ಷೆಗಳನ್ನು ಕೋಯಿಮ್ಸ್‌ನಲ್ಲಿಯೇ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೊರ ಜಿಲ್ಲೆಗಳ ಅವಲಂಬನೆ ಸಂಪೂರ್ಣವಾಗಿ ಇಲ್ಲದಾಗಲಿದೆ. ಅತಿ ಕಡಿಮೆ ಸಮಯದಲ್ಲಿ ಕೋಯಿಮ್ಸ್‌ನಲ್ಲಿಯೇ ಎಲ್ಲಾ ರೀತಿಯ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ರಾಜ್ಯ ಸರಕಾರ ೨೦೨೪-೨೫ನೇ ಬಜೆಟ್‌ನಲ್ಲಿ ಜಿಲ್ಲೆಯಲ್ಲಿ ವಿಆರ್‌ಡಿಎಲ್(ವೈರಲ್ ರೀಸರ್ಚ್ ಮತ್ತು ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ) ಆರಂಭಿಸುವುದಾಗಿ ಘೋಷಣೆ ಮಾಡಿತ್ತು. ಅದರಂತೆ ೧.೯೭ ಕೋಟಿ ರೂ. ವೆಚ್ಚದಲ್ಲಿ ಕೋಯಿಮ್ಸ್‌ನಲ್ಲಿ ವಿಆರ್‌ಡಿಎಲ್ ಪ್ರಯೋಗಾಲಯ ಆರಂಭವಾಗಿದ್ದು, ಜನರಿಗೆ ಸೇವೆ ನೀಡುತ್ತಿದೆ.

ಈ ಪ್ರಯೋಗಾಲಯದಿಂದ ವೈರಲ್ ರೋಗಗಳಾದ ಎಚ್೧ಎನ್೧, ಕೋವಿಡ್ ೧೯ ಮತ್ತಿತರ ರೋಗಗಳ ಪರೀಕ್ಷೆ ಇಲ್ಲಿಯೇ ನಡೆಸಲಾಗುತ್ತಿದೆ. ಆರ್‌ಟಿ-ಪಿಸಿಆರ್, ಇಎಲ್ ಐಎಸ್‌ಎ ಮುಂತಾದ ವಿಧಾನಗಳಿಂದ ವೈರಾಣು ರೋಗಗಳ ಪತ್ತೆ ಮಾಡುವ ಸೌಲಭ್ಯ ಈ ಪ್ರಯೋಗಾಲಯಗಳಲ್ಲಿದ್ದು, ಹಿಂದಿನಂತೆ ಇಂತಹ ವೈರಲ್ ಪರೀಕ್ಷೆಗಾಗಿ ಬೇರೆ ಜಿಲ್ಲೆಗಳಿಗೆ ರಕ್ತ ಅಥವಾ ಸ್ವ್ಯಾಬ್ ಮಾದರಿ ಕಳುಹಿಸುವುದು, ಅಲ್ಲಿಂದ ವರದಿ ಬರುವವರೆಗೆ ಕಾಯುವ ಪರಿಸ್ಥಿತಿ ತಪ್ಪಿದೆ.

ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆ ಕೊಡಗಿನಲ್ಲಿ ಪದೇ ಪದೇ ವೈರಸ್ ಆತಂಕ ಮನೆಮಾಡುತ್ತದೆ. ಕೋವಿಡ್‌ನ ಹೊಸ ರೂಪಾಂತರಿಗಳು ಸೇರಿದಂತೆ ಹೊಸ ವೈರಸ್ ಕಾಯಿಲೆಗಳು ಇತ್ತೀಚೆಗೆ ಕೇರಳದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆಯಾದರೂ ವೈರಸ್ ಪತ್ತೆಗೆ ಬೇರೆ ಜಿಲ್ಲೆಗಳ ಪ್ರಯೋಗಾಲಯಗಳನ್ನು ಅವಲಂಭಿಸಬೇಕಿತ್ತು. ಈಗ ವಿಆರ್‌ಡಿಎಲ್ ಆರಂಭವಾಗಿರುವುದರಿಂದ ಅಂತಹ ಪರಿಸ್ಥಿತಿಯಲ್ಲಿ ವೈರಸ್ ಪತ್ತೆಹಚ್ಚಲು ಮತ್ತು ಹೊಸ ವೈರಸ್ ಬಗ್ಗೆ ಸಂಶೋಧನೆಗೂ ಅನುಕೂಲವಾಗಿದೆ.

ಇದರೊಂದಿಗೆ ಐಪಿಎಚ್‌ಎಲ್ (ಇಂಟಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬೋರೇಟರಿ) ಆರಂಭಕ್ಕೂ ಸಿದ್ಧತೆ ನಡೆದಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗಸೂಚಿಯಡಿ ದೇಶದ ಎಲ್ಲ ಜಿಲ್ಲೆಗಳಲ್ಲಿಯೂ ಐಪಿಎಚ್‌ಎಲ್‌ಗಳನ್ನು ಸ್ಥಾಪಿಸಲಾಗುತ್ತಿದ್ದು, ಇಲ್ಲಿ ಎಲ್ಲಾ ರೀತಿಯ ಪರೀಕ್ಷೆಗಳು ಒಂದೇ ಸೂರಿನಡಿ ನಡೆಯಲಿವೆ. ಅದರಂತೆ ಕೋಯಿಮ್ಸ್‌ನಲ್ಲಿ ಐಪಿಎಚ್‌ಎಲ್ ಆರಂಭಕ್ಕೆ ಸಿದ್ಧತೆ ಮಾಡಲಾಗಿದ್ದು, ಕೋಯಿಮ್ಸ್‌ನ ತುರ್ತು ವಿಭಾಗದ ಹೊಸ ಕಟ್ಟಡದ ನೆಲ ಅಂತಸ್ತಿನಲ್ಲಿ ಈ ಪ್ರಯೋಗಾಲಯ ಆರಂಭವಾಗಲಿದೆ.

ಐಪಿಎಚ್‌ಎಲ್ ಲ್ಯಾಬ್‌ನಲ್ಲಿ ಡೆಂಗ್ಯು, ಎನ್ ಎಸ್೧, ಸೆರಾಲಜಿ, ಚಿಕುನ್ ಗುನ್ಯಾ, ಮಲೇರಿಯಾ ಪಿಸಿಆರ್, ಟೈಫಾಯಿಡ್ ಪಿಸಿಆರ್, ಲೆಪ್ಟೋಸ್ಪ್ರೆರೋಸಿಸ್ ಸೇರಿದಂತೆ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಽಸಿದಂತೆ ಹಲವು ಪರೀಕ್ಷೆಗಳು ಒಂದೇ ಸೂರಿನಡಿ ನಡೆಯಲಿದೆ. ಇದರೊಂದಿಗೆ ನೀರಿನ ಮಾಲಿನ್ಯ, ಆಹಾರದಮೂಲಕ ಹರಡುವ ಕಾಯಿಲೆಗಳಿಗೂವಿಶಿಷ್ಟ ಪರೀಕ್ಷಾ ವ್ಯವಸ್ಥೆ ಇರಲಿದೆ. ಈ ಪ್ರಯೋಗಾಲಯ ಕಾರ್ಯಾರಂಭಿಸುವುದರಿಂದ ಬೇರೆ ಜಿಲ್ಲೆಗಳನ್ನು ಅವಲಂಬಿಸುವುದರಿಂದಾಗುತ್ತಿದ್ದ ಸಮಯ ಹಾಗೂ ಹಣ ಎರಡೂ ಉಳಿಯುವುದರೊಂದಿಗೆ ಸಾಂಕ್ರಾಮಿಕ ರೋಗಗಳು ಉಲ್ಬಣಗೊಂಡಾಗ ತಕ್ಷಣ ಪರೀಕ್ಷಿಸಿ ಚಿಕಿತ್ಸೆ ನೀಡಲೂ ಅನುಕೂಲವಾಗಲಿದೆ.

” ಸರ್ಕಾರದ ಬಜೆಟ್‌ನಲ್ಲಿ ಘೋಷಣೆಯಾಗಿದ್ದ ವಿಆರ್‌ಡಿಎಲ್ ಪ್ರಯೋಗಾಲಯ ಈಗಾಗಲೇ ಆರಂಭಗೊಂಡು ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಈಗ ಕೇಂದ್ರದ ಐಪಿಎಚ್ ಎಲ್ ಕೂಡ ಆರಂಭವಾಗುವುದರಿಂದ ಸಾಕಷ್ಟು ಅನುಕೂಲವಾಗಲಿದೆ. ಎಲ್ಲ ರೀತಿಯ ಲ್ಯಾಬ್‌ಗಳೂ ಒಂದೇ ಸೂರಿನಡಿಗೆ ತರಲಾಗುತ್ತಿದ್ದು, ಶೀಘ್ರದಲ್ಲಿ ಪರೀಕ್ಷಾ ವರದಿಗಳು ದೊರೆಯುವುದರೊಂದಿಗೆ ಅಧ್ಯಯನಕ್ಕೂ ಇದರಿಂದ ಅನುಕೂಲವಾಗಲಿದೆ.”

-ಡಾ.ನಸೀಮ ತಬ್ಸೀರಾ, ವಿಭಾಗ ಮುಖ್ಯಸ್ಥರು , ಮೈಕ್ರೋ ಬಯಾಲಜಿ, ಕೋಯಿಮ್

ಆಂದೋಲನ ಡೆಸ್ಕ್

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

10 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

2 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

3 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

4 hours ago