Andolana originals

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್

ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು 

ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ ಕಲಾತಂಡಗಳನ್ನು ಬಳಸಿಕೊಂಡು ಅಭೂತಪೂರ್ವ ಸ್ವಾಗತ ನೀಡಲು ಅರಣ್ಯ ಇಲಾಖೆ ವತಿಯಿಂದ ಪೂರ್ವ ತಯಾರಿ ಜೋರಾಗಿ ನಡೆಯುತ್ತಿದೆ.

ಪ್ರತಿ ವರ್ಷದಂತೆ ಗಜಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನ ಹೊಸಹಳ್ಳಿಯ ಮುಖ್ಯದ್ವಾರದ ಮುಂಭಾಗ ನಡೆಯಲಿದೆ. ಆಗಸ್ಟ್ ೨೬ರಂದು ಬೆಳಿಗ್ಗೆ ೧೦ ಗಂಟೆಗೆ ಗಜಪಯಣ ಆರಂಭವಾಗಲಿದೆ. ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯನ್ನು ಭರ್ಜರಿಯಾಗಿ ಸ್ವಾಗತಿಸಲು ಪ್ರವಾಸಿಗರು ಹಾಗೂ ೧೫ಕ್ಕೂ ಹೆಚ್ಚು ಜಾನಪದ ಕಲಾತಂಡಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾಂಪ್ರದಾಯಿಕ ಪೂಜೆ ನೆರವೇರಿಸಿ ಮೈಸೂರಿಗೆ ಆನೆಗಳನ್ನು ಕರೆತರಲಾಗುತ್ತಿತ್ತು. ಆದರೆ, ಈ ಸಾಲಿನಿಂದ ಇದಕ್ಕೆ ಹೊಸ ರೂಪ ನೀಡಲಾಗುತ್ತಿದ್ದು, ಸುಮಾರು ೬ ಸಾವಿರ ಜನರನ್ನು ಸೇರಿಸಿ ಆನೆಗಳಿಗೆ ಸ್ವಾಗತ ಕೋರಲಾಗುತ್ತಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆ, ಶಾಲಾ-ಕಾಲೇಜುಗಳು, ಮಹಿಳಾ ಸಂಘಟನೆಗಳಿಗೂ ಆಹ್ವಾನ ನೀಡಲಾಗುತ್ತಿದೆ. ವೀರನಹೊಸಹಳ್ಳಿಯಲ್ಲಿ ಗಜಪಯಣ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಪಡಿಸುವ ಕಾರ್ಯ ಭರದಿಂದ ಸಾಗಿದೆ. ರಸ್ತೆ ಪಕ್ಕದ ಗಿಡ ಗಂಟಿಗಳನ್ನು ತೆರವುಗೊಳಿಸಲಾಗಿದೆ.

೧೫ಕ್ಕೂ ಹೆಚ್ಚು ಕಲಾ ತಂಡಗಳು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತಿಂದ್ರ ಸಿದ್ದರಾಮಯ್ಯ ಅವರು ಆಗಸ್ಟ್ ೨೬ರಂದು ಗಜಪಡೆಗೆ ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ ಕುಣಿತ, ಪೂಜಾ ಕುಣಿತ, ಆದಿವಾಸಿಗಳ ನೃತ್ಯ, ಟಿಬೆಟಿಯನ್ ನೃತ್ಯ, ಗೊರವರ ಕುಣಿತ, ಜೇನುಕುರುಬರ ಕುಣಿತ, ಕಾಡು ಕುರುಬರ ಕುಣಿತ ಸೇರಿದಂತೆ ೧೫ಕ್ಕೂ ಹೆಚ್ಚಿನ ಕಲಾ ತಂಡಗಳು ಗಜಪಡೆಯ ಮುಂದೆ ಪ್ರದರ್ಶನ ನೀಡಲಿವೆ. ಅಲ್ಲದೆ ಆನೆಗಳನ್ನು ಮೆರವಣಿಗೆಯಲ್ಲಿ ಕೆಲ ದೂರ ಕರೆದೊಯ್ಯಲಾಗುತ್ತದೆ. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಮೊದಲ ತಂಡದಲ್ಲಿ ೯ ಆನೆಗಳು ಆಗಮಿಸುತ್ತಿವೆ. ಎರಡನೇ ಹಂತದಲ್ಲಿ ಮಹೇಂದ್ರ, ಗೋಪಿ ಸೇರಿದಂತೆ ೭ ಆನೆಗಳನ್ನು ಕರೆತರಲಾಗುತ್ತದೆ

” ಆನೆಗಳ ತಂಡದಲ್ಲಿ ಮೊದಲ ಹಂತದಲ್ಲಿ ಒಂಬತ್ತು ಆನೆಗಳು ಬರಲಿವೆ. ಸುಮಾರು ೬,೦೦೦ ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.”

-ಪ್ರಭುಗೌಡ, ಡಿಸಿಎಫ್, ಗಜಪಯಣದ ಉಸ್ತುವಾರಿ ಅಧಿಕಾರಿ

” ಮೈಸೂರಿನ ವಿವಿಧೆಡೆ ಹಾಗೂ ಹುಣಸೂರು ಮುಖ್ಯರಸ್ತೆಯಲ್ಲಿ ಸುಮಾರು ೨೦ ಸ್ಥಳಗಳಲ್ಲಿ ದೊಡ್ಡ -ದೊಡ್ಡ ಫಲಕಗಳನ್ನು ಪ್ರದರ್ಶಿಸಿ, ಆಗಸ್ಟ್ ೨೬ರಂದು ನಡೆಯುವ ಗಜಪಯಣಕ್ಕೆ ಸರ್ವರಿಗೂ ಸ್ವಾಗತ ಕೋರಲು ಅರಣ್ಯ ಇಲಾಖೆ ಯೋಜನೆ ರೂಪಿಸಿದೆ.”

 

 

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

45 seconds ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

5 mins ago

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

8 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

11 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

13 hours ago