Andolana originals

೪ ದಶಕಗಳಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ಕುಟುಂಬ ಮಗ್ನ

ಕೆ.ಆರ್.ನಗರದ ಸುಭಾಷ್, ರಮೇಶ್ ಸಹೋದರರಿಂದ ಕುಲಕಸುಬು ಮುಂದುವರಿಕೆ 

ಕೆ.ಆರ್.ನಗರ: ಕುಂಬಾರಿಕೆಯನ್ನು ಕುಲಕಸುಬಾಗಿ ನಂಬಿರುವ  ಕುಟುಂಬವೊಂದುನಾಲ್ಕು ದಶಕಗಳಿಂದ ಗಣೇಶ ಮೂರ್ತಿ ತಯಾರಿಸುವುದರಲ್ಲಿ ತೊಡಗಿರುವ ಅಪರೂಪದ ಸಂಗತಿಗೆ ಪಟ್ಟಣದ ಆಂಜನೇಯನ ಬಡಾವಣೆ ಸಾಕ್ಷಿಯಾಗಿದೆ.

ಆಂಜನೇಯ ಬಡಾವಣೆಯಲ್ಲಿ ವಾಸವಾಗಿದ್ದ ದಿವಂಗತ ಪುಟ್ಟರಾಜು ಅವರ ಪುತ್ರರಾದಸುಭಾಷ್ ಮತ್ತು ರಮೇಶ್ ಸಹೋದರರು  ಕುಟುಂಬದ ಕಾಯಕವನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ವರ್ಷಪೂರ್ತಿ ಇದೇ ಕಾಯಕದಲ್ಲಿ ತೊಡಗುವ ಇವರು  ಅರ್ಧ ಅಡಿಯಿಂದ ೧೨ ಅಡಿ ಎತ್ತರದ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಾರೆ. ವರ್ಷದಲ್ಲಿ ೧೦ ಸಾವಿರಕ್ಕೂ ಹೆಚ್ಚು ಗಣಪತಿ ಮೂರ್ತಿಗಳನ್ನು ತಯಾರಿಸುವ ಇವರಿಗೆ ಪತ್ನಿ, ಮಕ್ಕಳು ಸಾಥ್ ನೀಡುತ್ತಾರೆ.

ಈವರೆಗೂ ೩ ಲಕ್ಷಕ್ಕೂ ಅಧಿಕ ಮೂರ್ತಿಗಳನ್ನು ತಯಾರಿಸಿ ದಾಖಲೆ ಮಾಡಿದ್ದಾರೆ. ಅದೂಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳೇ ಎನ್ನುವುದು ಮತ್ತೊಂದು ವಿಶೇಷತೆ.

೪೫ ವರ್ಷಗಳಿಂದ ನಿರಂತರವಾಗಿ ಗಣೇಶಮೂರ್ತಿ ತಯಾರಿಕೆಯಲ್ಲಿ ತೊಡಗಿರುವ ಈ ರೀತಿಯ ಏಳೆಂಟು ಕುಟುಂಬಗಳು ಕೆ.ಆರ್.  ನಗರ ಪಟ್ಟಣದ ಆಂಜನೇಯ ಬಡಾವಣೆಯಲ್ಲಿ ನೆಲೆಸಿರುವುದು ಗಮನಾರ್ಹ.

ಕುಂಬಾರಿಕೆಯನ್ನೇ ಮೂಲ ಕಸುಬಾಗಿಸಿಕೊಂಡಿರುವ ಈ ಕುಟುಂಬಗಳು ಗಣೇಶ ಮೂರ್ತಿ ತಯಾರಿಕೆಯಲ್ಲಿ ಸಿದ್ಧಹಸ್ತರು. ಸರ್ಕಾರದ ಮಾರ್ಗಸೂಚಿಯಂತೆ ಕೇವಲ ಜೇಡಿ ಮಣ್ಣಿನಲ್ಲಿ ಪರಿಸರ ಸ್ನೇಹಿ ಗಣಪತಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ೫೦ ರೂ.ಗಳಿಂದ ೩೫ ಸಾವಿರ ರೂ. ವರೆಗೆ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಾರೆ. ಇದರೊಟ್ಟಗೆ ವಿಶೇಷವಾಗಿ ಗೌರಮ್ಮನ ಮೂರ್ತಿಗಳನ್ನೂ ಕೂಡ ತಯಾರಿಸುತ್ತಾರೆ. ಕುಂಬಾರಿಕೆಯನ್ನೇ ಕಾಯಕ ಮಾಡಿಕೊಂಡಿರುವ ಇಂತಹ ಕುಟುಂಬಗಳನ್ನು ಸರ್ಕಾರ ಗುರುತಿಸಿ ನೆರವು ನೀಡಬೇಕಿದೆ. ಜೊತೆಗೆ ಸರ್ಕಾರದಿಂದ ಯಾವುದೇ ಪ್ರಶಸ್ತಿ ನೀಡಿಲ್ಲ ಎಂದು ನಾಗರಿಕರು ಬೇಸರ ವ್ಯಕ್ತಪಡಿಸುತ್ತಾರೆ.

” ನಾವು ವೃತ್ತಿಯಲ್ಲಿ ಕುಂಬಾರರು. ಗಣೇಶ ಹಬ್ಬದ ಸಮಯದಲ್ಲಿ ಮೂರ್ತಿಗಳನ್ನು ತಯಾರಿಸುತ್ತೇವೆ.  ೫೦ ರೂ.ಗಳಿಂದ ಹಿಡಿದು ೨೫ ಸಾವಿರ ರೂ.ವರೆಗಿನ ಗಣೇಶ ಮೂರ್ತಿಗಳು ನಮ್ಮಲ್ಲಿವೆ. ೬ ಅಡಿಯಿಂದ ಹಿಡಿದು ೧೨ ಅಡಿಗಳವರೆಗಿನ ವಿವಿಧ ರೂಪಗಳ ಗಣೇಶ ಮೂರ್ತಿಗಳು ಸಿಗುತ್ತವೆ. ಕೊರೊನಾ ನಂತರ ವ್ಯಾಪಾರ ಕುಸಿದಿದೆ. ಗೌರಿ-ಗಣೇಶ ಹಬ್ಬದ ಸಮಯದಲ್ಲಿ ವ್ಯಾಪಾರ ಸಾಧಾರಣವಾಗಿದೆ.”

 -ಸುಭಾಷ್, ಗಣಪತಿ ಮೂರ್ತಿ ತಯಾರಕರು

” ಈ ಕುಟುಂಬ ಕುಲ ಕಸುಬನ್ನೇ ಜೀವನವನ್ನಾಗಿ ಮಾಡಿಕೊಂಡಿದೆ.  ಕಾಯಕ ಸಮಾಜಗಳನ್ನು ಉಳಿಸುವ ಜವಾಬ್ದಾರಿ ಸರ್ಕಾರದ ಮೇಲೆ ಇದೆ. ಸರ್ಕಾರ ಇಂತಹ ಕುಟುಂಬಗಳಿಗೆಸೌಲಭ್ಯಗಳನ್ನು ಒದಗಿಸಿಲ್ಲ. ಇದರಿಂದಾಗಿ ಗುಡಿ ಕೈಗಾರಿಕೆ ಕಣ್ಮರೆಯಾಗುತ್ತಿದೆ.  ಸರ್ಕಾರ ಮತ್ತು ತಾಲ್ಲೂಕು ಆಡಳಿತ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿಲ್ಲ.”

-ಕೆ.ಉಮೇಶ್, ಪುರಸಭಾ ಸದಸ್ಯರು

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

31 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

57 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago