Andolana originals

೪ ದಶಕಗಳಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ಕುಟುಂಬ ಮಗ್ನ

ಕೆ.ಆರ್.ನಗರದ ಸುಭಾಷ್, ರಮೇಶ್ ಸಹೋದರರಿಂದ ಕುಲಕಸುಬು ಮುಂದುವರಿಕೆ 

ಕೆ.ಆರ್.ನಗರ: ಕುಂಬಾರಿಕೆಯನ್ನು ಕುಲಕಸುಬಾಗಿ ನಂಬಿರುವ  ಕುಟುಂಬವೊಂದುನಾಲ್ಕು ದಶಕಗಳಿಂದ ಗಣೇಶ ಮೂರ್ತಿ ತಯಾರಿಸುವುದರಲ್ಲಿ ತೊಡಗಿರುವ ಅಪರೂಪದ ಸಂಗತಿಗೆ ಪಟ್ಟಣದ ಆಂಜನೇಯನ ಬಡಾವಣೆ ಸಾಕ್ಷಿಯಾಗಿದೆ.

ಆಂಜನೇಯ ಬಡಾವಣೆಯಲ್ಲಿ ವಾಸವಾಗಿದ್ದ ದಿವಂಗತ ಪುಟ್ಟರಾಜು ಅವರ ಪುತ್ರರಾದಸುಭಾಷ್ ಮತ್ತು ರಮೇಶ್ ಸಹೋದರರು  ಕುಟುಂಬದ ಕಾಯಕವನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ವರ್ಷಪೂರ್ತಿ ಇದೇ ಕಾಯಕದಲ್ಲಿ ತೊಡಗುವ ಇವರು  ಅರ್ಧ ಅಡಿಯಿಂದ ೧೨ ಅಡಿ ಎತ್ತರದ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಾರೆ. ವರ್ಷದಲ್ಲಿ ೧೦ ಸಾವಿರಕ್ಕೂ ಹೆಚ್ಚು ಗಣಪತಿ ಮೂರ್ತಿಗಳನ್ನು ತಯಾರಿಸುವ ಇವರಿಗೆ ಪತ್ನಿ, ಮಕ್ಕಳು ಸಾಥ್ ನೀಡುತ್ತಾರೆ.

ಈವರೆಗೂ ೩ ಲಕ್ಷಕ್ಕೂ ಅಧಿಕ ಮೂರ್ತಿಗಳನ್ನು ತಯಾರಿಸಿ ದಾಖಲೆ ಮಾಡಿದ್ದಾರೆ. ಅದೂಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳೇ ಎನ್ನುವುದು ಮತ್ತೊಂದು ವಿಶೇಷತೆ.

೪೫ ವರ್ಷಗಳಿಂದ ನಿರಂತರವಾಗಿ ಗಣೇಶಮೂರ್ತಿ ತಯಾರಿಕೆಯಲ್ಲಿ ತೊಡಗಿರುವ ಈ ರೀತಿಯ ಏಳೆಂಟು ಕುಟುಂಬಗಳು ಕೆ.ಆರ್.  ನಗರ ಪಟ್ಟಣದ ಆಂಜನೇಯ ಬಡಾವಣೆಯಲ್ಲಿ ನೆಲೆಸಿರುವುದು ಗಮನಾರ್ಹ.

ಕುಂಬಾರಿಕೆಯನ್ನೇ ಮೂಲ ಕಸುಬಾಗಿಸಿಕೊಂಡಿರುವ ಈ ಕುಟುಂಬಗಳು ಗಣೇಶ ಮೂರ್ತಿ ತಯಾರಿಕೆಯಲ್ಲಿ ಸಿದ್ಧಹಸ್ತರು. ಸರ್ಕಾರದ ಮಾರ್ಗಸೂಚಿಯಂತೆ ಕೇವಲ ಜೇಡಿ ಮಣ್ಣಿನಲ್ಲಿ ಪರಿಸರ ಸ್ನೇಹಿ ಗಣಪತಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ೫೦ ರೂ.ಗಳಿಂದ ೩೫ ಸಾವಿರ ರೂ. ವರೆಗೆ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಾರೆ. ಇದರೊಟ್ಟಗೆ ವಿಶೇಷವಾಗಿ ಗೌರಮ್ಮನ ಮೂರ್ತಿಗಳನ್ನೂ ಕೂಡ ತಯಾರಿಸುತ್ತಾರೆ. ಕುಂಬಾರಿಕೆಯನ್ನೇ ಕಾಯಕ ಮಾಡಿಕೊಂಡಿರುವ ಇಂತಹ ಕುಟುಂಬಗಳನ್ನು ಸರ್ಕಾರ ಗುರುತಿಸಿ ನೆರವು ನೀಡಬೇಕಿದೆ. ಜೊತೆಗೆ ಸರ್ಕಾರದಿಂದ ಯಾವುದೇ ಪ್ರಶಸ್ತಿ ನೀಡಿಲ್ಲ ಎಂದು ನಾಗರಿಕರು ಬೇಸರ ವ್ಯಕ್ತಪಡಿಸುತ್ತಾರೆ.

” ನಾವು ವೃತ್ತಿಯಲ್ಲಿ ಕುಂಬಾರರು. ಗಣೇಶ ಹಬ್ಬದ ಸಮಯದಲ್ಲಿ ಮೂರ್ತಿಗಳನ್ನು ತಯಾರಿಸುತ್ತೇವೆ.  ೫೦ ರೂ.ಗಳಿಂದ ಹಿಡಿದು ೨೫ ಸಾವಿರ ರೂ.ವರೆಗಿನ ಗಣೇಶ ಮೂರ್ತಿಗಳು ನಮ್ಮಲ್ಲಿವೆ. ೬ ಅಡಿಯಿಂದ ಹಿಡಿದು ೧೨ ಅಡಿಗಳವರೆಗಿನ ವಿವಿಧ ರೂಪಗಳ ಗಣೇಶ ಮೂರ್ತಿಗಳು ಸಿಗುತ್ತವೆ. ಕೊರೊನಾ ನಂತರ ವ್ಯಾಪಾರ ಕುಸಿದಿದೆ. ಗೌರಿ-ಗಣೇಶ ಹಬ್ಬದ ಸಮಯದಲ್ಲಿ ವ್ಯಾಪಾರ ಸಾಧಾರಣವಾಗಿದೆ.”

 -ಸುಭಾಷ್, ಗಣಪತಿ ಮೂರ್ತಿ ತಯಾರಕರು

” ಈ ಕುಟುಂಬ ಕುಲ ಕಸುಬನ್ನೇ ಜೀವನವನ್ನಾಗಿ ಮಾಡಿಕೊಂಡಿದೆ.  ಕಾಯಕ ಸಮಾಜಗಳನ್ನು ಉಳಿಸುವ ಜವಾಬ್ದಾರಿ ಸರ್ಕಾರದ ಮೇಲೆ ಇದೆ. ಸರ್ಕಾರ ಇಂತಹ ಕುಟುಂಬಗಳಿಗೆಸೌಲಭ್ಯಗಳನ್ನು ಒದಗಿಸಿಲ್ಲ. ಇದರಿಂದಾಗಿ ಗುಡಿ ಕೈಗಾರಿಕೆ ಕಣ್ಮರೆಯಾಗುತ್ತಿದೆ.  ಸರ್ಕಾರ ಮತ್ತು ತಾಲ್ಲೂಕು ಆಡಳಿತ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿಲ್ಲ.”

-ಕೆ.ಉಮೇಶ್, ಪುರಸಭಾ ಸದಸ್ಯರು

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago