Andolana originals

೪ ದಶಕಗಳಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ಕುಟುಂಬ ಮಗ್ನ

ಕೆ.ಆರ್.ನಗರದ ಸುಭಾಷ್, ರಮೇಶ್ ಸಹೋದರರಿಂದ ಕುಲಕಸುಬು ಮುಂದುವರಿಕೆ 

ಕೆ.ಆರ್.ನಗರ: ಕುಂಬಾರಿಕೆಯನ್ನು ಕುಲಕಸುಬಾಗಿ ನಂಬಿರುವ  ಕುಟುಂಬವೊಂದುನಾಲ್ಕು ದಶಕಗಳಿಂದ ಗಣೇಶ ಮೂರ್ತಿ ತಯಾರಿಸುವುದರಲ್ಲಿ ತೊಡಗಿರುವ ಅಪರೂಪದ ಸಂಗತಿಗೆ ಪಟ್ಟಣದ ಆಂಜನೇಯನ ಬಡಾವಣೆ ಸಾಕ್ಷಿಯಾಗಿದೆ.

ಆಂಜನೇಯ ಬಡಾವಣೆಯಲ್ಲಿ ವಾಸವಾಗಿದ್ದ ದಿವಂಗತ ಪುಟ್ಟರಾಜು ಅವರ ಪುತ್ರರಾದಸುಭಾಷ್ ಮತ್ತು ರಮೇಶ್ ಸಹೋದರರು  ಕುಟುಂಬದ ಕಾಯಕವನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ವರ್ಷಪೂರ್ತಿ ಇದೇ ಕಾಯಕದಲ್ಲಿ ತೊಡಗುವ ಇವರು  ಅರ್ಧ ಅಡಿಯಿಂದ ೧೨ ಅಡಿ ಎತ್ತರದ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಾರೆ. ವರ್ಷದಲ್ಲಿ ೧೦ ಸಾವಿರಕ್ಕೂ ಹೆಚ್ಚು ಗಣಪತಿ ಮೂರ್ತಿಗಳನ್ನು ತಯಾರಿಸುವ ಇವರಿಗೆ ಪತ್ನಿ, ಮಕ್ಕಳು ಸಾಥ್ ನೀಡುತ್ತಾರೆ.

ಈವರೆಗೂ ೩ ಲಕ್ಷಕ್ಕೂ ಅಧಿಕ ಮೂರ್ತಿಗಳನ್ನು ತಯಾರಿಸಿ ದಾಖಲೆ ಮಾಡಿದ್ದಾರೆ. ಅದೂಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳೇ ಎನ್ನುವುದು ಮತ್ತೊಂದು ವಿಶೇಷತೆ.

೪೫ ವರ್ಷಗಳಿಂದ ನಿರಂತರವಾಗಿ ಗಣೇಶಮೂರ್ತಿ ತಯಾರಿಕೆಯಲ್ಲಿ ತೊಡಗಿರುವ ಈ ರೀತಿಯ ಏಳೆಂಟು ಕುಟುಂಬಗಳು ಕೆ.ಆರ್.  ನಗರ ಪಟ್ಟಣದ ಆಂಜನೇಯ ಬಡಾವಣೆಯಲ್ಲಿ ನೆಲೆಸಿರುವುದು ಗಮನಾರ್ಹ.

ಕುಂಬಾರಿಕೆಯನ್ನೇ ಮೂಲ ಕಸುಬಾಗಿಸಿಕೊಂಡಿರುವ ಈ ಕುಟುಂಬಗಳು ಗಣೇಶ ಮೂರ್ತಿ ತಯಾರಿಕೆಯಲ್ಲಿ ಸಿದ್ಧಹಸ್ತರು. ಸರ್ಕಾರದ ಮಾರ್ಗಸೂಚಿಯಂತೆ ಕೇವಲ ಜೇಡಿ ಮಣ್ಣಿನಲ್ಲಿ ಪರಿಸರ ಸ್ನೇಹಿ ಗಣಪತಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ೫೦ ರೂ.ಗಳಿಂದ ೩೫ ಸಾವಿರ ರೂ. ವರೆಗೆ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಾರೆ. ಇದರೊಟ್ಟಗೆ ವಿಶೇಷವಾಗಿ ಗೌರಮ್ಮನ ಮೂರ್ತಿಗಳನ್ನೂ ಕೂಡ ತಯಾರಿಸುತ್ತಾರೆ. ಕುಂಬಾರಿಕೆಯನ್ನೇ ಕಾಯಕ ಮಾಡಿಕೊಂಡಿರುವ ಇಂತಹ ಕುಟುಂಬಗಳನ್ನು ಸರ್ಕಾರ ಗುರುತಿಸಿ ನೆರವು ನೀಡಬೇಕಿದೆ. ಜೊತೆಗೆ ಸರ್ಕಾರದಿಂದ ಯಾವುದೇ ಪ್ರಶಸ್ತಿ ನೀಡಿಲ್ಲ ಎಂದು ನಾಗರಿಕರು ಬೇಸರ ವ್ಯಕ್ತಪಡಿಸುತ್ತಾರೆ.

” ನಾವು ವೃತ್ತಿಯಲ್ಲಿ ಕುಂಬಾರರು. ಗಣೇಶ ಹಬ್ಬದ ಸಮಯದಲ್ಲಿ ಮೂರ್ತಿಗಳನ್ನು ತಯಾರಿಸುತ್ತೇವೆ.  ೫೦ ರೂ.ಗಳಿಂದ ಹಿಡಿದು ೨೫ ಸಾವಿರ ರೂ.ವರೆಗಿನ ಗಣೇಶ ಮೂರ್ತಿಗಳು ನಮ್ಮಲ್ಲಿವೆ. ೬ ಅಡಿಯಿಂದ ಹಿಡಿದು ೧೨ ಅಡಿಗಳವರೆಗಿನ ವಿವಿಧ ರೂಪಗಳ ಗಣೇಶ ಮೂರ್ತಿಗಳು ಸಿಗುತ್ತವೆ. ಕೊರೊನಾ ನಂತರ ವ್ಯಾಪಾರ ಕುಸಿದಿದೆ. ಗೌರಿ-ಗಣೇಶ ಹಬ್ಬದ ಸಮಯದಲ್ಲಿ ವ್ಯಾಪಾರ ಸಾಧಾರಣವಾಗಿದೆ.”

 -ಸುಭಾಷ್, ಗಣಪತಿ ಮೂರ್ತಿ ತಯಾರಕರು

” ಈ ಕುಟುಂಬ ಕುಲ ಕಸುಬನ್ನೇ ಜೀವನವನ್ನಾಗಿ ಮಾಡಿಕೊಂಡಿದೆ.  ಕಾಯಕ ಸಮಾಜಗಳನ್ನು ಉಳಿಸುವ ಜವಾಬ್ದಾರಿ ಸರ್ಕಾರದ ಮೇಲೆ ಇದೆ. ಸರ್ಕಾರ ಇಂತಹ ಕುಟುಂಬಗಳಿಗೆಸೌಲಭ್ಯಗಳನ್ನು ಒದಗಿಸಿಲ್ಲ. ಇದರಿಂದಾಗಿ ಗುಡಿ ಕೈಗಾರಿಕೆ ಕಣ್ಮರೆಯಾಗುತ್ತಿದೆ.  ಸರ್ಕಾರ ಮತ್ತು ತಾಲ್ಲೂಕು ಆಡಳಿತ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿಲ್ಲ.”

-ಕೆ.ಉಮೇಶ್, ಪುರಸಭಾ ಸದಸ್ಯರು

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

5 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

5 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

5 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

5 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

5 hours ago