Andolana originals

ಕಪಿಲೆಯ ಪ್ರವಾಹದ ಅನಾಹುತ ಎದುರಿಸಲು ಸನ್ನದ್ಧ

ಶ್ರೀಧರ್ ಆರ್.ಭಟ್ಟ

ನಂಜನಗೂಡು: ದಿನದ ೨೪ ಗಂಟೆಗಳೂ ಜಾಗೃತವಾಗಿರಲು ಅಧಿಕಾರಿಗಳಿಗೆ ತಹಸಿಲ್ದಾರ್ ತಾಕೀತು

ನಂಜನಗೂಡು: ಪಕ್ಕದ ರಾಜ್ಯ ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರು ಪ್ರವಾಹೋಪಾದಿಯಲ್ಲಿ ಕಪಿಲಾ ನದಿಯಲ್ಲಿ ಹರಿದು ಬರುವುದರಿಂದ ಅದನ್ನು ಎದುರಿಸಲು ತಾಲ್ಲೂಕು ಆಡಳಿತ ಸರ್ವಸನ್ನದ್ಧವಾಗಿದೆ.

ನಂಜನಗೂಡು ಹಾಗೂ ವರುಣ ವಿಧಾನಸಭಾ ಕ್ಷೇತ್ರ ಗಳ ವ್ಯಾಪ್ತಿಯಲ್ಲಿನ ೪೫ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಮಳೆ ಹಾನಿಯಿಂದಾಗುವ ಅನಾಹುತ ಎದುರಿಸಲು ಈಗಾಗಲೇ ೩ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಮತ್ತು ಕಂದಾಯ ಅಧಿಕಾರಿಗಳ ಸಭೆ ನಡೆಸಿ ಮಳೆ ಹಾನಿ ಹಾಗೂ ಪ್ರವಾಹ ಎದುರಿಸಲು ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸಿಲ್ದಾರ್ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ದಿನದ ೨೪ ಗಂಟೆಗಳ ಕಾಲವೂ ಜಾಗೃತರಾಗಿದ್ದು, ತಾಲ್ಲೂಕಿನಾದ್ಯಂತ ಯಾವುದೇ ರೀತಿಯಲ್ಲಿ ಪ್ರಕೃತಿ ವಿಕೋಪದ ಅನಾಹುತಗಳಾದರೆ ತಕ್ಷಣ ಸ್ಪಂದಿಸಬೇಕು ಎಂದು ಎಲ್ಲರಿಗೂ ಸೂಚಿಸಲಾಗಿದೆ. ತಾಲ್ಲೂಕು ಕಚೇರಿಯಲ್ಲಿ ಈಗಾಗಲೇ ದಿನವಿಡೀ ಕಾರ್ಯನಿರ್ವಹಿಸುವ ಸಹಾಯವಾಣಿ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

” ಆರೋಗ್ಯ ಇಲಾಖೆಯ ಸಿಬ್ಬಂದಿ ಈಗಾಗಲೇ ಮನೆ ಮನೆಗೆ ತೆರಳಿ ಮನೆಗಳ ಸುತ್ತ ನೀರು ಶೇಖರಣೆಯಾಗದಂತೆ ಜಾಗೃತಿ ಮೂಡಿಸಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಗ್ರಾಮಗಳಿಗೆ ತೆರಳಿರುವ ಆರೋಗ್ಯ ಸಿಬ್ಬಂದಿ ಅಲ್ಲೆಲ್ಲ ಲಾರ್ವಾ ಪರೀಕ್ಷೆ ನಡೆಸಿದ್ದು, ಸಾರ್ವಜನಿಕರು ಕುದಿಸಿ ಅರಿಸಿದ ನೀರನ್ನೇ ಬಳಕೆ ಮಾಡಬೇಕು ಎಂದು ತಿಳಿಸಲಾಗಿದೆ.”

-ಈಶ್ವರ್, ತಾಲ್ಲೂಕು ಆರೋಗ್ಯಾಧಿಕಾರಿ

” ಮಳೆಗಾಲದಲ್ಲಿ ಸಿಡಿಲು ಬಡಿತ ಸಾಮಾನ್ಯವಾಗಿದ್ದು, ಆ ಸಮಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಪ್ರವಹಿಸುವ ಕಂಬಗಳು, ಮಳೆ-ಗಾಳಿಗೆ ಸಿಲುಕಿ ತುಂಡಾಗಿ ಬಿದ್ದ ವಿದ್ಯುತ್ ತಂತಿಗಳಿಂದ ದೂರ ಇರಬೇಕು ಎಂದು ಸಾರ್ವಜನಿಕರಲ್ಲಿ ಈಗಾಗಲೇ ಮನವಿ ಮಾಡಲಾಗಿದೆ. ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ನಮ್ಮ ಸಿಬ್ಬಂದಿ ಸಜ್ಜಾಗಿದ್ದಾರೆ.”

-ದೇವರಾಜ್, ಸೆಸ್ಕ್ ಅಧಿಕಾರಿ, ನಂಜನಗೂಡು

” ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಈಗಾಗಲೇ ೪೫ ಗ್ರಾಪಂಗಳ ೩೩೪ ಕೊಳವೆಬಾವಿಗಳ ನೀರನ್ನು ಶೇಖರಿಸಿ ಪ್ರಯೋಗಾಲಯಕ್ಕೆ ಕಳಿಸಿ, ನೀರಿನ ಗುಣಮಟ್ಟದ ಕುರಿತು ದೃಢೀಕರಿಸಲಾಗಿದೆ. ಅನಗತ್ಯವಾಗಿ ನೀರು ನಿಲ್ಲುವ ಸ್ಥಳಗಳಲ್ಲಿ ಕಸ-ಕಡ್ಡಿಗಳು ಶೇಖರಣೆಯಾಗದಂತೆ ನೋಡಿಕೊಳ್ಳಲು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.”

-ಜೆರಾಲ್ಡ್ ರಾಜೇಶ್, ಕಾರ್ಯನಿರ್ವಹಣಾಧಿಕಾರಿ, ತಾಪಂ

” ಕಬಿನಿ ಜಲಾಶಯದಿಂದ ಹೊರಬಿಡುವ ನೀರಿನ ಪ್ರಮಾಣವನ್ನು ಅವಲಂಬಿಸಿರುವುದರಿಂದ ಜಲಾಶಯದಿಂದ ಬಿಡಬಹುದಾದ ನೀರಿನ ಪ್ರಮಾಣವನ್ನು ಆಧರಿಸಿ ನದಿ ಪಾತ್ರದ ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತಾಲ್ಲೂಕು ಆಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ನದಿಪಾತ್ರದಲ್ಲಿ ಈಗಾಗಲೇ ತುರ್ತು ಸಂದರ್ಭಗಳನ್ನು ಎದುರಿಸಲು ದೋಣಿಗಳನ್ನು ಕೂಡ ಸಜ್ಜುಗೊಳಿಸಲಾಗಿದೆ. ನೀರಾವರಿ ಇಲಾಖೆಯೊಂದಿಗೆ ಕಂದಾಯ ಇಲಾಖೆ ಸದಾ ಸಂಪರ್ಕದಲ್ಲಿದ್ದು, ಜಲಾಶಯದಿಂದ ಹೊರಬಿಡುವ ನೀರಿನ ಮೇಲೆ ನಿಗಾ ವಹಿಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.”

-ಶಿವಕುಮಾರ್ ಕ್ಯಾಸನೂರು, ತಹಸಿಲ್ದಾರ್

ಆಂದೋಲನ ಡೆಸ್ಕ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 mins ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

31 mins ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

1 hour ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

1 hour ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

2 hours ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

2 hours ago