Andolana originals

ಕಪಿಲೆಯ ಪ್ರವಾಹದ ಅನಾಹುತ ಎದುರಿಸಲು ಸನ್ನದ್ಧ

ಶ್ರೀಧರ್ ಆರ್.ಭಟ್ಟ

ನಂಜನಗೂಡು: ದಿನದ ೨೪ ಗಂಟೆಗಳೂ ಜಾಗೃತವಾಗಿರಲು ಅಧಿಕಾರಿಗಳಿಗೆ ತಹಸಿಲ್ದಾರ್ ತಾಕೀತು

ನಂಜನಗೂಡು: ಪಕ್ಕದ ರಾಜ್ಯ ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರು ಪ್ರವಾಹೋಪಾದಿಯಲ್ಲಿ ಕಪಿಲಾ ನದಿಯಲ್ಲಿ ಹರಿದು ಬರುವುದರಿಂದ ಅದನ್ನು ಎದುರಿಸಲು ತಾಲ್ಲೂಕು ಆಡಳಿತ ಸರ್ವಸನ್ನದ್ಧವಾಗಿದೆ.

ನಂಜನಗೂಡು ಹಾಗೂ ವರುಣ ವಿಧಾನಸಭಾ ಕ್ಷೇತ್ರ ಗಳ ವ್ಯಾಪ್ತಿಯಲ್ಲಿನ ೪೫ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಮಳೆ ಹಾನಿಯಿಂದಾಗುವ ಅನಾಹುತ ಎದುರಿಸಲು ಈಗಾಗಲೇ ೩ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಮತ್ತು ಕಂದಾಯ ಅಧಿಕಾರಿಗಳ ಸಭೆ ನಡೆಸಿ ಮಳೆ ಹಾನಿ ಹಾಗೂ ಪ್ರವಾಹ ಎದುರಿಸಲು ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸಿಲ್ದಾರ್ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ದಿನದ ೨೪ ಗಂಟೆಗಳ ಕಾಲವೂ ಜಾಗೃತರಾಗಿದ್ದು, ತಾಲ್ಲೂಕಿನಾದ್ಯಂತ ಯಾವುದೇ ರೀತಿಯಲ್ಲಿ ಪ್ರಕೃತಿ ವಿಕೋಪದ ಅನಾಹುತಗಳಾದರೆ ತಕ್ಷಣ ಸ್ಪಂದಿಸಬೇಕು ಎಂದು ಎಲ್ಲರಿಗೂ ಸೂಚಿಸಲಾಗಿದೆ. ತಾಲ್ಲೂಕು ಕಚೇರಿಯಲ್ಲಿ ಈಗಾಗಲೇ ದಿನವಿಡೀ ಕಾರ್ಯನಿರ್ವಹಿಸುವ ಸಹಾಯವಾಣಿ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

” ಆರೋಗ್ಯ ಇಲಾಖೆಯ ಸಿಬ್ಬಂದಿ ಈಗಾಗಲೇ ಮನೆ ಮನೆಗೆ ತೆರಳಿ ಮನೆಗಳ ಸುತ್ತ ನೀರು ಶೇಖರಣೆಯಾಗದಂತೆ ಜಾಗೃತಿ ಮೂಡಿಸಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಗ್ರಾಮಗಳಿಗೆ ತೆರಳಿರುವ ಆರೋಗ್ಯ ಸಿಬ್ಬಂದಿ ಅಲ್ಲೆಲ್ಲ ಲಾರ್ವಾ ಪರೀಕ್ಷೆ ನಡೆಸಿದ್ದು, ಸಾರ್ವಜನಿಕರು ಕುದಿಸಿ ಅರಿಸಿದ ನೀರನ್ನೇ ಬಳಕೆ ಮಾಡಬೇಕು ಎಂದು ತಿಳಿಸಲಾಗಿದೆ.”

-ಈಶ್ವರ್, ತಾಲ್ಲೂಕು ಆರೋಗ್ಯಾಧಿಕಾರಿ

” ಮಳೆಗಾಲದಲ್ಲಿ ಸಿಡಿಲು ಬಡಿತ ಸಾಮಾನ್ಯವಾಗಿದ್ದು, ಆ ಸಮಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಪ್ರವಹಿಸುವ ಕಂಬಗಳು, ಮಳೆ-ಗಾಳಿಗೆ ಸಿಲುಕಿ ತುಂಡಾಗಿ ಬಿದ್ದ ವಿದ್ಯುತ್ ತಂತಿಗಳಿಂದ ದೂರ ಇರಬೇಕು ಎಂದು ಸಾರ್ವಜನಿಕರಲ್ಲಿ ಈಗಾಗಲೇ ಮನವಿ ಮಾಡಲಾಗಿದೆ. ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ನಮ್ಮ ಸಿಬ್ಬಂದಿ ಸಜ್ಜಾಗಿದ್ದಾರೆ.”

-ದೇವರಾಜ್, ಸೆಸ್ಕ್ ಅಧಿಕಾರಿ, ನಂಜನಗೂಡು

” ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಈಗಾಗಲೇ ೪೫ ಗ್ರಾಪಂಗಳ ೩೩೪ ಕೊಳವೆಬಾವಿಗಳ ನೀರನ್ನು ಶೇಖರಿಸಿ ಪ್ರಯೋಗಾಲಯಕ್ಕೆ ಕಳಿಸಿ, ನೀರಿನ ಗುಣಮಟ್ಟದ ಕುರಿತು ದೃಢೀಕರಿಸಲಾಗಿದೆ. ಅನಗತ್ಯವಾಗಿ ನೀರು ನಿಲ್ಲುವ ಸ್ಥಳಗಳಲ್ಲಿ ಕಸ-ಕಡ್ಡಿಗಳು ಶೇಖರಣೆಯಾಗದಂತೆ ನೋಡಿಕೊಳ್ಳಲು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.”

-ಜೆರಾಲ್ಡ್ ರಾಜೇಶ್, ಕಾರ್ಯನಿರ್ವಹಣಾಧಿಕಾರಿ, ತಾಪಂ

” ಕಬಿನಿ ಜಲಾಶಯದಿಂದ ಹೊರಬಿಡುವ ನೀರಿನ ಪ್ರಮಾಣವನ್ನು ಅವಲಂಬಿಸಿರುವುದರಿಂದ ಜಲಾಶಯದಿಂದ ಬಿಡಬಹುದಾದ ನೀರಿನ ಪ್ರಮಾಣವನ್ನು ಆಧರಿಸಿ ನದಿ ಪಾತ್ರದ ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತಾಲ್ಲೂಕು ಆಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ನದಿಪಾತ್ರದಲ್ಲಿ ಈಗಾಗಲೇ ತುರ್ತು ಸಂದರ್ಭಗಳನ್ನು ಎದುರಿಸಲು ದೋಣಿಗಳನ್ನು ಕೂಡ ಸಜ್ಜುಗೊಳಿಸಲಾಗಿದೆ. ನೀರಾವರಿ ಇಲಾಖೆಯೊಂದಿಗೆ ಕಂದಾಯ ಇಲಾಖೆ ಸದಾ ಸಂಪರ್ಕದಲ್ಲಿದ್ದು, ಜಲಾಶಯದಿಂದ ಹೊರಬಿಡುವ ನೀರಿನ ಮೇಲೆ ನಿಗಾ ವಹಿಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.”

-ಶಿವಕುಮಾರ್ ಕ್ಯಾಸನೂರು, ತಹಸಿಲ್ದಾರ್

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

13 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

15 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

17 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

17 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

18 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

19 hours ago