Andolana originals

ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ

ಕಾಂಗೀರ ಬೋಪಣ್ಣ

ಮಣ್ಣು ಅಗೆದಿರುವುದರಿಂದ ಸಮೀಪದ ಮನೆಗಳು ಕುಸಿಯುವ ಭೀತಿ; ಸೂಕ್ತ ಕ್ರಮಕ್ಕೆ ನಿವಾಸಿಗಳ ಒತ್ತಾಯ

ವಿರಾಜಪೇಟೆ: ಪುರಸಭೆಯ ಪರವಾನಗಿ ಪಡೆಯದೆ ವ್ಯಕ್ತಿಯೊಬ್ಬರು ಕಟ್ಟಡ ನಿರ್ಮಾಣಕ್ಕೆ ಮಣ್ಣು ಅಗೆದ ಪರಿಣಾಮ ಸಮೀಪದ ಮನೆಗಳು ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪಟ್ಟಣದ ಎಫ್‌ಎಂಸಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ವ್ಯಕ್ತಿಯೊಬ್ಬರು ೧೦ ಸೆಂಟ್ ಜಾಗ ಖರೀದಿಸಿ ಆ ಜಾಗದಲ್ಲಿ ಬೃಹತ್ ಕಟ್ಟಡವನ್ನು ನಿರ್ಮಿಸಲು ಮೂರು ತಿಂಗಳಿನಿಂದ ಕಾಮಗಾರಿ ನಡೆಸುತ್ತಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ಜೆಸಿಬಿಯಂತ್ರ ಬಳಸಿ ೧೦ರಿಂದ ೧೨ ಅಡಿ ಅಳದ ಗುಂಡಿ ತೆಗೆದ ಕಾರಣ ಸಮೀಪದ ಮನೆಗೆ ಹಾನಿಯಾಗಿದೆ. ಜೊತೆಗೆ ಪಿಲ್ಲರ್ಗಾಗಿ ಮತ್ತೆ ಏಳೆಂಟು ಅಡಿ ಅಳ ಅಗೆದ ಕಾರಣ ಒಟ್ಟು ೨೦ ಅಡಿ ಗುಂಡಿ ಮಾಡಲಾಗಿದೆ. ಇಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಮಣ್ಣು ತೆಗೆದಿರುವುದರಿಂದ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸಮೀಪದ ಪುಖರಾಜ್ ಚೌಧರಿ ಎಂಬವರ ಮನೆಗೆ ಹಾನಿಯಾಗಿದ್ದು ಅಪಾಯ ಸ್ಥಿತಿಯಲ್ಲಿದೆ.

ಕಾಮಗಾರಿ ನಡೆಯುತ್ತಿರುವ ಸ್ಥಳ ಮುಖ್ಯ ರಸ್ತೆ ಒತ್ತಿನಲ್ಲಿರುವುದರಿಂದ ಚರಂಡಿಯ ನೀರು ಕಾಮಗಾರಿ ಸ್ಥಳಕ್ಕೆ ನುಗ್ಗಿ ಸುತ್ತಲಿನ ಪ್ರದೇಶದಲ್ಲಿ ಭಾರಿ ನೀರು ನಿಂತು ತೇವಾಂಶದಿಂದ ಕೂಡಿದೆ. ಗುಂಡಿಯಲ್ಲಿ ೬ ಅಡಿವರೆಗೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಒತ್ತಿನ ಹಳೆ ಕಟ್ಟಡಗಳು ಕುಸಿದು ಬಿದ್ದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯರಾದ ಪುಖರಾಜ್ ಚೌಧರಿ, ಎಫ್‌ಎಂಸಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವಂತೆ ೨೦೦೬ರಲ್ಲಿ ನಾನು ಬ್ಲಾಕ್ ಸಂಖ್ಯೆ ೫, ಸರ್ವೆ ನಂಬರ್ ೮೯/೧ ರಲ್ಲಿ ನಾಲ್ಕೂವರೆ ಸೆಂಟ್ ಜಾಗದಲ್ಲಿ ವಾಸದ ಮನೆ ನಿರ್ಮಿಸಿದ್ದೇನೆ. ಅಲ್ಲದೆ ನನ್ನ ಮನೆಗೆ ಹೋಗಿ ಬರಲು ನಾಲ್ಕು ಅಡಿ ಜಾಗವನ್ನು ಬಿಟ್ಟಿದ್ದೇನೆ. ಆದರೆ, ಸಮೀಪದಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮಣ್ಣು ಅಗೆದಿರುವುದರಿಂದ ಮನೆ ಕುಸಿಯುವ  ಭೀತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲು ನಗರ ಅಭಿವೃದ್ಧಿ ಪ್ರಾಧಿಕಾರದಿಂದ ಅಗತ್ಯ ಪರವಾನಗಿ ಪಡೆಯಬೇಕು. ಪುರಸಭೆಯಿಂದಾದರೂ ಅನುಮತಿ ಪಡೆಯಬೇಕಾಗುತ್ತದೆ. ಆದರೆ ಯಾವ ಪರವಾನಗಿಯನ್ನೂ ಪಡೆಯದೆ ಕಟ್ಟಡ ನಿರ್ಮಿಸು ತ್ತಿದ್ದರೂ ಪುರಸಭೆ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಅನಾಹುತ ಸಂಭವಿಸಿದಲ್ಲಿ ಪುರಸಭೆಯೇ ಹೊಣೆ ಯಾಗಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

” ಈ ಕಟ್ಟಡ ಕಾಮಗಾರಿಗೆ ಪುರಸಭೆಯಿಂದ ಯಾವುದೇ ಪರವಾನಗಿ ಪಡೆದುಕೊಂಡಿಲ್ಲ. ಅಕ್ಕ ಪಕ್ಕದ ಮನೆಗಳಿಗೆಹಾನಿ  ಉಂಟಾಗದ ರೀತಿ ತಮ್ಮ ಸ್ವಂತ ಖರ್ಚಿನಿಂದ ಅಗತ್ಯ ತಡೆ ಗೋಡೆ ನಿರ್ಮಿಸಲು ಮಾತ್ರ ಪುರಸಭೆ ಅನುಮತಿ ನೀಡಿದೆ. ಈ ಸಂಬಂಧ ಪುರಸಭೆಯಿಂದ ನೋಟಿಸ್ ಜಾರಿ ಮಾಡಿ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ.”

ನಾಚಪ್ಪ, ಪುರಸಭೆಯ ಮುಖ್ಯಾಧಿಕಾರಿ

” ನನ್ನ ಮನೆ ಅಪಾಯ ಸ್ಥಿತಿಯಲ್ಲಿರುವುದರಿಂದ ಸದ್ಯಕ್ಕೆ ವಸತಿಗೃಹವೊಂದರಲ್ಲಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿದ್ದೇನೆ. ಈ ಕಟ್ಟಡ ನಿರ್ಮಾಣದ ಬಗ್ಗೆ ಸುತ್ತಮುತ್ತಲಿನ ಪ್ರದೇಶದವರು ಪುರಸಭೆಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಪ್ರಭಾವಿ ವ್ಯಕ್ತಿಯೊಬ್ಬರು ಅವೈಜ್ಞಾನಿಕ ಕಟ್ಟಡ ಕಾಮಗಾರಿಯನ್ನು ಬೇನಾಮಿ ಹೆಸರಿನಲ್ಲಿ ನಡೆಸುತ್ತಿರುವ ಆರೋಪವೂ ಕೇಳಿ ಬಂದಿದೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇನೆ. ಜಿಲ್ಲಾಽಕಾರಿಗಳು, ಶಾಸಕರು ಇದನ್ನು ಗಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು.”

ಪುಖರಾಜ್ ಚೌಧರಿ, ಸ್ಥಳೀಯ ನಿವಾಸಿ

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

36 mins ago

ಇರಾನ್‌ನ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

2 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

2 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

3 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

3 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

3 hours ago