Andolana originals

ಬೆಲೆ ಏರಿಕೆ; ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ

ವಿದ್ಯುತ್‌, ಹಾಲು, ಟೋಲ್‌, ಮುದ್ರಾಂಕ, ಟಿಸಿ ಶುಲ್ಕ ಹೆಚ್ಚಳಕ್ಕೆ ಖಂಡನೆ

-ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಬಡವರ್ಗದ ಜನರ ಸುಲಿಗೆ ಮಾಡುತ್ತಿದೆ ಎಂದು ಜನಸಾಮಾನ್ಯರು ಆಕ್ರೋಶ ಹೊರಹಾಕಿದ್ದಾರೆ.

ಉಪನೋಂದಣಿ ಶುಲ್ಕ, ಬಸ್ ಪ್ರಯಾಣ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ, ಪಹಣಿ, ಟಿಸಿ ಖರೀದಿ, ಹಾಲಿನ ದರಗಳನ್ನು ಹೆಚ್ಚಿಸಿರುವುದರಿಂದ ಜನರು, ರೈತರಿಗೆ ಹೊರೆಯಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಮಂಗಳವಾರದಿಂದ ಮುದ್ರಾಂಕ ಶುಲ್ಕ 50 ರೂ. ನಿಂದ 500 ರೂ. ವರೆಗೆ ಏರಿಕೆಯಾಗುವುದರಿಂದ ಅಫಿಡವಿಟ್ ಶುಲ್ಕ 20
ರೂ.ನಿಂದ 100 ರೂ.ವರೆಗೆ ಹೆಚ್ಚಳವಾಗಲಿದೆ. ಟಿಸಿ ಪರಿಶೀಲನೆ ನವೀಕರಣ ಶುಲ್ಕ ಸಾವಿರ ರೂ. ಒಳಗಿದ್ದದ್ದು ಈಗ 8 ಸಾವಿರ ರೂ.
ವರೆಗೂ ಏರಿಕೆ ಯಾಗಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ.

ವಿದ್ಯುತ್ ದರ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಇನ್ನೊಂದು ಕಡೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯನ್ನು ಕೂಡ ಮಾಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಸರ್ಕಾರ ಬೆಲೆ ಏರಿಕೆ ಮಾಡುತ್ತ ಜನರ ಜೀವ ಹಿಂಡುತ್ತಿದೆ. ಜಮೀನು ಮಾರಲು, ಖರೀದಿಸಲು ದುಪ್ಪಟ್ಟು ಬೆಲೆ, ಸಣ್ಣಪುಟ್ಟದಕ್ಕೂ ಬಡವರಿಗೆ ವಿವಿಧ ಇಲಾಖೆಗಳಲ್ಲಿ ಅಫಿಡವಿಟ್ ಕೇಳುತ್ತಾರೆ. ಈಗ ಮುದ್ರಾಂಕ ಶುಲ್ಕ ಹೆಚ್ಚಳವಾಗಿದೆ. ಟಿಸಿ ನವೀಕರಣ ಶುಲ್ಕ ಏರಿಕೆ ಮಾಡಿರುವುದರಿಂದ ರೈತರಿಗೆ ತೊಂದರೆಯಾಗಿದೆ. ಟೋಲ್ ಹೆಚ್ಚಳದಿಂದ ಮೈಸೂರಿಗೆ ಹೋಗಲು ಬಸ್ ಪ್ರಯಾಣ ದರದಷ್ಟೇ ಟೋಲ್ ಕಟ್ಟಬೇಕಿದೆ. ಒಟ್ಟಾರೆ ರಾಜ್ಯವನ್ನು ದಿವಾಳಿ ಮಾಡುವತ್ತ ಸರ್ಕಾರ ಹೆಜ್ಜೆ ಹಾಕಿದೆ.

-ಎಚ್.ಎಂ.ನಂದೀಶ್, ಪ್ರಗತಿಪರ ರೈತ, ಹಂಗಳ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಉಚಿತ ಯೋಜನೆ ಆಶ್ವಾಸನೆ ನೀಡಿ ಬೆಲೆ ಏರಿಕೆ ಮಾಡಿ ಕೂಲಿ ಕಾರ್ಮಿಕರು, ಬಡವರು ಬದುಕದಂತೆ ಮಾಡಿದೆ. ಇದು ಬಡವರ ವಿರೋಧಿ ಸರ್ಕಾರವಾಗಿದ್ದು, ಹಾಲು, ವಿದ್ಯುತ್ ದರ ಏರಿಕೆ ಮಾಡಿ ತೊಂದರೆ ನೀಡುತ್ತಿದೆ.

-ಮುನೀರ್ ಪಾಷ, ಕರುನಾಡು ಯುವಶಕ್ತಿ ಸಂಘಟನೆ ಅಧ್ಯಕ್ಷ.

 

ಆಂದೋಲನ ಡೆಸ್ಕ್

Recent Posts

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

25 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

41 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

1 hour ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

1 hour ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

3 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

3 hours ago