Andolana originals

ಬೆಲೆ ಏರಿಕೆ; ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ

ವಿದ್ಯುತ್‌, ಹಾಲು, ಟೋಲ್‌, ಮುದ್ರಾಂಕ, ಟಿಸಿ ಶುಲ್ಕ ಹೆಚ್ಚಳಕ್ಕೆ ಖಂಡನೆ

-ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಬಡವರ್ಗದ ಜನರ ಸುಲಿಗೆ ಮಾಡುತ್ತಿದೆ ಎಂದು ಜನಸಾಮಾನ್ಯರು ಆಕ್ರೋಶ ಹೊರಹಾಕಿದ್ದಾರೆ.

ಉಪನೋಂದಣಿ ಶುಲ್ಕ, ಬಸ್ ಪ್ರಯಾಣ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ, ಪಹಣಿ, ಟಿಸಿ ಖರೀದಿ, ಹಾಲಿನ ದರಗಳನ್ನು ಹೆಚ್ಚಿಸಿರುವುದರಿಂದ ಜನರು, ರೈತರಿಗೆ ಹೊರೆಯಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಮಂಗಳವಾರದಿಂದ ಮುದ್ರಾಂಕ ಶುಲ್ಕ 50 ರೂ. ನಿಂದ 500 ರೂ. ವರೆಗೆ ಏರಿಕೆಯಾಗುವುದರಿಂದ ಅಫಿಡವಿಟ್ ಶುಲ್ಕ 20
ರೂ.ನಿಂದ 100 ರೂ.ವರೆಗೆ ಹೆಚ್ಚಳವಾಗಲಿದೆ. ಟಿಸಿ ಪರಿಶೀಲನೆ ನವೀಕರಣ ಶುಲ್ಕ ಸಾವಿರ ರೂ. ಒಳಗಿದ್ದದ್ದು ಈಗ 8 ಸಾವಿರ ರೂ.
ವರೆಗೂ ಏರಿಕೆ ಯಾಗಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ.

ವಿದ್ಯುತ್ ದರ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಇನ್ನೊಂದು ಕಡೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯನ್ನು ಕೂಡ ಮಾಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಸರ್ಕಾರ ಬೆಲೆ ಏರಿಕೆ ಮಾಡುತ್ತ ಜನರ ಜೀವ ಹಿಂಡುತ್ತಿದೆ. ಜಮೀನು ಮಾರಲು, ಖರೀದಿಸಲು ದುಪ್ಪಟ್ಟು ಬೆಲೆ, ಸಣ್ಣಪುಟ್ಟದಕ್ಕೂ ಬಡವರಿಗೆ ವಿವಿಧ ಇಲಾಖೆಗಳಲ್ಲಿ ಅಫಿಡವಿಟ್ ಕೇಳುತ್ತಾರೆ. ಈಗ ಮುದ್ರಾಂಕ ಶುಲ್ಕ ಹೆಚ್ಚಳವಾಗಿದೆ. ಟಿಸಿ ನವೀಕರಣ ಶುಲ್ಕ ಏರಿಕೆ ಮಾಡಿರುವುದರಿಂದ ರೈತರಿಗೆ ತೊಂದರೆಯಾಗಿದೆ. ಟೋಲ್ ಹೆಚ್ಚಳದಿಂದ ಮೈಸೂರಿಗೆ ಹೋಗಲು ಬಸ್ ಪ್ರಯಾಣ ದರದಷ್ಟೇ ಟೋಲ್ ಕಟ್ಟಬೇಕಿದೆ. ಒಟ್ಟಾರೆ ರಾಜ್ಯವನ್ನು ದಿವಾಳಿ ಮಾಡುವತ್ತ ಸರ್ಕಾರ ಹೆಜ್ಜೆ ಹಾಕಿದೆ.

-ಎಚ್.ಎಂ.ನಂದೀಶ್, ಪ್ರಗತಿಪರ ರೈತ, ಹಂಗಳ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಉಚಿತ ಯೋಜನೆ ಆಶ್ವಾಸನೆ ನೀಡಿ ಬೆಲೆ ಏರಿಕೆ ಮಾಡಿ ಕೂಲಿ ಕಾರ್ಮಿಕರು, ಬಡವರು ಬದುಕದಂತೆ ಮಾಡಿದೆ. ಇದು ಬಡವರ ವಿರೋಧಿ ಸರ್ಕಾರವಾಗಿದ್ದು, ಹಾಲು, ವಿದ್ಯುತ್ ದರ ಏರಿಕೆ ಮಾಡಿ ತೊಂದರೆ ನೀಡುತ್ತಿದೆ.

-ಮುನೀರ್ ಪಾಷ, ಕರುನಾಡು ಯುವಶಕ್ತಿ ಸಂಘಟನೆ ಅಧ್ಯಕ್ಷ.

 

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

5 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

5 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

6 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

7 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

7 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

8 hours ago