ತಗಡೂರು ವಸತಿ ಶಾಲೆಯ ಮಕ್ಕಳ ಪ್ರತಿಭಟನೆಗೆ ಸಂದ ಜಯ
ನಂಜನಗೂಡು: ತಾಲ್ಲೂಕಿನ ತಗಡೂರಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳ ನ್ಯಾಯಯುತವಾದ ಪ್ರತಿಭಟನೆಗೆ ಮಣಿದ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ವಸತಿ ನಿಲಯದ ಪ್ರಾಂಶು ಪಾಲರಾದ ವಸಂತ ಕುಮಾರಿ, ವಸತಿ ನಿಲಯದ ಪಾಲಕ ಮಹದೇವಪ್ಪ ಹಾಗೂ ಗಣಿತ ಉಪನ್ಯಾಸಕ ಮಂಜುನಾಥ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದು, ಅತಿಥಿ ಉಪನ್ಯಾಸಕ ಗುರುಸ್ವಾಮಿಯವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಸೂಚಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನರ ಸ್ವಕ್ಷೇತ್ರ ವರುಣ ವ್ಯಾಪ್ತಿಯಲ್ಲಿನ ವಸತಿ ಶಾಲೆಯ ಮಕ್ಕಳೇ ಪ್ರಾಧ್ಯಾಪಕರು ಪ್ರಾಂಶುಪಾಲರ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಈ ಮೂವರನ್ನು ಅಮಾನತ್ತುಗೊಳಿಸಿದೆ.
ಉಪವಿಭಾಗಾಧಿಕಾರಿ ಆಶಪ್ಪ ಹಾಗೂ ತಹಸಿಲ್ದಾರ್ ಶಿವಕುಮಾರ ಕ್ಯಾಸನೂರು ಕಳಿಸಿದ ತುರ್ತು ವರದಿಯ ಮೇರೆಗೆ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯ ನಿರ್ವಾಹಕ ನಿರ್ದೇಶಕ ಕಾಂತರಾಜು, ತಗಡೂರಿನ ವಸತಿ ಶಾಲೆಯ ಪ್ರಾಂಶುಪಾಲರಾದ ವಸಂತ ಕುಮಾರಿ, ನಿಲಯ ಪಾಲಕ ಮಹದೇವಪ್ಪ, ಗಣಿತ ಶಿಕ್ಷಕ ಮಂಜುನಾಥ ಅವರನ್ನು ಅಮಾನತ್ತು ಗೊಳಿಸಿದ್ದಾರೆ.
ತಾತ್ಕಾಲಿಕವಾಗಿ ಶಾಲೆಯ ಹಿರಿಯ ಉಪನ್ಯಾಸಕರಿಗೆ ಅಧಿಕಾರ ವಹಿಸಿಕೊಳ್ಳುವಂತೆ ಸೋಮವಾರವೇ ಆದೇಶ ಹೊರಡಿಸಿದೆ. ಮಕ್ಕಳ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಒಳಗಾಗಿರುವ ಅತಿಥಿ ಉಪನ್ಯಾಸಕ ಗುರುಸ್ವಾಮಿಯವರನ್ನು ಶಾಲೆಯ ಕರ್ತವ್ಯ ಬಿಡುಗಡೆಗೊಳಿಸುವಂತೆ ಮೌಖಿಕ ಸೂಚನೆಯೂ ಹಿರಿಯ ಅಧಿಕಾರಿಗಳಿಂದ ಬಂದಿದೆ ಎನ್ನಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…