ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ತೀರ್ಮಾನಿಸಿರುವುದಾಗಿ ವರದಿಯಾಗಿದ್ದು, ಇದೊಂದು ಒಳ್ಳೆಯ ಬೆಳವಣಿಗೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ನಿರ್ಮಾಣವಾಗಬೇಕು ಎಂಬುದು ಇಲ್ಲಿನ ಜನರ ಬಹುದಿನಗಳ ಕನಸಾಗಿತ್ತು. ಇದೀಗ ಸಚಿವಾಲಯ ರಚನೆ ಮಾಡಲು ತೀರ್ಮಾನಿಸಿದ್ದು, ಅದಕ್ಕೆ ತಕ್ಕಂತೆ ಅನುದಾನವನ್ನೂ ನೀಡುವುದು ಅಗತ್ಯ.
ಸಂವಿಧಾನದಲ್ಲಿ 371 ಜೆ ಸೇರ್ಪಡೆ ಮಾಡಿದ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಿದ್ದೇ ಆದಲ್ಲಿ ಕಲ್ಯಾಣ ಕರ್ನಾಟಕದ ಪ್ರಗತಿಯ ಹಾದಿ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಹೊಂದಾಣಿಕೆಯಿಂದ ಮುನ್ನಡೆಯುವುದು ಅಗತ್ಯ.
ಇನ್ನು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದರ ಜತೆಗೆ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುವ ಹಾಗೆಯೇ ಕಲಬುರಗಿಯಲ್ಲೂ ಅಧಿವೇಶನ ನಡೆಸುವುದರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಅಲ್ಲದೆ ರಾಜ್ಯವನ್ನು ಉತ್ತರ ಮತ್ತು ದಕ್ಷಿಣ ಎಂದು ಇಬ್ಬಾಗ ಮಾಡುವ ಬದಲು ಎಲ್ಲ ಪ್ರದೇಶಗಳ ಸಾಂಸ್ಕೃತಿಕ ಏಕೀಕರಣದೊಂದಿಗೆ ರಾಜ್ಯದ ಆರ್ಥಿಕ ಪ್ರಗತಿಯ ಜತೆ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸಬೇಕು.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…