ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ತೀರ್ಮಾನಿಸಿರುವುದಾಗಿ ವರದಿಯಾಗಿದ್ದು, ಇದೊಂದು ಒಳ್ಳೆಯ ಬೆಳವಣಿಗೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ನಿರ್ಮಾಣವಾಗಬೇಕು ಎಂಬುದು ಇಲ್ಲಿನ ಜನರ ಬಹುದಿನಗಳ ಕನಸಾಗಿತ್ತು. ಇದೀಗ ಸಚಿವಾಲಯ ರಚನೆ ಮಾಡಲು ತೀರ್ಮಾನಿಸಿದ್ದು, ಅದಕ್ಕೆ ತಕ್ಕಂತೆ ಅನುದಾನವನ್ನೂ ನೀಡುವುದು ಅಗತ್ಯ.
ಸಂವಿಧಾನದಲ್ಲಿ 371 ಜೆ ಸೇರ್ಪಡೆ ಮಾಡಿದ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಿದ್ದೇ ಆದಲ್ಲಿ ಕಲ್ಯಾಣ ಕರ್ನಾಟಕದ ಪ್ರಗತಿಯ ಹಾದಿ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಹೊಂದಾಣಿಕೆಯಿಂದ ಮುನ್ನಡೆಯುವುದು ಅಗತ್ಯ.
ಇನ್ನು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದರ ಜತೆಗೆ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುವ ಹಾಗೆಯೇ ಕಲಬುರಗಿಯಲ್ಲೂ ಅಧಿವೇಶನ ನಡೆಸುವುದರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಅಲ್ಲದೆ ರಾಜ್ಯವನ್ನು ಉತ್ತರ ಮತ್ತು ದಕ್ಷಿಣ ಎಂದು ಇಬ್ಬಾಗ ಮಾಡುವ ಬದಲು ಎಲ್ಲ ಪ್ರದೇಶಗಳ ಸಾಂಸ್ಕೃತಿಕ ಏಕೀಕರಣದೊಂದಿಗೆ ರಾಜ್ಯದ ಆರ್ಥಿಕ ಪ್ರಗತಿಯ ಜತೆ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸಬೇಕು.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…