ಕೆ. ಬಿ. ರಮೇಶನಾಯಕ
ಮೈಸೂರು: ಮುಡಾದಲ್ಲಿ ನಿವೇಶನದಾರರಿಗೆ ಖಾತೆ ಮಾಡಿಕೊಡುವುದನ್ನು ಸಂಪೂರ್ಣವಾಗಿ ನಿಲ್ಲಿಸಿ ಸ್ಥಳೀಯ ಸಂಸ್ಥೆಗಳಿಗೆ ಖಾಸಗಿ ಬಡಾವಣೆಗಳನ್ನು ಹಸ್ತಾಂತರ ಮಾಡಿದ ಮೇಲೆ ಮೈಸೂರು ನಗರಪಾಲಿಕೆ ಸೇರಿದಂತೆ ನಾಲ್ಕು ಪಪಂ, ಒಂದು ನಗರಸಭೆಯಲ್ಲಿ ಖಾತೆ ಪ್ರಕ್ರಿಯೆ ಜೋರಾಗಿದ್ದು, ಮೂರ್ನಾಲ್ಕು ವರ್ಷಗಳಿಂದ ಆದಾಯ ಇಲ್ಲದೆ ಸೊರಗಿದ್ದ ಸ್ಥಳೀಯ ಸಂಸ್ಥೆಗಳಿಗೆ ಸಂಪನ್ಮೂಲ ಕ್ರೋಢೀಕರಣಕ್ಕೆ ದಾರಿಯಾಗಿದೆ.
ಹೂಟಗಳ್ಳಿ ನಗರಸಭೆಯಾದ ಮೇಲೆ ಇದುವರೆಗೂ ೫೦ ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದರೆ, ನಾಲ್ಕು ಪಟ್ಟಣ ಪಂಚಾಯಿತಿಗಳಲ್ಲಿ ಕನಿಷ್ಠ ೨೫ ಕೋಟಿ ರೂ. ನಿಂದ ೪೦ ಕೋಟಿ ರೂ. ಗಳವರೆಗೆ ಆದಾಯ ಸಂಗ್ರಹವಾಗಿದೆ. ಈಗ ಮನೆಗಳು ಮತ್ತು ನಿವೇಶನಗಳಿಗೆ ಖಾತೆ ಪ್ರಕ್ರಿಯೆ ಆರಂಭಿಸಿರುವುದರಿಂದ ಮತ್ತಷ್ಟು ಆದಾಯದ ನಿರೀಕ್ಷೆ ಹೊಂದಲಾಗಿದೆ. ಮೈಸೂರು ನಗರದ ಹೊರವಲಯದ ಗ್ರಾಪಂಗಳನ್ನು ಮೇಲ್ದರ್ಜೇಗೇರಿಸಿ ಬೋಗಾದಿ, ಕಡಕೊಳ, ರಮ್ಮನಹಳ್ಳಿ, ಶ್ರೀರಾಂಪುರವನ್ನು ಪಟ್ಟಣ ಪಂಚಾಯಿತಿ, ಹೂಟಗಳ್ಳಿಯನ್ನು ನಗರಸಭೆಯನ್ನಾಗಿ ರಚಿಸಿ ಆಡಳಿತಾಽಕಾರಿಗಳನ್ನು ನೇಮಕ ಮಾಡಲಾಗಿತ್ತು.
ಪ್ರಾರಂಭದಲ್ಲಿ ಮೂಲಸೌಕರ್ಯ ಒದಗಿಸಲು ಅನು ದಾನದ ಕೊರತೆ ಎದುರಿಸುತ್ತಿದ್ದ ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ, ನೀರಿನ ತೆರಿಗೆ ಮೊದಲಾದ ಮೂಲಗಳಿಂದ ಆದಾಯ ಸಂಗ್ರಹಿಸಿಕೊಂಡು ನಿರ್ವಹಣೆ ಮಾಡುವಲ್ಲಿ ಸುಸ್ತಾಗಿದ್ದವು. ಇದರ ನಡುವೆ ಸರ್ಕಾರ ಒಂದಿಷ್ಟು ಅನುದಾನದಿಂದ ನೀಡಿದ್ದರಿಂದ ಅಗತ್ಯ ಸೌಕರ್ಯಗಳನ್ನು ಒದಗಿಸುವುದಕ್ಕೆ ಸೀಮಿತವಾಗಿತ್ತು. ಆದರೆ, ಮುಡಾ ಹಗರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮುಡಾ ಆಯುಕ್ತ ಎ. ಎನ್. ರಘುನಂದನ್ ಅವರು ಖಾತೆ ಮಾಡುವ ಪ್ರಕ್ರಿಯೆಗೆ ಬ್ರೇಕ್ ಹಾಕಿ, ಸ್ಥಳೀಯ ಸಂಸ್ಥೆಗಳಿಗೆ ಜವಾಬ್ದಾರಿ ವಹಿಸಿದ್ದರು.
೭೫೦ ಬಡಾವಣೆಗಳ ನಿವೇಶನಗಳಿಗೆ ಖಾತೆ: ಮುಡಾ ದಿಂದ ಅನುಮೋದನೆಗೊಂಡಿರುವ ೭೫೦ ಖಾಸಗಿ ಬಡಾವಣೆಗಳನ್ನು ಹಸ್ತಾಂತರಿಸುತ್ತಿದ್ದಂತೆ ಅರ್ಜಿದಾರರಿಗೆ ಖಾತೆ ಮಾಡಿಕೊಡುವ ಕೆಲಸ ನಡೆಯುತ್ತಿದೆ. ಅಂದಾಜಿನ ಪ್ರಕಾರ ಈತನಕ ೨೦ ಸಾವಿರ ನಿವೇಶನಗಳ ದಾಖಲೆಗಳನ್ನು ಬೋಗಾದಿ, ಕಡಕೊಳ, ರಮ್ಮನಹಳ್ಳಿ, ಶ್ರೀರಾಂಪುರವನ್ನು ಪಟ್ಟಣ ಪಂಚಾಯಿತಿ, ಹೂಟಗಳ್ಳಿ ನಗರಸಭೆಗೆ ಸಲ್ಲಿಸಿದ್ದು, ಬಾಕಿ ೨೫ ಸಾವಿರ ದಾಖಲೆಗಳನ್ನು ನಿತ್ಯ ರವಾನಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಲಾಗಿದೆ.
ದಿನಕ್ಕೆ ೪೦ ಖಾತೆ: ಖಾತೆಗಾಗಿ ಪ್ರತಿನಿತ್ಯ ನೂರಾರು ಅರ್ಜಿಗಳು ಸಲ್ಲಿಕೆಯಾದರೂ ದಿನಕ್ಕೆ ೪೦ ಖಾತೆಗಳನ್ನು ಮಾತ್ರ ಮಾಡಲು ಶಕ್ತವಾಗಿದೆ. -ಲಾನುಭವಿಯು ಕೊಡುವ ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಬೇಕು. ಹಾಗಾಗಿ ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ಶ್ರೀರಾಂಪುರ ಪಪಂ ಮುಖ್ಯಾಽಕಾರಿ ಸುರೇಶ್.
ಫಲಾನುಭವಿಗಳು ಅರ್ಜಿ ಸಲ್ಲಿಸಿದ ತಕ್ಷಣ ಸಿಬ್ಬಂದಿ ಮೇಲೆ ಒತ್ತಡ ಹೇರುತ್ತಾರೆ. ಕಾಯಲು ಸಿದ್ಧವಿಲ್ಲ ಎಂದು ಸಿಬ್ಬಂದಿಯೊಬ್ಬರು ಅಳಲು ತೋಡಿಕೊಂಡರು.
ದಾಖಲೆಗಳತ್ತ ನಿಗಾ: ಮುಡಾದಲ್ಲಿ ನಡೆದಿರುವ ನಕಲಿ ದಾಖಲೆಗಳ ಸೃಷ್ಟಿ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಸ್ಥಳೀಯ ಸಂಸ್ಥೆಗಳು ಅಕ್ರಮಕ್ಕೆ ದಾರಿಯಾಗದಂತೆ ನಿಗಾ ಇಟ್ಟಿದ್ದಾರೆ. ಖಾತೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನ ಪ್ರತಿಯೊಂದು ದಾಖಲೆಯೂ ನಿಖರವಾಗಿದ್ದರೆ ಮಾತ್ರ ಖಾತೆ ಮಾಡಿಕೊಡಲಾಗುತ್ತದೆ. ಇದರಿಂದಾಗಿ -ಲಾನುಭವಿ ಹೆಸರಿನಲ್ಲಿ ಮಧ್ಯವರ್ತಿಗಳ ಹಾವಳಿಗೂ ಕಡಿವಾಣಬಿದ್ದಿದೆ.
ಖಾತೆಗೆ ದಿನಕ್ಕೆ ನೂರು ಅರ್ಜಿಗಳು ಬಂದರೂ ನಾವು ೫೦ ಖಾತೆ ಮಾಡಲು ಟಾರ್ಗೆಟ್ ಇಟ್ಟುಕೊಂಡಿದ್ದೇವೆ. ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವುದಕ್ಕೆ ಸಮಯ ಹಿಡಿಯಲಿದೆ. ಖಾಸಗಿ ಬಡಾವಣೆಗಳ ಹಸ್ತಾಂತರವಾದ ಮೇಲೆ ವರ್ಕ್ಲೋಡ್ ಜಾಸ್ತಿಯಾಗಿದೆ. -ಸುರೇಶ್, ಮುಖ್ಯಾಧಿಕಾರಿ, ಶ್ರೀರಾಂಪುರ ಪಪಂ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…