Mysore
33
light rain

Social Media

ಬುಧವಾರ, 22 ಏಪ್ರಿಲ 2026
Light
Dark

ಸಮರ್ಪಕವಾಗಿ ನೀರು ಸರಬರಾಜು ಮಾಡಿ

dgp murder case

ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ ಕಡೆಯಿಂದ ನೀರು ತರುವುದು ಅನಿವಾರ್ಯವಾಗಿದ್ದು, ಅದಕ್ಕಾಗಿಯೇ ಒಂದೆರಡು ಗಂಟೆ ಸಮಯವನ್ನು ಮೀಸಲಿಡಬೇಕಾಗಿದೆ. ಈ ಬಗ್ಗೆ ವಾಣಿ ವಿಲಾಸ ನೀರು ಸರಬರಾಜು ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಲಿಖಿತವಾಗಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಕಂದಾಯವನ್ನು ಸಮರ್ಪಕವಾಗಿ ಪಾವತಿಸದಿದ್ದರೆ ಕೂಡಲೇ ಸಂಪರ್ಕವನ್ನು ಕಡಿತ ಮಾಡಲಾಗುತ್ತದೆ. ಆದರೆ ನಿಯಮಿತವಾಗಿ ನೀರಿನ ಕಂದಾಯವನ್ನು ಪ್ರತಿತಿಂಗಳು ಪಾವತಿಸುತ್ತಿದ್ದರೂ ಇಲ್ಲಿನ ನಿವಾಸಿಗಳಿಗೆ ನೀರಿನ ಬವಣೆ ತಪ್ಪಿಲ್ಲ. ಸಂಬಂಧಪಟ್ಟವರು ಕೂಡಲೇ ರಾಮಸ್ವಾಮಿ ವೃತ್ತದ ಸುತ್ತಮುತ್ತಲಿನ ಸಮೀಪವಿರುವ ಮನೆ ಹಾಗೂ ಕಚೇರಿಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.

-ಬಿ.ಎನ್.ಶಶಿಧರ, ಅಡ್ವಕೇಟ್, ಮೈಸೂರು

Tags:
error: Content is protected !!