Andolana originals

ಸಮರ್ಪಕವಾಗಿ ನೀರು ಸರಬರಾಜು ಮಾಡಿ

ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ ಕಡೆಯಿಂದ ನೀರು ತರುವುದು ಅನಿವಾರ್ಯವಾಗಿದ್ದು, ಅದಕ್ಕಾಗಿಯೇ ಒಂದೆರಡು ಗಂಟೆ ಸಮಯವನ್ನು ಮೀಸಲಿಡಬೇಕಾಗಿದೆ. ಈ ಬಗ್ಗೆ ವಾಣಿ ವಿಲಾಸ ನೀರು ಸರಬರಾಜು ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಲಿಖಿತವಾಗಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಕಂದಾಯವನ್ನು ಸಮರ್ಪಕವಾಗಿ ಪಾವತಿಸದಿದ್ದರೆ ಕೂಡಲೇ ಸಂಪರ್ಕವನ್ನು ಕಡಿತ ಮಾಡಲಾಗುತ್ತದೆ. ಆದರೆ ನಿಯಮಿತವಾಗಿ ನೀರಿನ ಕಂದಾಯವನ್ನು ಪ್ರತಿತಿಂಗಳು ಪಾವತಿಸುತ್ತಿದ್ದರೂ ಇಲ್ಲಿನ ನಿವಾಸಿಗಳಿಗೆ ನೀರಿನ ಬವಣೆ ತಪ್ಪಿಲ್ಲ. ಸಂಬಂಧಪಟ್ಟವರು ಕೂಡಲೇ ರಾಮಸ್ವಾಮಿ ವೃತ್ತದ ಸುತ್ತಮುತ್ತಲಿನ ಸಮೀಪವಿರುವ ಮನೆ ಹಾಗೂ ಕಚೇರಿಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.

-ಬಿ.ಎನ್.ಶಶಿಧರ, ಅಡ್ವಕೇಟ್, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

30 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

1 hour ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

1 hour ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

2 hours ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

2 hours ago

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

3 hours ago