ಓದುಗರ ಪತ್ರ
ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ ಕಡೆಯಿಂದ ನೀರು ತರುವುದು ಅನಿವಾರ್ಯವಾಗಿದ್ದು, ಅದಕ್ಕಾಗಿಯೇ ಒಂದೆರಡು ಗಂಟೆ ಸಮಯವನ್ನು ಮೀಸಲಿಡಬೇಕಾಗಿದೆ. ಈ ಬಗ್ಗೆ ವಾಣಿ ವಿಲಾಸ ನೀರು ಸರಬರಾಜು ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಲಿಖಿತವಾಗಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಕಂದಾಯವನ್ನು ಸಮರ್ಪಕವಾಗಿ ಪಾವತಿಸದಿದ್ದರೆ ಕೂಡಲೇ ಸಂಪರ್ಕವನ್ನು ಕಡಿತ ಮಾಡಲಾಗುತ್ತದೆ. ಆದರೆ ನಿಯಮಿತವಾಗಿ ನೀರಿನ ಕಂದಾಯವನ್ನು ಪ್ರತಿತಿಂಗಳು ಪಾವತಿಸುತ್ತಿದ್ದರೂ ಇಲ್ಲಿನ ನಿವಾಸಿಗಳಿಗೆ ನೀರಿನ ಬವಣೆ ತಪ್ಪಿಲ್ಲ. ಸಂಬಂಧಪಟ್ಟವರು ಕೂಡಲೇ ರಾಮಸ್ವಾಮಿ ವೃತ್ತದ ಸುತ್ತಮುತ್ತಲಿನ ಸಮೀಪವಿರುವ ಮನೆ ಹಾಗೂ ಕಚೇರಿಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಬಿ.ಎನ್.ಶಶಿಧರ, ಅಡ್ವಕೇಟ್, ಮೈಸೂರು
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…