Andolana originals

ಸಮರ್ಪಕವಾಗಿ ನೀರು ಸರಬರಾಜು ಮಾಡಿ

ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ ಕಡೆಯಿಂದ ನೀರು ತರುವುದು ಅನಿವಾರ್ಯವಾಗಿದ್ದು, ಅದಕ್ಕಾಗಿಯೇ ಒಂದೆರಡು ಗಂಟೆ ಸಮಯವನ್ನು ಮೀಸಲಿಡಬೇಕಾಗಿದೆ. ಈ ಬಗ್ಗೆ ವಾಣಿ ವಿಲಾಸ ನೀರು ಸರಬರಾಜು ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಲಿಖಿತವಾಗಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಕಂದಾಯವನ್ನು ಸಮರ್ಪಕವಾಗಿ ಪಾವತಿಸದಿದ್ದರೆ ಕೂಡಲೇ ಸಂಪರ್ಕವನ್ನು ಕಡಿತ ಮಾಡಲಾಗುತ್ತದೆ. ಆದರೆ ನಿಯಮಿತವಾಗಿ ನೀರಿನ ಕಂದಾಯವನ್ನು ಪ್ರತಿತಿಂಗಳು ಪಾವತಿಸುತ್ತಿದ್ದರೂ ಇಲ್ಲಿನ ನಿವಾಸಿಗಳಿಗೆ ನೀರಿನ ಬವಣೆ ತಪ್ಪಿಲ್ಲ. ಸಂಬಂಧಪಟ್ಟವರು ಕೂಡಲೇ ರಾಮಸ್ವಾಮಿ ವೃತ್ತದ ಸುತ್ತಮುತ್ತಲಿನ ಸಮೀಪವಿರುವ ಮನೆ ಹಾಗೂ ಕಚೇರಿಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.

-ಬಿ.ಎನ್.ಶಶಿಧರ, ಅಡ್ವಕೇಟ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

2 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago