ಸರಗೂರು ತಾಲ್ಲೂಕಿನ ಕಟ್ಟೆಹುಣಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಜೂರು, ನಂಜೀಪುರ, ಕಲ್ಲಂಬಾಳು, ದಡದಹಳ್ಳಿ, ಕುಂದೂರು ಸೇರಿದಂತೆ ಆಸುಪಾಸಿನ ಅನೇಕ ಗ್ರಾಮಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ ಸಿಗದೆ ಅವರು ಪರದಾಡುವಂತಾಗಿದೆ.
ಬಸ್ಗಳನ್ನು ಹುಲ್ಲಹಳ್ಳಿ-ಸರಗೂರು ನಡುವೆ ಸಂಚರಿಸುವ ಆಶ್ರಯಿಸಿ ಈ ಗಾಮಗಳ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗುತ್ತಿದ್ದರು. ಆದರೆ ಕಳೆದ 3 ತಿಂಗಳುಗಳಿಂದ ಹುಲ್ಲಹಳ್ಳಿ-ರಾಜೂರು-ಕಟ್ಟೆಹುಣಸೂರು ಮಾರ್ಗವಾಗಿ ಸಂಜೆ 4.30ಕ್ಕೆ ಸಂಚರಿಸುತ್ತಿದ್ದ ಬಸ್ ನಿಂತುಹೋಗಿದ್ದು, ವಿದ್ಯಾರ್ಥಿಗಳು ಸಂಜೆಯ ವೇಳೆ ಮನೆಗೆ ಹೋಗಲು ಖಾಸಗಿ ವಾಹನಗಳ ಮೊರೆ ಹೋಗುವಂತಾಗಿದೆ. ಸರಿಯಾದ ಸಮಯಕ್ಕೆ ಬಸ್ ಸಿಗದ ಪರಿಣಾಮ ಸಾಕಷ್ಟು ವಿದ್ಯಾರ್ಥಿಗಳು ನಡೆದುಕೊಂಡೇ ಶಾಲೆಗೆ ಬಂದು ಹೋಗುತ್ತಿದ್ದಾರೆ. ಅಲ್ಲದೆ ಕೆಲ ವಿದ್ಯಾರ್ಥಿಗಳು ಶಾಲೆಯನ್ನು ಬಿಟ್ಟಿದ್ದು, ಈ ಶಾಲೆಗೆ ತಮ್ಮ ಮಕ್ಕಳನ್ನು ದಾಖಲು ಮಾಡಲು ಪೋಷಕರೂ ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಮಕ್ಕಳ ದಾಖಲಾತಿಯೂ ಕಡಿಮೆಯಾಗುತ್ತಿದೆ. ಈ ಬಗ್ಗೆ ಕೆಎಸ್ಆರ್ಟಿಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸೌಲಭ್ಯ ಕಲ್ಪಿಸಬೇಕಿದೆ.
-ಎಂ.ವಿಷಕಂಠ, ಅಹಿಂದ ಸಮನ್ವಯ ಸಮಿತಿ ಜಂಟಿ ಕಾರ್ಯದರ್ಶಿ, ಕುವೆಂಪುನಗರ, ಮೈಸೂರು.
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…
ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…
ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…