ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮಗನನ್ನು ರಾಜಕೀಯ ವಾಗಿ ಬೆಳೆಸುವ ಸಲುವಾಗಿ ನಿನ್ನ ಸಹೋದರ ರೇವಣ್ಣ ಅವರ ಮಕ್ಕಳನ್ನೇ ಜೈಲಿಗೆ ಕಳುಹಿಸಿದ್ದು ಯಾರು?’ ಎಂದು ಏಕವಚನದಲ್ಲಿ ಪ್ರಶ್ನಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ, ಮಾರನೇ ದಿನ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ‘ರಾಜ್ಯದ ಹೆಸರಾಂತ ಉದ್ಯಮಿ ಕಾಫಿ ಡೇ ಮಾಲೀಕರಾದ, ಸಿದ್ದಾರ್ಥರವರ ಸಾವಿಗೆ ಕಾರಣ ಯಾರು ಶಿವಕುಮಾರ್ ಅವರೇ’ ಎಂದು ಪ್ರಶ್ನಿಸಿದ್ದಾರೆ.
ಈ ಇಬ್ಬರೂ ನಾಯಕರೂ ತಮ್ಮ ವೈಯಕ್ತಿಕ ದ್ವೇಷವನ್ನು ತೀರಿಸಿಕೊಳ್ಳುವ ಸಲುವಾಗಿ ಸಾರ್ವಜನಿಕ ವೇದಿಕೆಗಳ ಮೇಲೆ ಈ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುವುದು ಸರಿಯೇ? ಜವಾ ಬ್ದಾರಿಯುತ ಸ್ಥಾನದಲ್ಲಿರುವ ಈ ಇಬ್ಬರೂ ನಾಯಕರಿಗೆ ಸಾರ್ವಜನಿಕರ ಎದುರು ಹೇಗೆ ಮಾತನಾಡಬೇಕು ಎಂಬುದು ತಿಳಿದಿಲ್ಲವೇ? ಈ ರೀತಿಯ ಗಂಭೀರ ಆರೋಪಗಳನ್ನು ಮಾಡುವವರು ಆರೋಪಗಳನ್ನು ಸಾಬೀತು ಮಾಡಲು ಸಾಕ್ಷಾಧಾರಗಳನ್ನು ಒದಗಿಸ ಬೇಕಲ್ಲವೇ? ಅದನ್ನು ಏಕೆ ಮಾಡುವುದಿಲ್ಲ.
ಕೇವಲ ತಮ್ಮ ರಾಜಕೀಯ ಹಿತಕ್ಕಾಗಿ ಸುಳ್ಳು ಆರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುವುದರಿಂದ ಯಾವುದೇ ಲಾಭವಿಲ್ಲ. ಮುಂದಿನ ದಿನಗಳಲ್ಲಿ ಈ ಆರೋಪಗಳು ಅವರವರಿಗೇ ತಿರುಗುಬಾಣವಾಗಬಹುದು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…