Andolana originals

ಆರೋಪಗಳಿಗೆ ದಾಖಲೆಗಳನ್ನು ಒದಗಿಸಿ

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮಗನನ್ನು ರಾಜಕೀಯ ವಾಗಿ ಬೆಳೆಸುವ ಸಲುವಾಗಿ ನಿನ್ನ ಸಹೋದರ ರೇವಣ್ಣ ಅವರ ಮಕ್ಕಳನ್ನೇ ಜೈಲಿಗೆ ಕಳುಹಿಸಿದ್ದು ಯಾರು?’ ಎಂದು ಏಕವಚನದಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ, ಮಾರನೇ ದಿನ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ‘ರಾಜ್ಯದ ಹೆಸರಾಂತ ಉದ್ಯಮಿ ಕಾಫಿ ಡೇ ಮಾಲೀಕರಾದ, ಸಿದ್ದಾರ್ಥರವರ ಸಾವಿಗೆ ಕಾರಣ ಯಾರು ಶಿವಕುಮಾರ್ ಅವರೇ’ ಎಂದು ಪ್ರಶ್ನಿಸಿದ್ದಾರೆ.

ಈ ಇಬ್ಬರೂ ನಾಯಕರೂ ತಮ್ಮ ವೈಯಕ್ತಿಕ ದ್ವೇಷವನ್ನು ತೀರಿಸಿಕೊಳ್ಳುವ ಸಲುವಾಗಿ ಸಾರ್ವಜನಿಕ ವೇದಿಕೆಗಳ ಮೇಲೆ ಈ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುವುದು ಸರಿಯೇ? ಜವಾ ಬ್ದಾರಿಯುತ ಸ್ಥಾನದಲ್ಲಿರುವ ಈ ಇಬ್ಬರೂ ನಾಯಕರಿಗೆ ಸಾರ್ವಜನಿಕರ ಎದುರು ಹೇಗೆ ಮಾತನಾಡಬೇಕು ಎಂಬುದು ತಿಳಿದಿಲ್ಲವೇ? ಈ ರೀತಿಯ ಗಂಭೀರ ಆರೋಪಗಳನ್ನು ಮಾಡುವವರು ಆರೋಪಗಳನ್ನು ಸಾಬೀತು ಮಾಡಲು ಸಾಕ್ಷಾಧಾರಗಳನ್ನು ಒದಗಿಸ ಬೇಕಲ್ಲವೇ? ಅದನ್ನು ಏಕೆ ಮಾಡುವುದಿಲ್ಲ.

ಕೇವಲ ತಮ್ಮ ರಾಜಕೀಯ ಹಿತಕ್ಕಾಗಿ ಸುಳ್ಳು ಆರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುವುದರಿಂದ ಯಾವುದೇ ಲಾಭವಿಲ್ಲ. ಮುಂದಿನ ದಿನಗಳಲ್ಲಿ ಈ ಆರೋಪಗಳು ಅವರವರಿಗೇ ತಿರುಗುಬಾಣವಾಗಬಹುದು.

ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

5 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

19 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

21 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

22 hours ago