ಓದುಗರ ಪತ್ರ
ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿಗಳು ಕಟ್ಟಿಕೊಂಡಿದ್ದು, ದುರ್ವಾಸನೆ ಬೀರುತ್ತಿವೆ. ಮಳೆಗಾಲದಲ್ಲಿ ಈ ಚರಂಡಿಗಳು ತುಂಬಿಕೊಳ್ಳುತ್ತಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತದೆ.
ಈ ಅನೈರ್ಮಲ್ಯ ವಾತಾವರಣದಿಂದಾಗಿ ಗ್ರಾಮದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಸಾಂಕ್ರಾಮಿಕಗಳ ರೋಗಗಳ ಭೀತಿ ಎದುರಾಗಿದೆ. ಅಲ್ಲದೆ ಗ್ರಾಮದ ಕೆಲ ವಿದ್ಯುತ್ ಕಂಬಗಳಲ್ಲಿ ಬಲ್ಬಗಳೇ ಇಲ್ಲದೆ ಕತ್ತಲಾಗುತ್ತಿದ್ದಂತೆ ಕಗ್ಗತ್ತಲು ಆವರಿಸುತ್ತದೆ. ಇದರಿಂದಾಗಿ ರಾತ್ರಿ ವೇಳೆ ಜನರು ಓಡಾಡಲು ಹರಸಾಹಸ ಪಡುವಂತಾಗಿದೆ.
ಈ ಸಂಬಂಧ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಯವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕ್ಷೇತ್ರದ ಶಾಸಕರು ಈ ಗ್ರಾಮದ ಬಗ್ಗೆ ವಿಶೇಷ ಕಾಳಜಿ ತೋರಿ ಗ್ರಾಮವನ್ನು ಅಭಿವೃದ್ಧಿ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…