ಓದುಗರ ಪತ್ರ
ಮೈಸೂರು ದಟ್ಟಗಳ್ಳಿಯ ನಂದಿ ವೃತ್ತದಿಂದ ಗಂಟೆ ಬಸಪ್ಪ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದೆ ದಿನನಿತ್ಯ ಓಡಾಡುವವರಿಗೆ ತುಂಬಾ ತೊಂದರೆಯಾಗುತ್ತಿದೆ. ರಾತ್ರಿಯಾಗುತ್ತಿದ್ದಂತೆ ಇಡೀ ರಸ್ತೆಯನ್ನು ಕತ್ತಲೆ ಆವರಿಸುತ್ತದೆ. ಈ ರಸ್ತೆಯಲ್ಲಿ ಗಿಡಗಂಟಿಗಳು ಅಧಿಕವಾಗಿರುವುದರಿಂದ ಹಾವುಗಳು ಸೇರಿದಂತೆ ಇನ್ನಿತರೆ ವಿಷ ಜಂತುಗಳು ಆಗಾಗ್ಗೆ ರಸ್ತೆಯ ಮೇಲೆ ಹರಿದಾಡುತ್ತವೆ.
ಹೀಗಾಗಿ, ಇಲ್ಲಿನ ವಾಯುವಿಹಾರಿಗಳು, ಮಹಿಳೆಯರು, ಮಕ್ಕಳು ರಾತ್ರಿ ವೇಳೆ ಮನೆಯಿಂದ ಹೊರ ಬರಲು ಭಯಪಡುವಂತಾಗಿದೆ. ಸಂಬಂಧಪಟ್ಟವರು ಕೂಡಲೇ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…