Andolana originals

ಶುದ್ಧ ಕುಡಿಯುವ ನೀರಿಗಾಗಿ ಸಾರ್ವಜನಿಕರ ಪರದಾಟ

ಕೆ.ಎಂ.ಅನುಚೇತನ್

ಕೆ.ಆರ್.ಮೊಹಲ್ಲಾದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ೪ ತಿಂಗಳು

ಶುದ್ಧ ನೀರಿಗಾಗಿ ಬೇರೆ ಘಟಕಗಳಿಗೆ ಜನರ ಅಲೆದಾಟ

ಮನವಿಗೆ ಸ್ಪಂದಿಸದ ಅಧಿಕಾರಿಗಳು: ಸ್ಥಳೀಯರ ಆರೋಪ

ಘಟಕ ದುರಸ್ತಿಪಡಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ 

ಮೈಸೂರು: ಕುಡಿಯುವ ನೀರಿಗಾಗಿ ಜನರು ನೀರಿನ ಕ್ಯಾನ್‌ಗಳನ್ನು ಹಿಡಿದು ನೀರಿನ ಘಟಕಗಳಿಗೆ ಅಲೆಯುವ ಸ್ಥಿತಿ ಎದುರಾಗಿದೆ. ಏಕೆಂದರೆ ಶುದ್ಧ ಕುಡಿಯುವ ನೀರಿನ ಪೂರೈಕೆಗಳು ಕೆಟ್ಟು ನಿತ್ರಾಣಗೊಂಡಿವೆ! ಸ್ಥಳೀಯರು ಕೆಲ ತಿಂಗಳುಗಳಿಂದ ಶುದ್ಧ ನೀರಿಗಾಗಿ ಪರಿತಪಿಸುತ್ತಿದ್ದಾರೆ.

ನಗರದ ಕೆ.ಆರ್.ಮೊಹಲ್ಲಾದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಎದುರಿನ ಶುದ್ಧ ಕುಡಿಯುವ ನೀರಿನ ಘಟಕ ಕೆಲವು ತಿಂಗಳುಗಳಿಂದ ಕೆಟ್ಟು ನಿಂತಿದೆ. ಇದರಿಂದ ಸ್ಥಳೀಯರು ಶುದ್ಧ ಕುಡಿಯುವ ನೀರಿಗಾಗಿ ಬೇರೆಡೆ ಇರುವ ನೀರಿನ ಘಟಕಗಳಿಗೆ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.

ಕೆ.ಆರ್.ಮೊಹಲ್ಲಾದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ನಾಲ್ಕು ತಿಂಗಳುಗಳಿಂದ ಕಾರ್ಯ ನಿರ್ವಹಿಸುತಿಲ್ಲ. ಈ ಸಮಸ್ಯೆ ಬಗ್ಗೆ ದೂರು ನೀಡಲು ಸಂಬಂಧಪಟ್ಟ ಸಹಾಯವಾಣಿಗೆ ಕರೆ ಮಾಡಿದರೆ, ಸರಿಯಾಗಿ ಉತ್ತರಿಸುವುದಿಲ್ಲ. ಘಟಕ ನಿರ್ವಹಣಾಗಾರರನ್ನು ಪ್ರಶ್ನಿಸಿದರೆ, ಮೋಟಾರ್ ಕೆಟ್ಟು ಹೋಗಿದೆ, ದುರಸ್ತಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಕಾರಣ ನೀಡುತ್ತಾರೆ. ಅತ್ತ ನಗರಪಾಲಿಕೆ ಅಧಿಕಾರಿಗಳು ನೆಪ ಹೇಳಿ, ಉಡಾಫೆ ತೋರಿಸುತ್ತಿದ್ದಾರೆ. ನಾಲ್ಕು ತಿಂಗಳುಗಳಿಂದ ಬೇರೆಡೆಗೆ ನೀರು ತರಲು ಹೋಗುವಂತಾಗಿದೆ. ಅಲ್ಲೂ ಕೆಲವೊಮ್ಮೆ ಮೋಟಾರ್ ಸ್ಥಗಿತಗೊಳ್ಳುತ್ತದೆ. ಹಾಗಾಗಿ ಶುದ್ಧ ಕುಡಿಯುವ ನೀರು ತರಲು ಸಮಸ್ಯೆ ಉಂಟಾಗುತ್ತಿದೆ ಎಂಬುದಾಗಿ ಸ್ಥಳೀಯರು ಅಲವತ್ತುಕೊಳ್ಳುತ್ತಾರೆ.

ದೂರು ನೀಡಿದರೂ ಪ್ರಯೋಜನವಿಲ್ಲ: ಅಧಿಕಾರಿಗಳಿಗೆ ಸಮಸ್ಯೆ ಕುರಿತು ನಿರಂತರವಾಗಿ ದೂರು ನೀಡುತ್ತಿದ್ದೇವೆ. ಪಾಲಿಕೆ ಕಚೇರಿಗೆ ತೆರಳಿ ಹಲವು ಬಾರಿ ದೂರು ನೀಡಿದ್ದು, ಸರಿಪಡಿಸುವುದಾಗಿ ಸಬೂಬು ಹೇಳಿ ಕಳುಹಿಸುತ್ತಾರೆ. ಕೆಲವು ಅಧಿಕಾರಿಗಳು ಕರೆ ಮಾಡಿದರೆ, ಸರಿಯಾಗಿ ಉತ್ತರಿಸುವುದಿಲ್ಲ. ಪದೇ ಪದೇ ಕರೆ ಮಾಡಿದರೆ ಮೊಬೈಲ್ ಸ್ವಿಚ್ಡ್ ಆಫ್‌  ಮಾಡಿಕೊಳ್ಳುತ್ತಾರೆ. ನೀರಿನ ಘಟಕದ ಮೋಟಾರ್ ಸರಿಪಡಿಸಲು ಇಲ್ಲಸಲ್ಲದ ನೆಪಗಳನ್ನು ಹೇಳಿ ಸಮಸ್ಯೆಯನ್ನು ಮುಚ್ಚಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಲಾಗದ ನಗರಪಾಲಿಕೆ ಅಧಿಕಾರಿಗಳು ಯಾವ ಅಭಿವೃದ್ಧಿ ಕಾರ್ಯ ಮಾಡುತ್ತಾರೆ? ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

” ಶುದ್ಧ ಕುಡಿಯುವ ನೀರನ ಘಟಕ ಕೆಟ್ಟಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು, ನೀರಿನ ಘಟಕ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ.”

– ಶೇಖ್ ತನ್ವೀರ್ ಆಸಿಫ್, ಆಯುಕ್ತರು, ಮಹಾನಗರ ಪಾಲಿಕೆ 

” ಕಳೆದ ನಾಲ್ಕು ತಿಂಗಳುಗಳಿಂದ ಮೋಟಾರ್ ಕೆಟ್ಟು ನಿಂತು ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದರೂ ಸರಿಯಾಗಿ ಸ್ಪಂದಿಸುವುದಿಲ್ಲ. ನಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಾರೆ. ಕುಡಿಯುವ ನೀರಿನ ಪೂರೈಕೆ ಮಾಡಲಾಗದ ಇವರು, ಮೈಸೂರಿನ ಅಭಿವೃದ್ಧಿ ಹೇಗೆ ಮಾಡುತ್ತಾರೆ?”

-ಪಿ.ಮಹದೇಶ್, ಸ್ಥಳೀಯ ನಿವಾಸಿ

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

9 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago