Andolana originals

ಪುರಸಭೆಯಲ್ಲಿ ಖಾಯಂ ಅಧಿಕಾರಿಗಳಿಲ್ಲದೆ ಸಾರ್ವಜನಿಕರ ಪರದಾಟ

ಭೇರ್ಯ ಮಹೇಶ್

ಕೆ.ಆರ್.ನಗರ: ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಜನರು ಅಲೆಯಬೇಕಾದ ಸ್ಥಿತಿ; ಅಭಿವೃದ್ಧಿ ಕುಂಠಿತ ಆರೋಪ 

ಕೆ.ಆರ್.ನಗರ: ಪಟ್ಟಣದ ಪುರಸಭೆ ಕಚೇರಿಯಲ್ಲಿ ಸುಮಾರು ನಾಲ್ಕು ತಿಂಗಳಿಂದ ಕೆಲ ಖಾಯಂ ಅಧಿಕಾರಿಗಳು ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.

ನಾಲ್ಕು ತಿಂಗಳುಗಳಿಂದ ಆಡಳಿತ ಅಧಿಕಾರಿ ನೇಮಕವಾಗಿಲ್ಲ. ಮುಖ್ಯಾಧಿಕಾರಿ, ವ್ಯವಸ್ಥಾಪಕರು, ಇಂಜಿನಿಯರ್, ಬಿಲ್ ಕಲೆಕ್ಟರ್ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು ಸೇರಿ ಹಲವು ಹುದ್ದೆಗಳು ಖಾಲಿ ಇದ್ದು ಸರ್ಕಾರ ಇದುವರೆಗೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳು ಬಗೆಹರಿಯದೇ ವಿಳಂಬವಾಗುತ್ತಿದೆ.

ಕಳೆದ ಮೂರು ವರ್ಷಗಳಿಂದ ಸಮುದಾಯ ಸಂಘಟಕರು, ಸಮುದಾಯ ಸಂಘಟನಾಧಿಕಾರಿ ಹುದ್ದೆ ಖಾಲಿ ಇದ್ದು ಇದುವರೆಗೂ ಯಾರು ಹುದ್ದೆಗೆ ನಿಯುಕ್ತಿಗೊಳ್ಳದ ಕಾರಣ ಪುರಸಭೆ ವ್ಯಾಪ್ತಿಯ ಜನರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಾಗಬೇಕಾದರೆ ಮತ್ತು ಜನ ಸಾಮಾನ್ಯರ ಮೂಲ ಸೌಕರ್ಯಗಳ ಬಗ್ಗೆ ಕಾರ್ಯೋನ್ಮುಖರಾಗಲು ಮೇಲೆ ಹೇಳಿದ ಮೂರು ಅಧಿಕಾರಿಗಳು ಅತ್ಯವಶ್ಯ.

ಆದರೆ ಈ ಅಧಿಕಾರಿಗಳು ಪ್ರಭಾರವಾಗಿ ಕೆಲಸ ಮಾಡುತ್ತಿರುವುದರಿಂದ ಸಕಾಲಕ್ಕೆ ಜನ ಸಾಮಾನ್ಯರ ಕೆಲಸಗಳಿಗೆ ಉತ್ತರ ಸಿಗುವುದು ತಡವಾಗಿದೆ. ಇದರಿಂದ ಜನರು ಆಕ್ರೋಶಗೊಂಡಿದ್ದು, ಖಾಯಂ ಅಧಿಕಾರಿಗಳನ್ನು ನೇಮಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪುರಸಭೆ ಅಧ್ಯಕ್ಷರ ಹಾಗೂ ಸದಸ್ಯರ ಅಧಿಕಾರ ಅವಧಿ ನವೆಂಬರ್ ೬ಕ್ಕೆ ಮುಗಿದಿದ್ದು ಬಳಿಕ ಆಡಳಿತ ಅಧಿಕಾರಿಗಳ ನೇಮಕವಾಗಬೇಕಿತ್ತು. ಆದರೆ ಹುಣಸೂರು ಉಪವಿಭಾಗಾಧಿಕಾರಿಗಳು ಇಲ್ಲಿ ಇದುವರೆಗೂ ಅಧಿಕಾರ ಸ್ವೀಕರಿಸಿಲ್ಲ.

” ಕೆ.ಆರ್.ನಗರ ಪುರಸಭೆಯಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಖಾಯಂ ಅಧಿಕಾರಿಗಳು ನೇಮಕಗೊಳ್ಳದೇ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ನಿತ್ಯ ಒಂದಲ್ಲ ಒಂದು ಸಮಸ್ಯೆ ಹೊತ್ತು ಸಾರ್ವಜನಿಕರು ಪುರಸಭೆಗೆ ಬಂದರೂ ಅಧಿಕಾರಿಗಳು ಕಾಣುತ್ತಿಲ್ಲ. ವರ್ಗಾವಣೆಗೊಂಡವರ ಬದಲಿಗೆ ಬೇರೆ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಬೇಕು.”

-ಉಮಾಶಂಕರ್, ಬಿಜೆಪಿ ಮುಖಂಡರು

” ಪುರಸಭೆ ಮುಖ್ಯಾಧಿಕಾರಿಗಳು ವರ್ಗಾವಣೆಗೊಂಡು ಆರು ತಿಂಗಳುಗಳೇ ಕಳೆದಿದೆ. ಮ್ಯಾನೇಜರ್, ಇಂಜಿನಿಯರ್, ಸಮುದಾಯದ ಅಧಿಕಾರಿಗಳು ಇಲ್ಲದೆ ಅಭಿವೃದ್ಧಿ ಕಾರ್ಯ ಕ್ರಮಗಳು ಕುಠಿತವಾಗಿವೆ. ಸದಸ್ಯರಾಗಿದ್ದ ವೇಳೆ ಹಲವು ಬಾರಿ ಸಭೆಯಲ್ಲಿ ಚರ್ಚೆ ಮಾಡಲಾಯಿತಾದರೂ ಪ್ರಯೋಜನ ವಾಗಲಿಲ್ಲ. ಪಟ್ಟಣದ ನಾಗರಿಕರು ಕಚೇರಿಗೆ ಅಲೆಯುವುದು ತಪ್ಪಿಲ್ಲ.”

-ಕೆ.ಉಮೇಶ್, ಮಾಜಿ ಸದಸ್ಯರು, ಪುರಸಭೆ

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

15 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

18 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

22 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 days ago