ಓದುಗರ ಪತ್ರ
ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ಮಹಾರಾಣಿ ಕಾಲೇಜಿನ ಬಳಿ ಸಾರ್ವಜನಿಕ ಶೌಚಾಲಯವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದರೂ ಶೌಚಾಲಯ ಸಾರ್ವಜನಿಕರ ಬಳಕೆಗೆ ಲಭ್ಯವಾಗದೆ ತೊಂದರೆಯಾಗಿದೆ. ಮೈಸೂರು ರೈಲು ನಿಲ್ದಾಣವು ಮೆಟ್ರೋಪೋಲ್ ವೃತ್ತದ ಸಮೀಪವೇ ಇರುವುದರಿಂದ ಹಾಗೂ ಮಡಿಕೇರಿ, ಹುಣಸೂರು, ಕೆ.ಆರ್.ನಗರ, ಹಾಸನ, ಚಿಕ್ಕಮಗಳೂರು, ಮಂಗಳೂರು ಹಾಗೂ ಇನ್ನಿತರ ಸ್ಥಳಗಳಿಗೆ ಪ್ರಯಾಣಿಸುವವರು ಈ ವೃತ್ತದಲ್ಲಿರುವ ಬಸ್ ನಿಲ್ದಾಣವನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಪ್ರತಿನಿತ್ಯ ಈ ಸ್ಥಳದಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಹೆಚ್ಚು ಗ್ರಾಮೀಣ ಭಾಗದ ಜನರು ಓಡಾಡುತ್ತಾರೆ.
ಆದರೆ ಸಾರ್ವಜನಿಕ ಶೌಚಾಲಯ ಬಳಕೆಗೆ ಲಭ್ಯವಿಲ್ಲದೇ ಇರುವುದರಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಸಾರ್ವಜನಿಕ ಶೌಚಾಲಯದ ಬೀಗ ತೆರೆದು ಜನರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
–ನಾಗೇಶ್ , ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…