Andolana originals

ಓದುಗರ ಪತ್ರ: ಧಾರ್ಮಿಕ ಸಂಘರ್ಷಕ್ಕೆ ಕಡಿವಾಣ ಹಾಕಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದಿರುವ ಗಲಭೆಯು ಕೆಲ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡುವ ಸಲುವಾಗಿಯೇ ಅವರು ಇಂತಹ ಕೃತ್ಯವೆಸಗಿದ್ದಾರೆ.

ಕೋಮು ಸೌಹಾರ್ದಕ್ಕೆ ಹೆಸರಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇಂತಹ ಗಲಭೆಗಳು ಆಗಾಗ್ಗೆ ನಡೆಯುತ್ತಿರುವುದು ದುರದೃಷ್ಟಕರ. ಸರ್ಕಾರ ಇಂತಹ ಕೃತ್ಯಗಳಿಗೆ ಶೀಘ್ರ ಕಡಿವಾಣ ಹಾಕಬೇಕು. ಕೋಮುಗಲಭೆ ಸೃಷ್ಟಿಸುವವರು ಯಾವುದೇ ಜಾತಿಯವರಾಗಿರಲಿ, ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಗಳನ್ನು ರವಾನಿಸಿ ಗಲಭೆ ಸೃಷ್ಟಿಸುವವರ ವಿರುದ್ಧವೂ ಕ್ರಮಕೈಗೊಳ್ಳಬೇಕಾಗಿದೆ. ಇನ್ನು ನಾಗಮಂಗಲದಲ್ಲಿ ನಡೆದ ಈ ಗಲಭೆಯಲ್ಲಿ ಎರಡೂ ಕೋಮುಗಳ ಅಮಾಯಕರ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಆದ್ದರಿಂದ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕೋಮುಗಲಭೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಜತೆಗೆ ನಷ್ಟ ಅನುಭವಿಸಿದವರಿಗೆ ಪರಿಹಾರಿ ನೀಡಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ…

40 mins ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…

1 hour ago

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

2 hours ago

ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲು

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್‌ ವಿರುದ್ಧ…

2 hours ago

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…

3 hours ago

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

6 hours ago