Andolana originals

ಕೊಡಗಿನಲ್ಲಿ ಇಂದು ಪುತ್ತರಿ ಹಬ್ಬದ ಸಂಭ್ರಮ

ಧಾನ್ಯಲಕ್ಷ್ಮಿಯನ್ನು ಮನೆಗೆ ಸೇರಿಸಿಕೊಳ್ಳುವ ಆಚರಣೆಗೆ ಜಿಲ್ಲೆಯಾದ್ಯಂತ ಅಗತ್ಯ ಸಿದ್ಧತೆ

ನವೀನ್ ಡಿಸೋಜ

ಮಡಿಕೇರಿ : ಇಂದು ಕೊಡಗಿನಲ್ಲಿ ಪುತ್ತರಿ ಹಬ್ಬದ ಸಂಭ್ರಮ. ಸಾಂಪ್ರದಾಯಿಕವಾಗಿ ಆಚರಿಸಲಾಗುವ ಮಹತ್ವದ ಪುತ್ತರಿ ಆಚರಣೆಗೆ ಕೊಡಗು ಸಜ್ಜಾಗಿದೆ.

ಕೊಡಗು ವಿಶಿಷ್ಟ ಸಂಸ್ಕೃತಿ, ಆಚಾರ-ವಿಚಾರಗಳಿಗೆ ಹೆಸರಾದ ಜಿಲ್ಲೆ. ಪ್ರಕೃತಿಯೊಂದಿಗೆ ಬೆಸೆದುಕೊಂಡ ಇಲ್ಲಿನ ಜನರ ಒಂದೊಂದು ಹಬ್ಬ-ಹರಿದಿನಗಳು ಗಮನ ಸೆಳೆಯುತ್ತವೆ. ಅದರಂತೆ ಗುರುವಾರ ಕೊಡಗಿನಾದ್ಯಂತ ಪುತ್ತರಿ ಹಬ್ಬದ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮನೆ ಮಂದಿಯೆಲ್ಲಾ ಸಂಭ್ರಮ ದಿಂದ ಪಾಲ್ಗೊಂಡು ಆಚರಿಸುವ ಹುತ್ತರಿ ಹಬ್ಬ ಕೊಡಗಿನ ವಿಶೇಷ. ಕೊಡವ ನುಡಿಯ ಪುತ್ತರಿ (ಪುದಿಯ ಅರಿ) ಅಂದರೆ ಹೊಸ ಅಕ್ಕಿ. ವ್ಯವಸಾಯವನ್ನೇ ನಂಬಿ ಬದುಕುವ ಬಹುತೇಕ ರೈತಾಪಿ ವರ್ಗ ಭತ್ತದ ಬೆಳೆ ಬೆಳೆದಾಗ ಶಾಸ್ತ್ರೋಕ್ತವಾಗಿ ಕುಯ್ದು ತಂದು ಮನೆ ತುಂಬಿಸಿಕೊಳ್ಳುವುದೇ ಈ ಪುತ್ತರಿ ಅಥವಾ ಹುತ್ತರಿ ಹಬ್ಬದ ವೈಶಿಷ್ಟ್ಯ.

ಪುತ್ತರಿ ಹಬ್ಬದ ಈ ಸಂದರ್ಭದಲ್ಲಿ ಮನೆ ಮಂದಿಯೆಲ್ಲಾ ಒಟ್ಟುಗೂಡಿ ಭತ್ತದ ಗದ್ದೆಗೆ ತೆರಳುತ್ತಾರೆ. ಪ್ರಥಮ ಕೊಯ್ಲಿಗೆಂದು ನಿರ್ದಿಷ್ಟಪಡಿಸಿದ ಗದ್ದೆಯಲ್ಲಿ ಕುಟುಂಬದ ಹಿರಿಯ ಭತ್ತದ ಬೆಳೆಗೆ ಪೂಜಿಸಿ ಅದಕ್ಕೆ ಹಣ್ಣು, ಕಾಯಿ, ಹಾಲು, ಜೇನುಗಳನ್ನು ಸಮರ್ಪಿಸಿ ಬಳಿಕ ಪೊಲಿ ಪೊಲಿಯೇ ದೇವಾ ಎಂದು ಏರುದನಿಯಲ್ಲಿ ಕೂಗುತ್ತಾ ಭತ್ತದ ತೆನೆಗಳನ್ನು ಕತ್ತರಿಸಿ ತಂದು ಮನೆಯನ್ನು ತುಂಬಿಕೊಳ್ಳುತ್ತಾರೆ.

ಈ ವೇಳೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಪುತ್ತರಿ ಆಚರಣೆಗೆಂದೇ ತಾತ್ಕಲಿಕ ಪಟಾಕಿ ಅಂಗಡಿಗಳು ತೆರೆಯಲ್ಪಟ್ಟಿವೆ. ಪುತ್ತರಿಯಂದು ಅಡುಗೆ ಕೂಡ ವೈವಿಧ್ಯಮಯವಾಗಿರುತ್ತದೆ. ಬಾಳೆಹಣ್ಣಿನಿಂದ ತಯಾರಿಸಿದ ತಂಬಿಟ್ಟು, ಘಮಘಮಿಸುವ ಏಲಕ್ಕಿ ಪುಟ್, ಆಗತಾನೆ ಗದ್ದೆಯಿಂದ ಕುಯ್ದು ತಂದ ಭತ್ತದ ಅಕ್ಕಿಗೆ ಐದಾರು ಪುಟ್ಟ ಕಲ್ಲು ಚೂರು ಸೇರಿಸಿ ಪಾಯಸ ಈ ದಿನದ ವಿಶೇಷ. ಇದರೊಂದಿಗೆ ಕುಟುಂಬ ಸ್ಥರು ಒಟ್ಟಾಗಿ ಸೇರಿ ಭೋಜನ ಸವಿದು ಸಂಭ್ರಮಿಸುತ್ತಾರೆ.

ಇಗ್ಗುತ್ತಪ ದೇವಾಲಯದಲ್ಲಿ ದಿನ ನಿಗದಿ. . .
ಹಬ್ಬದ ದಿನಾಂಕವನ್ನು ಕೊಡಗಿನ ಪ್ರಮುಖ ದೇವಾಲಯವಾದ ಕಕ್ಕಬ್ಬೆಯ ಇಗ್ಗುತಪ್ಪ ದೇವಾಲಯದಲ್ಲಿ ನಿಶ್ಚಯಿಸುತ್ತಾರೆ. ಈ ಬಾರಿ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ದಿನ ನಿಗದಿ ಮಾಡಿದ್ದು, ಧಾನ್ಯಲಕ್ಷ್ಮಿಯನ್ನು ಸಂಭ್ರಮದಿಂದ ಬರಮಾಡಿಕೊಳ್ಳುವ ಕೊಡಗಿನ ಪುತ್ತರಿ ಹಬ್ಬವನ್ನು ಡಿ. ೪ರಂದು ಗುರುವಾರ ಆಚರಿಸುವಂತೆ ನಿರ್ಧರಿಸಲಾಗಿದೆ. ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಽಯಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು ವ್ಯವಸ್ಥಾಪನಾ ಸಮಿತಿ ಪ್ರಮುಖರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಜ್ಯೋತಿಷಿ ಶಶಿಕುಮಾರ್ ದಿನ ನಿಗದಿ ಮಾಡಿದ್ದಾರೆ. ರಾತ್ರಿ ೮. ೧೦ಕ್ಕೆ ನೆರೆ ಕಟ್ಟುವುದು, ೯. ೧೦ಕ್ಕೆ ಕದಿರು ತೆಗೆಯುವುದು. ಇದಕ್ಕೂ ಮುನ್ನ ಗುರುವಾರ ಹಗಲು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲ್ಲಾಡ್ಚ ಹಬ್ಬ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

36 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

1 hour ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

2 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

3 hours ago