Andolana originals

ಕೊಡಗಿನಲ್ಲಿ ಇಂದು ಪುತ್ತರಿ ಹಬ್ಬದ ಸಂಭ್ರಮ

ಧಾನ್ಯಲಕ್ಷ್ಮಿಯನ್ನು ಮನೆಗೆ ಸೇರಿಸಿಕೊಳ್ಳುವ ಆಚರಣೆಗೆ ಜಿಲ್ಲೆಯಾದ್ಯಂತ ಅಗತ್ಯ ಸಿದ್ಧತೆ

ನವೀನ್ ಡಿಸೋಜ

ಮಡಿಕೇರಿ : ಇಂದು ಕೊಡಗಿನಲ್ಲಿ ಪುತ್ತರಿ ಹಬ್ಬದ ಸಂಭ್ರಮ. ಸಾಂಪ್ರದಾಯಿಕವಾಗಿ ಆಚರಿಸಲಾಗುವ ಮಹತ್ವದ ಪುತ್ತರಿ ಆಚರಣೆಗೆ ಕೊಡಗು ಸಜ್ಜಾಗಿದೆ.

ಕೊಡಗು ವಿಶಿಷ್ಟ ಸಂಸ್ಕೃತಿ, ಆಚಾರ-ವಿಚಾರಗಳಿಗೆ ಹೆಸರಾದ ಜಿಲ್ಲೆ. ಪ್ರಕೃತಿಯೊಂದಿಗೆ ಬೆಸೆದುಕೊಂಡ ಇಲ್ಲಿನ ಜನರ ಒಂದೊಂದು ಹಬ್ಬ-ಹರಿದಿನಗಳು ಗಮನ ಸೆಳೆಯುತ್ತವೆ. ಅದರಂತೆ ಗುರುವಾರ ಕೊಡಗಿನಾದ್ಯಂತ ಪುತ್ತರಿ ಹಬ್ಬದ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮನೆ ಮಂದಿಯೆಲ್ಲಾ ಸಂಭ್ರಮ ದಿಂದ ಪಾಲ್ಗೊಂಡು ಆಚರಿಸುವ ಹುತ್ತರಿ ಹಬ್ಬ ಕೊಡಗಿನ ವಿಶೇಷ. ಕೊಡವ ನುಡಿಯ ಪುತ್ತರಿ (ಪುದಿಯ ಅರಿ) ಅಂದರೆ ಹೊಸ ಅಕ್ಕಿ. ವ್ಯವಸಾಯವನ್ನೇ ನಂಬಿ ಬದುಕುವ ಬಹುತೇಕ ರೈತಾಪಿ ವರ್ಗ ಭತ್ತದ ಬೆಳೆ ಬೆಳೆದಾಗ ಶಾಸ್ತ್ರೋಕ್ತವಾಗಿ ಕುಯ್ದು ತಂದು ಮನೆ ತುಂಬಿಸಿಕೊಳ್ಳುವುದೇ ಈ ಪುತ್ತರಿ ಅಥವಾ ಹುತ್ತರಿ ಹಬ್ಬದ ವೈಶಿಷ್ಟ್ಯ.

ಪುತ್ತರಿ ಹಬ್ಬದ ಈ ಸಂದರ್ಭದಲ್ಲಿ ಮನೆ ಮಂದಿಯೆಲ್ಲಾ ಒಟ್ಟುಗೂಡಿ ಭತ್ತದ ಗದ್ದೆಗೆ ತೆರಳುತ್ತಾರೆ. ಪ್ರಥಮ ಕೊಯ್ಲಿಗೆಂದು ನಿರ್ದಿಷ್ಟಪಡಿಸಿದ ಗದ್ದೆಯಲ್ಲಿ ಕುಟುಂಬದ ಹಿರಿಯ ಭತ್ತದ ಬೆಳೆಗೆ ಪೂಜಿಸಿ ಅದಕ್ಕೆ ಹಣ್ಣು, ಕಾಯಿ, ಹಾಲು, ಜೇನುಗಳನ್ನು ಸಮರ್ಪಿಸಿ ಬಳಿಕ ಪೊಲಿ ಪೊಲಿಯೇ ದೇವಾ ಎಂದು ಏರುದನಿಯಲ್ಲಿ ಕೂಗುತ್ತಾ ಭತ್ತದ ತೆನೆಗಳನ್ನು ಕತ್ತರಿಸಿ ತಂದು ಮನೆಯನ್ನು ತುಂಬಿಕೊಳ್ಳುತ್ತಾರೆ.

ಈ ವೇಳೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಪುತ್ತರಿ ಆಚರಣೆಗೆಂದೇ ತಾತ್ಕಲಿಕ ಪಟಾಕಿ ಅಂಗಡಿಗಳು ತೆರೆಯಲ್ಪಟ್ಟಿವೆ. ಪುತ್ತರಿಯಂದು ಅಡುಗೆ ಕೂಡ ವೈವಿಧ್ಯಮಯವಾಗಿರುತ್ತದೆ. ಬಾಳೆಹಣ್ಣಿನಿಂದ ತಯಾರಿಸಿದ ತಂಬಿಟ್ಟು, ಘಮಘಮಿಸುವ ಏಲಕ್ಕಿ ಪುಟ್, ಆಗತಾನೆ ಗದ್ದೆಯಿಂದ ಕುಯ್ದು ತಂದ ಭತ್ತದ ಅಕ್ಕಿಗೆ ಐದಾರು ಪುಟ್ಟ ಕಲ್ಲು ಚೂರು ಸೇರಿಸಿ ಪಾಯಸ ಈ ದಿನದ ವಿಶೇಷ. ಇದರೊಂದಿಗೆ ಕುಟುಂಬ ಸ್ಥರು ಒಟ್ಟಾಗಿ ಸೇರಿ ಭೋಜನ ಸವಿದು ಸಂಭ್ರಮಿಸುತ್ತಾರೆ.

ಇಗ್ಗುತ್ತಪ ದೇವಾಲಯದಲ್ಲಿ ದಿನ ನಿಗದಿ. . .
ಹಬ್ಬದ ದಿನಾಂಕವನ್ನು ಕೊಡಗಿನ ಪ್ರಮುಖ ದೇವಾಲಯವಾದ ಕಕ್ಕಬ್ಬೆಯ ಇಗ್ಗುತಪ್ಪ ದೇವಾಲಯದಲ್ಲಿ ನಿಶ್ಚಯಿಸುತ್ತಾರೆ. ಈ ಬಾರಿ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ದಿನ ನಿಗದಿ ಮಾಡಿದ್ದು, ಧಾನ್ಯಲಕ್ಷ್ಮಿಯನ್ನು ಸಂಭ್ರಮದಿಂದ ಬರಮಾಡಿಕೊಳ್ಳುವ ಕೊಡಗಿನ ಪುತ್ತರಿ ಹಬ್ಬವನ್ನು ಡಿ. ೪ರಂದು ಗುರುವಾರ ಆಚರಿಸುವಂತೆ ನಿರ್ಧರಿಸಲಾಗಿದೆ. ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಽಯಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು ವ್ಯವಸ್ಥಾಪನಾ ಸಮಿತಿ ಪ್ರಮುಖರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಜ್ಯೋತಿಷಿ ಶಶಿಕುಮಾರ್ ದಿನ ನಿಗದಿ ಮಾಡಿದ್ದಾರೆ. ರಾತ್ರಿ ೮. ೧೦ಕ್ಕೆ ನೆರೆ ಕಟ್ಟುವುದು, ೯. ೧೦ಕ್ಕೆ ಕದಿರು ತೆಗೆಯುವುದು. ಇದಕ್ಕೂ ಮುನ್ನ ಗುರುವಾರ ಹಗಲು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲ್ಲಾಡ್ಚ ಹಬ್ಬ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

1 hour ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

2 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

2 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

2 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

2 hours ago