Andolana originals

ಕೊಡಗಿನಲ್ಲಿ ಇಂದು ಪುತ್ತರಿ ಹಬ್ಬದ ಸಂಭ್ರಮ

ಧಾನ್ಯಲಕ್ಷ್ಮಿಯನ್ನು ಮನೆಗೆ ಸೇರಿಸಿಕೊಳ್ಳುವ ಆಚರಣೆಗೆ ಜಿಲ್ಲೆಯಾದ್ಯಂತ ಅಗತ್ಯ ಸಿದ್ಧತೆ

ನವೀನ್ ಡಿಸೋಜ

ಮಡಿಕೇರಿ : ಇಂದು ಕೊಡಗಿನಲ್ಲಿ ಪುತ್ತರಿ ಹಬ್ಬದ ಸಂಭ್ರಮ. ಸಾಂಪ್ರದಾಯಿಕವಾಗಿ ಆಚರಿಸಲಾಗುವ ಮಹತ್ವದ ಪುತ್ತರಿ ಆಚರಣೆಗೆ ಕೊಡಗು ಸಜ್ಜಾಗಿದೆ.

ಕೊಡಗು ವಿಶಿಷ್ಟ ಸಂಸ್ಕೃತಿ, ಆಚಾರ-ವಿಚಾರಗಳಿಗೆ ಹೆಸರಾದ ಜಿಲ್ಲೆ. ಪ್ರಕೃತಿಯೊಂದಿಗೆ ಬೆಸೆದುಕೊಂಡ ಇಲ್ಲಿನ ಜನರ ಒಂದೊಂದು ಹಬ್ಬ-ಹರಿದಿನಗಳು ಗಮನ ಸೆಳೆಯುತ್ತವೆ. ಅದರಂತೆ ಗುರುವಾರ ಕೊಡಗಿನಾದ್ಯಂತ ಪುತ್ತರಿ ಹಬ್ಬದ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮನೆ ಮಂದಿಯೆಲ್ಲಾ ಸಂಭ್ರಮ ದಿಂದ ಪಾಲ್ಗೊಂಡು ಆಚರಿಸುವ ಹುತ್ತರಿ ಹಬ್ಬ ಕೊಡಗಿನ ವಿಶೇಷ. ಕೊಡವ ನುಡಿಯ ಪುತ್ತರಿ (ಪುದಿಯ ಅರಿ) ಅಂದರೆ ಹೊಸ ಅಕ್ಕಿ. ವ್ಯವಸಾಯವನ್ನೇ ನಂಬಿ ಬದುಕುವ ಬಹುತೇಕ ರೈತಾಪಿ ವರ್ಗ ಭತ್ತದ ಬೆಳೆ ಬೆಳೆದಾಗ ಶಾಸ್ತ್ರೋಕ್ತವಾಗಿ ಕುಯ್ದು ತಂದು ಮನೆ ತುಂಬಿಸಿಕೊಳ್ಳುವುದೇ ಈ ಪುತ್ತರಿ ಅಥವಾ ಹುತ್ತರಿ ಹಬ್ಬದ ವೈಶಿಷ್ಟ್ಯ.

ಪುತ್ತರಿ ಹಬ್ಬದ ಈ ಸಂದರ್ಭದಲ್ಲಿ ಮನೆ ಮಂದಿಯೆಲ್ಲಾ ಒಟ್ಟುಗೂಡಿ ಭತ್ತದ ಗದ್ದೆಗೆ ತೆರಳುತ್ತಾರೆ. ಪ್ರಥಮ ಕೊಯ್ಲಿಗೆಂದು ನಿರ್ದಿಷ್ಟಪಡಿಸಿದ ಗದ್ದೆಯಲ್ಲಿ ಕುಟುಂಬದ ಹಿರಿಯ ಭತ್ತದ ಬೆಳೆಗೆ ಪೂಜಿಸಿ ಅದಕ್ಕೆ ಹಣ್ಣು, ಕಾಯಿ, ಹಾಲು, ಜೇನುಗಳನ್ನು ಸಮರ್ಪಿಸಿ ಬಳಿಕ ಪೊಲಿ ಪೊಲಿಯೇ ದೇವಾ ಎಂದು ಏರುದನಿಯಲ್ಲಿ ಕೂಗುತ್ತಾ ಭತ್ತದ ತೆನೆಗಳನ್ನು ಕತ್ತರಿಸಿ ತಂದು ಮನೆಯನ್ನು ತುಂಬಿಕೊಳ್ಳುತ್ತಾರೆ.

ಈ ವೇಳೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಪುತ್ತರಿ ಆಚರಣೆಗೆಂದೇ ತಾತ್ಕಲಿಕ ಪಟಾಕಿ ಅಂಗಡಿಗಳು ತೆರೆಯಲ್ಪಟ್ಟಿವೆ. ಪುತ್ತರಿಯಂದು ಅಡುಗೆ ಕೂಡ ವೈವಿಧ್ಯಮಯವಾಗಿರುತ್ತದೆ. ಬಾಳೆಹಣ್ಣಿನಿಂದ ತಯಾರಿಸಿದ ತಂಬಿಟ್ಟು, ಘಮಘಮಿಸುವ ಏಲಕ್ಕಿ ಪುಟ್, ಆಗತಾನೆ ಗದ್ದೆಯಿಂದ ಕುಯ್ದು ತಂದ ಭತ್ತದ ಅಕ್ಕಿಗೆ ಐದಾರು ಪುಟ್ಟ ಕಲ್ಲು ಚೂರು ಸೇರಿಸಿ ಪಾಯಸ ಈ ದಿನದ ವಿಶೇಷ. ಇದರೊಂದಿಗೆ ಕುಟುಂಬ ಸ್ಥರು ಒಟ್ಟಾಗಿ ಸೇರಿ ಭೋಜನ ಸವಿದು ಸಂಭ್ರಮಿಸುತ್ತಾರೆ.

ಇಗ್ಗುತ್ತಪ ದೇವಾಲಯದಲ್ಲಿ ದಿನ ನಿಗದಿ. . .
ಹಬ್ಬದ ದಿನಾಂಕವನ್ನು ಕೊಡಗಿನ ಪ್ರಮುಖ ದೇವಾಲಯವಾದ ಕಕ್ಕಬ್ಬೆಯ ಇಗ್ಗುತಪ್ಪ ದೇವಾಲಯದಲ್ಲಿ ನಿಶ್ಚಯಿಸುತ್ತಾರೆ. ಈ ಬಾರಿ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ದಿನ ನಿಗದಿ ಮಾಡಿದ್ದು, ಧಾನ್ಯಲಕ್ಷ್ಮಿಯನ್ನು ಸಂಭ್ರಮದಿಂದ ಬರಮಾಡಿಕೊಳ್ಳುವ ಕೊಡಗಿನ ಪುತ್ತರಿ ಹಬ್ಬವನ್ನು ಡಿ. ೪ರಂದು ಗುರುವಾರ ಆಚರಿಸುವಂತೆ ನಿರ್ಧರಿಸಲಾಗಿದೆ. ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಽಯಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು ವ್ಯವಸ್ಥಾಪನಾ ಸಮಿತಿ ಪ್ರಮುಖರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಜ್ಯೋತಿಷಿ ಶಶಿಕುಮಾರ್ ದಿನ ನಿಗದಿ ಮಾಡಿದ್ದಾರೆ. ರಾತ್ರಿ ೮. ೧೦ಕ್ಕೆ ನೆರೆ ಕಟ್ಟುವುದು, ೯. ೧೦ಕ್ಕೆ ಕದಿರು ತೆಗೆಯುವುದು. ಇದಕ್ಕೂ ಮುನ್ನ ಗುರುವಾರ ಹಗಲು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲ್ಲಾಡ್ಚ ಹಬ್ಬ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago