Andolana originals

ಪರಿಸರ ಪ್ರವಾಸೋದ್ಯಮ ಯೋಜನೆಗೆ ಶೀಘ್ರ ಟೆಂಡರ್

ಸ್ವದೇಶ್ ದರ್ಶನ್ ೨.೦ನಲ್ಲಿ ಬಿಡುಗಡೆಗೊಂಡಿರುವ ೨೪ ಕೋಟಿ ರೂ. ಅನುದಾನ

 ಕೆ.ಬಿ.ರಮೇಶನಾಯಕ

ಮೃಗಾಲಯ, ಕಾರಂಜಿಕೆರೆ, ಪ್ರಾದೇಶಿಕ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ಏಕ ಟಿಕೆಟ್

ಮೈಸೂರು: ಪಾರಂಪರಿಕ, ಧಾರ್ಮಿಕ, ಯೋಗ ನಗರಿ ಎಂದೆಲ್ಲಾ ಖ್ಯಾತಿ ಗಳಿಸಿದ್ದರೂ ಪ್ರವಾಸಿಗರು ದಿನಪೂರ್ತಿ ಕಾಲ ಕಳೆಯುವುದಿಲ್ಲ ಎನ್ನುವ ಪ್ರವಾಸೋದ್ಯಮದ ಕೊರಗು ದೂರವಾಗುವ ದಿನಗಳು ಸನಿಹದಲ್ಲಿದ್ದು, ಪರಿಸರ ಪ್ರವಾಸೋದ್ಯಮ (ಎಕಲಾಜಿಕಲ್ ಎಕ್ಸ್ ಪೀರಿಯನ್ಸ್ ಟೂರಿಸಂ) ಯೋಜನೆ ಕಾರ್ಯಗತಗೊಳಿಸಲು ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಶುರುವಾಗಲಿದೆ.

ಸ್ವದೇಶ್ ದರ್ಶನ್ ೨.೦ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ ೨೪ ಕೋಟಿ ರೂ. ವೆಚ್ಚದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ತಾಂತ್ರಿಕ ಅನುಮೋದನೆಗೆ ಒಪ್ಪಿಗೆ ನೀಡಿರುವುದರಿಂದ ಟೆಂಡರ್ ಪ್ರಕ್ರಿಯೆ ಶುರು ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈ ಮಹತ್ವದ ಯೋಜನೆಗೆ ಈಗಾಗಲೇ ಸಿಎಂಸಿ ಸಮಿತಿಯೂ ಒಪ್ಪಿಗೆ ನೀಡಿರುವುದರಿಂದ ಟೆಂಡರ್ ಪ್ರಕ್ರಿಯೆ ಆರಂಭಿಸಲು ಪ್ರವಾಸೋದ್ಯಮ ಇಲಾಖೆ ತಯಾರಿ ಮಾಡಿಕೊಂಡಿದೆ. ಸ್ವದೇಶ್ ದರ್ಶನ್ ಯೋಜನೆಯ ೩.೦ನಲ್ಲಿ ಮೈಸೂರಿಗೆ ದೊರೆಯಬಹುದಾದ ಮತ್ತಷ್ಟು ಅನುದಾನವನ್ನು ಸಮರ್ಥವಾಗಿ ಬಳಸಿಕೊಳ್ಳಲು ಇದನ್ನು ಕಾರ್ಯರೂಪಕ್ಕೆ ತರಬೇಕಿರುವ ಕಾರಣ ಇದನ್ನು ತ್ವರಿತ ಗತಿಯಲ್ಲಿ ಮಾಡಬೇಕಿದೆ.

ಕೇಂದ್ರ ಸರ್ಕಾರ ಕಾಲಕಾಲಕ್ಕೆ ನೀಡಿದ ಸಲಹೆ ಮತ್ತು ಮಾರ್ಗದರ್ಶನದಂತೆ ರಾಜ್ಯ ಸರ್ಕಾರ ನಡೆಯುತ್ತಿದೆ ಎಂದು ಹೇಳಲಾಗಿದೆ.

ಏನಿದು ಪರಿಸರ ಪ್ರವಾಸೋದ್ಯಮ?: ಸಾಂಸ್ಕೃತಿಕ ನಗರಿ ಮೈಸೂರು ಕೇವಲ ಪಾರಂಪರಿಕ ನಗರ ಮಾತ್ರವಲ್ಲ. ಪರಿಸರಕ್ಕೆ ಪೂರಕವಾದ ನಗರವೂ ಹೌದು ಎಂದು ಹೊರ ಜಗತ್ತಿಗೆ ತೋರಿಸಲು ಯೋಜನೆ ಮಾಡಲಾಗಿದೆ. ಮೈಸೂರಿಗೆ ಬಂದ ಹೊರ ರಾಜ್ಯಗಳ, ಹೊರ ದೇಶಗಳ ಪ್ರವಾಸಿಗರು ಚಾಮರಾಜೇಂದ್ರ ಮೃಗಾಲಯ, ಕಾರಂಜಿಕೆರೆ, ಸಿದ್ಧಾರ್ಥನಗರದಲ್ಲಿರುವ ಪ್ರಾದೇಶಿಕ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ದಿನವಿಡೀ ಸಮಯ ಕಳೆಯುವಂತೆ ಮಾಡಲಾಗುತ್ತದೆ.

ಯಾವುದೇ ಪ್ರವಾಸಿಗರು ಮೃಗಾಲಯ ನೋಡಿದ ತಕ್ಷಣ ಚಾಮುಂಡಿ ಬೆಟ್ಟ ಅಥವಾ ಬೃಂದಾವನ ಗಾರ್ಡನ್‌ಗೆ ಭೇಟಿ ನೀಡುತ್ತಾರೆ. ಆದರೆ, ಇದೇ ಪ್ರವಾಸಿಗರು ಕಾರಂಜಿಕೆರೆಯಲ್ಲಿ ಸಿಗುವ ತಂಪಾದ ಪರಿಸರದಲ್ಲಿ ಕಾಲ ಕಳೆಯುವುದಕ್ಕೆ ಮುಂದಾಗುತ್ತಿರಲಿಲ್ಲ. ಹೀಗಾಗಿ, ಅಂತಹವರನ್ನು ಕೈ ಬೀಸಿ ಕರೆಯುವಂತೆ ಮಾಡಲಾಗುತ್ತದೆ. ನಂತರ, ಸಮೀಪದಲ್ಲೇ ಇರುವ ಪ್ರಾದೇಶಿಕ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ಅಲ್ಲಿ ಅಪರೂಪದ ವಸ್ತುಗಳನ್ನು ಸಂಜೆಯ ತನಕವೂ ವೀಕ್ಷಣೆ ಮಾಡಲು ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಲಾಗಿದೆ. ಕಾರಂಜಿಕೆರೆಯನ್ನು ಒಂದು ಸುತ್ತು ಹಾಕಲು ಕನಿಷ್ಠ ೩ ಗಂಟೆಯಾದರೂ ಬೇಕು. ಕೆಲವರು ದೋಣಿವಿಹಾರದ ತನಕವೂ ಹೋಗಲಾಗದೆ ವಾಪಸ್ ಬಂದು ಬಿಡುತ್ತಾರೆ. ಈ ಯೋಜನೆಯಲ್ಲಿ ದೋಣಿ ವಿಹಾರದ ತನಕವೂ ನೋಡಿ ಬರುವಂತೆ ಮಾಡಿದರೆ ಮತ್ತಷ್ಟು ಅನುಕೂಲವಾಗಲಿದೆ ಎನ್ನುವ ನಿರೀಕ್ಷೆ ಹೊಂದಲಾಗಿದೆ.

ಏಕ ಪ್ರವೇಶ ಟಿಕೆಟ್: ಪ್ರವಾಸಿಗರು ಮೂರು ಕಡೆಗಳಲ್ಲಿ ಸಾಲಾಗಿ ನಿಂತು ಪ್ರತ್ಯೇಕ ಟಿಕೆಟ್ ಪಡೆಯುವುದರಿಂದ ಸಮಯ ಪೋಲಾಗುವುದನ್ನು ತಪ್ಪಿಸಲು ಒಂದೇ ಪ್ರವೇಶ ಟಿಕೆಟ್ ವ್ಯವಸ್ಥೆ ಜಾರಿಗೆ ಬರಲಿದೆ. ಮುಂದಿನ ದಿನಗಳಲ್ಲಿ ಪ್ರವೇಶ ದರವನ್ನು ನಿಗದಿಪಡಿಸಲಾಗುತ್ತದೆ. ಈ ಯೋಜನೆಯನ್ನು ಖಾಸಗಿಯವರಿಗೆ ನಿರ್ವಹಣೆ ಮಾಡಲು ಅವಕಾಶ ನೀಡದ ಕಾರಣ ಸ್ಥಳೀಯ ಮತ್ತು ಹೊರಗಿನ ಪ್ರವಾಸಿಗರಿಗೆ ಅನುಕೂಲ ಆಗುವ ರೀತಿಯಲ್ಲಿ ಪ್ರವೇಶ ದರ ನಿಗದಿಪಡಿಸುವ ಆಲೋಚನೆ ಇದೆ ಎಂದು ಗೊತ್ತಾಗಿದೆ. ಒಂದೇ ಪ್ರವೇಶ ಟಿಕೆಟ್ ಮಾಡಬೇಕೆಂಬ ಚಿಂತನೆಯನ್ನು ಹಲವು ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆ ಮಾಡಿಕೊಂಡುಬಂದಿದ್ದರೂ ಈ ತನಕ ಸಾಧ್ಯವಾಗಿರಲಿಲ್ಲ. ಆದರೆ, ಎಕಲಾಜಿಕಲ್ ಎಕ್ಸ್‌ಪೀರಿಯನ್ಸ್ ಟೂರಿಸಂ ಯೋಜನೆಯ ಮೂಲಕವಾದರೂ ಮೂರು ಸ್ಥಳಗಳ ವೀಕ್ಷಣೆಗೆ ಜಾರಿ ಮಾಡಿದರೆ ಮುಂದೆ ಇತರ ಸ್ಥಳಗಳಿಗೂ ವಿಸ್ತರಿಸಲು ನೆರವಾಗಬಹುದೆಂಬ ವಿಶ್ವಾಸವನ್ನು ಅಧಿಕಾರಿಗಳು ಹೊಂದಿದ್ದಾರೆ.

” ಸ್ವದೇಶ್ ದರ್ಶನ್ ೨.೦ ಯೋಜನೆಯಡಿ ಬಿಡುಗಡೆಯಾಗಿರುವ ೨೪ ಕೋಟಿ ರೂ. ಡಿಪಿಆರ್‌ಗೆ ಈಗಾಗಲೇ ಅನುಮೋದನೆ ದೊರೆತಿದೆ. ಸಿಎಂಸಿ ಸಭೆಯಲ್ಲಿ ಟೆಂಡರ್ ಕರೆಯಲು ಒಪ್ಪಿಗೆ ಸಿಕ್ಕಿರುವುದರಿಂದ ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು. ಪರಿಸರ ಪ್ರವಾಸೋದ್ಯಮಕ್ಕೆ ಒತ್ತು ನೀಡಿ ಹೊರಗಿನಿಂದ ಬಂದವರಿಗೆ ಎಕಲಾಜಿಕಲ್ ಟೂರಿಸಂನ ಆನಂದವನ್ನೂ ಅನುಭವಿಸುವಂತೆ ಮಾಡಲಾಗುವುದು.”

-ಎಂ.ಕೆ.ಸವಿತ, ಜಂಟಿ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ 

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

22 mins ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

2 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

3 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

3 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

5 hours ago