ಓದುಗರ ಪತ್ರ
ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದಕ್ಕೆ ಅಫಿಡವಿಟ್ನೊಂದಿಗೆ ದಾಖಲೆ ಸಲ್ಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ ನೀಡಿರುವುದು ಸ್ವಾಗತಾರ್ಹ.
ಜವಾಬ್ದಾರಿ ಸ್ಥಾನದಲ್ಲಿರುವ ನಾಯಕರು ಒಂದು ವಿಷಯದ ಬಗ್ಗೆ ಆರೋಪ ಮಾಡಿದರೆ ಅದಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ ಪೂರಕ ದಾಖಲೆಗಳನ್ನು ಒದಗಿಸಿ ಸಹಕರಿಸುವುದು ಉತ್ತಮ ನಡೆ. ಭಾರತದ ಚುನಾವಣಾ ಆಯೋಗ ಕಾಲಕ್ಕೆ ತಕ್ಕಂತೆ ಮತದಾನದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮಾದರಿಯಾಗಿದೆ. ಆದರೆ ರಾಹುಲ್ ಗಾಂಧಿ ಅವರ ಆರೋಪದಿಂದ ಚುನಾವಣಾ ಆಯೋಗದ ಬಗ್ಗೆ ಅನುಮಾನ ಪಡುವಂತಹ ಪರಿಸ್ಥಿತಿ ಉಂಟಾಗಿದೆ. ರಾಹುಲ್ ಗಾಂಧಿ ಅವರು ಆರೋಪವನ್ನು ಸಾಬೀತು ಪಡಿಸಲು ದಾಖಲೆ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸಾಬೀತಾಗಿ ರಾಹುಲ್ ಗಾಂಽ ಅವರಿಗೆ ಹಿನ್ನಡೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…