ಓದುಗರ ಪತ್ರ
ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದಕ್ಕೆ ಅಫಿಡವಿಟ್ನೊಂದಿಗೆ ದಾಖಲೆ ಸಲ್ಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ ನೀಡಿರುವುದು ಸ್ವಾಗತಾರ್ಹ.
ಜವಾಬ್ದಾರಿ ಸ್ಥಾನದಲ್ಲಿರುವ ನಾಯಕರು ಒಂದು ವಿಷಯದ ಬಗ್ಗೆ ಆರೋಪ ಮಾಡಿದರೆ ಅದಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ ಪೂರಕ ದಾಖಲೆಗಳನ್ನು ಒದಗಿಸಿ ಸಹಕರಿಸುವುದು ಉತ್ತಮ ನಡೆ. ಭಾರತದ ಚುನಾವಣಾ ಆಯೋಗ ಕಾಲಕ್ಕೆ ತಕ್ಕಂತೆ ಮತದಾನದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮಾದರಿಯಾಗಿದೆ. ಆದರೆ ರಾಹುಲ್ ಗಾಂಧಿ ಅವರ ಆರೋಪದಿಂದ ಚುನಾವಣಾ ಆಯೋಗದ ಬಗ್ಗೆ ಅನುಮಾನ ಪಡುವಂತಹ ಪರಿಸ್ಥಿತಿ ಉಂಟಾಗಿದೆ. ರಾಹುಲ್ ಗಾಂಧಿ ಅವರು ಆರೋಪವನ್ನು ಸಾಬೀತು ಪಡಿಸಲು ದಾಖಲೆ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸಾಬೀತಾಗಿ ರಾಹುಲ್ ಗಾಂಽ ಅವರಿಗೆ ಹಿನ್ನಡೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…