Andolana originals

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ ಹಂತಕ್ಕೆ ಬಂದಿದ್ದು, ಇಷ್ಟರಲ್ಲೇ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಆಗುವ ಲಕ್ಷಣ ಕಾಣುತ್ತಿದೆ.

ಮೇಲ್ಸೇತುವೆಗೆ ಗ್ರಾಮದ ಹೆದ್ದಾರಿ ಬದಿಯಲ್ಲಿ ೧.೨೭ ಹೆಕ್ಟೇರ್ ಭೂಮಿಯನ್ನು ಮುಂಚೆ ಸ್ವಾಧಿನ ಮಾಡಲಾಗಿದ್ದು, ಮುಂದು ವರಿದು ಈ ಮಧ್ಯೆ ಇನ್ನೂ ೦.೬ ಹೆಕ್ಟೇರ್ ಸ್ವಾಧಿನ ಆಗಿದೆ. ಬದನಗುಪ್ಪೆ ಎಲ್ಲೆಯ ೩೧, ಮುತ್ತಿಗೆ ಎಲ್ಲೆಯ ೩೯ ಸೇರಿ ಒಟ್ಟು ೭೦ ಮಂದಿಗೆ ಸೇರಿದ ಜಾಗವನ್ನು ಸ್ವಾಧಿನ ಮಾಡಿಕೊಳ್ಳಲಾಗಿದೆ. ೧,೨, ೩ ಹೀಗೆ ಬೆರಳೆಣಿಕೆಯಷ್ಟು ಗುಂಟೆ ಲೆಕ್ಕದಲ್ಲಿ ಬಹುತೇಕ ರೈತರ ಜಮೀನು ಹಾಗೂ ಮನೆಗಳ ಅಲ್ಪಸ್ವಲ್ಪ ಜಾಗ ಮೇಲ್ಸೇತುವೆಗೆ ಸ್ವಾಧಿನ ಆಗಿದೆ.

ಬದನಗುಪ್ಪೆ ಕೈಗಾರಿಕಾ ಪ್ರದೇಶಕ್ಕೆ ಸ್ವಾಧಿನ ಆಗಿರುವ ಭೂಮಿಗೆ ಪ್ರತಿ ಎಕರೆಗೆ ೭೮ ಲಕ್ಷ ರೂ.ನೀಡಲಾಗಿದ್ದು ಅದೇ ಮಾದರಿಯಲ್ಲಿ ದರ ನಿಗದಿ ಮಾಡಬೇಕು ಎಂಬುದು ಭೂಮಿ ಕಳೆದುಕೊಂಡವರ ಬೇಡಿಕೆ. ಅಷ್ಟು ದರ ನಿಗದಿ ಸಾಧ್ಯವಿಲ್ಲ. ಅದು ಕೈಗಾರಿಕಾ ಪ್ರದೇಶ. ಅಲ್ಲಿಗೂ ಇಲ್ಲಿಗೂ ತಾಳೆ ಮಾಡಲಾಗದು ಎಂಬುದು ಜಿಲ್ಲಾಡಳಿತದ ಅಭಿಪ್ರಾಯ. ಕೈಗಾರಿಕಾ ಪ್ರದೇಶಕ್ಕೂ ಮೇಲ್ಸೇತುವೆ ಸ್ಥಳಕ್ಕೂ ಎರಡ್ಮೂರು ಕಿ.ಮೀ. ಅಂತರವಷ್ಟೇ ಇದ್ದು, ಅಷ್ಟೇ ದರ ನೀಡುವಂತೆ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮೇಲೆ ಪ್ರತಿಭಟನೆ ನಡೆಯುತ್ತಲೇ ಇದೆ. ದರ ನಿಗದಿಯ ಕಗ್ಗಂಟಿನ ಕಾರಣಕ್ಕೆ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಬಹಳ ದಿನಗಳಿಂದ ಮುಂದೂಡಿಕೆ ಆಗುತ್ತಲೇ ಇದ್ದು ಸದ್ಯದಲ್ಲೇ ಸೂಕ್ತ ದರ ನಿಗದಿ ಮಾಡಿ ಇದಕ್ಕೆ ಸುಖಾಂತ್ಯ ಹಾಡಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

” ಭೂಸ್ವಾಧಿನ ಮಾಡಲಾಗಿರುವ ಭೂಮಿಗೆ ಹೆಚ್ಚಿನ ದರ ನೀಡಬೇಕು, ಮೇಲ್ಸೇತುವೆ ಬಳಿ ಅಂಡರ್ ಪಾಸ್ ಮಾಡಿ ಅಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಒತ್ತಾಯ.”

-ಬಸವಣ್ಣ, ರೈತ ಸಂಘದ ಜಿಲ್ಲಾ ಅಧ್ಯಕ್ಷರು

” ಭೂಮಿಗೆ ನಿಗದಿತ ದರಕ್ಕಿಂತ ಹೆಚ್ಚು ಬೆಲೆ ಸೇರಿದಂತೆ ಅಂಡರ್ ಪಾಸ್ ಮತ್ತು ಬಸ್ ನಿಲ್ದಾಣ ನಿರ್ಮಾಣ ಸಂಬಂಧದ ಅವರ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗಿದ್ದು, ಈ ವಾರದಲ್ಲಿ ಈ ಸಂಬಂಧ ಸಭೆ ಮಾಡಲಿದ್ದಾರೆ.

-ಜವರೇಗೌಡ, ಅಪರ ಜಿಲ್ಲಾಧಿಕಾರಿ

ಈ ಮಾರ್ಗದಲ್ಲಿ ೧೩ ಕಿ.ಮೀ. ಡಾಂಬರೀಕರಣ: 

ಚಾ.ನಗರ-ನಂಜನಗೂಡು ಹೆದ್ದಾರಿಯ ಡಾಂಬರೀಕರಣ ಕಾಮಗಾರಿಯನ್ನು ಬೆಂಡರವಾಡಿಯಿಂದ ನಗರದ ಸಂತೇಮರಹಳ್ಳಿ ವೃತ್ತದ ತನಕ ಸುಮಾರು ೧೩ ಕಿ.ಮೀ.ವರೆಗೆ ಕೈಗೆತ್ತಿಕೊಳ್ಳಲಾಗಿದೆ. ಹೆದ್ದಾರಿ ಪ್ರಾಧಿಕಾರದಿಂದ ದುರಸ್ತಿ ಕಾರ್ಯ ಮಾಡಲಾಗುತ್ತಿದ್ದು, ಬಹುತೇಕ ಡಾಂಬರೀಕರಣ ಮುಗಿದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳವಾದ ಪಣ್ಯದಹುಂಡಿ ಹಾಗೂ ಆಸುಪಾಸಿನ ಸ್ಥಳದಲ್ಲಿ ಡಾಂಬರೀಕರಣ ಬಾಕಿ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಳವಳ್ಳಿ ಎಇಇ ರೇಣುಕಾ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

10 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

12 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

13 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

13 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

13 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

13 hours ago