Andolana originals

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ ಹಂತಕ್ಕೆ ಬಂದಿದ್ದು, ಇಷ್ಟರಲ್ಲೇ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಆಗುವ ಲಕ್ಷಣ ಕಾಣುತ್ತಿದೆ.

ಮೇಲ್ಸೇತುವೆಗೆ ಗ್ರಾಮದ ಹೆದ್ದಾರಿ ಬದಿಯಲ್ಲಿ ೧.೨೭ ಹೆಕ್ಟೇರ್ ಭೂಮಿಯನ್ನು ಮುಂಚೆ ಸ್ವಾಧಿನ ಮಾಡಲಾಗಿದ್ದು, ಮುಂದು ವರಿದು ಈ ಮಧ್ಯೆ ಇನ್ನೂ ೦.೬ ಹೆಕ್ಟೇರ್ ಸ್ವಾಧಿನ ಆಗಿದೆ. ಬದನಗುಪ್ಪೆ ಎಲ್ಲೆಯ ೩೧, ಮುತ್ತಿಗೆ ಎಲ್ಲೆಯ ೩೯ ಸೇರಿ ಒಟ್ಟು ೭೦ ಮಂದಿಗೆ ಸೇರಿದ ಜಾಗವನ್ನು ಸ್ವಾಧಿನ ಮಾಡಿಕೊಳ್ಳಲಾಗಿದೆ. ೧,೨, ೩ ಹೀಗೆ ಬೆರಳೆಣಿಕೆಯಷ್ಟು ಗುಂಟೆ ಲೆಕ್ಕದಲ್ಲಿ ಬಹುತೇಕ ರೈತರ ಜಮೀನು ಹಾಗೂ ಮನೆಗಳ ಅಲ್ಪಸ್ವಲ್ಪ ಜಾಗ ಮೇಲ್ಸೇತುವೆಗೆ ಸ್ವಾಧಿನ ಆಗಿದೆ.

ಬದನಗುಪ್ಪೆ ಕೈಗಾರಿಕಾ ಪ್ರದೇಶಕ್ಕೆ ಸ್ವಾಧಿನ ಆಗಿರುವ ಭೂಮಿಗೆ ಪ್ರತಿ ಎಕರೆಗೆ ೭೮ ಲಕ್ಷ ರೂ.ನೀಡಲಾಗಿದ್ದು ಅದೇ ಮಾದರಿಯಲ್ಲಿ ದರ ನಿಗದಿ ಮಾಡಬೇಕು ಎಂಬುದು ಭೂಮಿ ಕಳೆದುಕೊಂಡವರ ಬೇಡಿಕೆ. ಅಷ್ಟು ದರ ನಿಗದಿ ಸಾಧ್ಯವಿಲ್ಲ. ಅದು ಕೈಗಾರಿಕಾ ಪ್ರದೇಶ. ಅಲ್ಲಿಗೂ ಇಲ್ಲಿಗೂ ತಾಳೆ ಮಾಡಲಾಗದು ಎಂಬುದು ಜಿಲ್ಲಾಡಳಿತದ ಅಭಿಪ್ರಾಯ. ಕೈಗಾರಿಕಾ ಪ್ರದೇಶಕ್ಕೂ ಮೇಲ್ಸೇತುವೆ ಸ್ಥಳಕ್ಕೂ ಎರಡ್ಮೂರು ಕಿ.ಮೀ. ಅಂತರವಷ್ಟೇ ಇದ್ದು, ಅಷ್ಟೇ ದರ ನೀಡುವಂತೆ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮೇಲೆ ಪ್ರತಿಭಟನೆ ನಡೆಯುತ್ತಲೇ ಇದೆ. ದರ ನಿಗದಿಯ ಕಗ್ಗಂಟಿನ ಕಾರಣಕ್ಕೆ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಬಹಳ ದಿನಗಳಿಂದ ಮುಂದೂಡಿಕೆ ಆಗುತ್ತಲೇ ಇದ್ದು ಸದ್ಯದಲ್ಲೇ ಸೂಕ್ತ ದರ ನಿಗದಿ ಮಾಡಿ ಇದಕ್ಕೆ ಸುಖಾಂತ್ಯ ಹಾಡಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

” ಭೂಸ್ವಾಧಿನ ಮಾಡಲಾಗಿರುವ ಭೂಮಿಗೆ ಹೆಚ್ಚಿನ ದರ ನೀಡಬೇಕು, ಮೇಲ್ಸೇತುವೆ ಬಳಿ ಅಂಡರ್ ಪಾಸ್ ಮಾಡಿ ಅಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಒತ್ತಾಯ.”

-ಬಸವಣ್ಣ, ರೈತ ಸಂಘದ ಜಿಲ್ಲಾ ಅಧ್ಯಕ್ಷರು

” ಭೂಮಿಗೆ ನಿಗದಿತ ದರಕ್ಕಿಂತ ಹೆಚ್ಚು ಬೆಲೆ ಸೇರಿದಂತೆ ಅಂಡರ್ ಪಾಸ್ ಮತ್ತು ಬಸ್ ನಿಲ್ದಾಣ ನಿರ್ಮಾಣ ಸಂಬಂಧದ ಅವರ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗಿದ್ದು, ಈ ವಾರದಲ್ಲಿ ಈ ಸಂಬಂಧ ಸಭೆ ಮಾಡಲಿದ್ದಾರೆ.

-ಜವರೇಗೌಡ, ಅಪರ ಜಿಲ್ಲಾಧಿಕಾರಿ

ಈ ಮಾರ್ಗದಲ್ಲಿ ೧೩ ಕಿ.ಮೀ. ಡಾಂಬರೀಕರಣ: 

ಚಾ.ನಗರ-ನಂಜನಗೂಡು ಹೆದ್ದಾರಿಯ ಡಾಂಬರೀಕರಣ ಕಾಮಗಾರಿಯನ್ನು ಬೆಂಡರವಾಡಿಯಿಂದ ನಗರದ ಸಂತೇಮರಹಳ್ಳಿ ವೃತ್ತದ ತನಕ ಸುಮಾರು ೧೩ ಕಿ.ಮೀ.ವರೆಗೆ ಕೈಗೆತ್ತಿಕೊಳ್ಳಲಾಗಿದೆ. ಹೆದ್ದಾರಿ ಪ್ರಾಧಿಕಾರದಿಂದ ದುರಸ್ತಿ ಕಾರ್ಯ ಮಾಡಲಾಗುತ್ತಿದ್ದು, ಬಹುತೇಕ ಡಾಂಬರೀಕರಣ ಮುಗಿದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳವಾದ ಪಣ್ಯದಹುಂಡಿ ಹಾಗೂ ಆಸುಪಾಸಿನ ಸ್ಥಳದಲ್ಲಿ ಡಾಂಬರೀಕರಣ ಬಾಕಿ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಳವಳ್ಳಿ ಎಇಇ ರೇಣುಕಾ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

1 hour ago

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…

1 hour ago

ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ, ಆದರೆ ಇದೇ ಪರಿಹಾರವಲ್ಲ: ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌…

1 hour ago

ತಮಿಳುನಾಡು ಸಿಎಂ ವಿಜಯ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…

2 hours ago

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

2 hours ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

3 hours ago