Andolana originals

ಮಳೆ ಬಿಡುವು: ಬಿರುಸುಗೊಂಡ ಕೃಷಿ ಚಟುವಟಿಕೆ

ಲಕ್ಷಿ ಕಾಂತ್ ಕೊಮಾರಪ್ಪ

ಕೃಷಿಕರಿಂದ ಅಗತ್ಯ ಸಾಮಗ್ರಿಗಳ ಖರೀದಿ; ಶೀಘ್ರದಲ್ಲೇ ಕೆಲಸ ಪೂರ್ಣಗೊಳಿಸಬೇಕಾದ ಅನಿವಾರ್ಯತೆ 

ಸೋಮವಾರಪೇಟೆ: ವಾಯುಭಾರ ಕುಸಿತದಿಂದ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಒಂದು ವಾರ ಧಾರಾಕಾರವಾಗಿ ಸುರಿದ ಮಳೆಯು ಬಿಡುವು ನೀಡಿದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದ ಕೃಷಿ ಫಸಲಿಗೆ ಹಾನಿಯಾಗಿತ್ತು. ಹಸಿಮೆಣಸಿನ ಗಿಡಗಳು ಗಾಳಿ ಮಳೆಗೆ ನೆಲಕಚ್ಚಿದ್ದವು. ಬೀನ್ಸ್ ಹಾಗೂ ತರಕಾರಿ ಬೆಳೆಗಳಿಗೂ ಹಾನಿಯಾಗಿತ್ತು. ಕಾಫಿ ತೋಟಗಳಲ್ಲಿ ತೇವಾಂಶ ಹೆಚ್ಚಾಗಿ, ಕಾಫಿ ಗಿಡಗಳ ಎಲೆಗಳು ಉದುರಲು ಪ್ರಾರಂಭಿಸಿದ್ದವು. ಧಾರಾಕಾರ ಮಳೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿತ್ತು. ಭತ್ತ ಸಸಿ ಮಡಿ ಮಾಡಲು ಸಾಧ್ಯವಾಗಿರಲಿಲ್ಲ. ಕಾಫಿ ತೋಟಗಳಿಗೆ ಶಿಲೀಂಧ್ರ ನಾಶಕ ಸಿಂಪಡಿಸುವುದು, ಮರ ಕಪಾತು, ರಾಸಾಯನಿಕ ಗೊಬ್ಬರವನ್ನು ಹಾಕುವ ಕೆಲಸಗಳಿಗೆ ಹಿನ್ನೆಡೆಯಾಗಿತ್ತು. ಇದೀಗ ಬಿಸಿಲಿನ ವಾತಾವರಣ ಕಾಣಿಸಿಕೊಂಡಂತೆ ಗ್ರಾಮೀಣ ಪ್ರದೇಶದಲ್ಲಿ ರೈತರು ಕೃಷಿ ಚಟುವಟಿಕೆಗೆ ಸಿದ್ಧವಾಗುತ್ತಿದ್ದಾರೆ. ಭೂಮಿಯಲ್ಲಿ ಭತ್ತದ ಸಸಿಮಡಿ ಮಾಡಲು ಗದ್ದೆಯನ್ನು ಉತ್ತು ಮಣ್ಣನ್ನು ಹದಗೊಳಿಸಲು ಕೃಷಿಕರು ಮುಂದಾಗಿದ್ದಾರೆ.

ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸುತ್ತಿರುವ ಕೃಷಿಕರು, ಕೃಷಿಗೆ ಅಗತ್ಯ ಪರಿಕರಗಳನ್ನು ಖರೀದಿ ಮಾಡುತ್ತಿದ್ದ ಚಿತ್ರಣಗಳು ಕಂಡುಬರುತ್ತಿದೆ. ಗುದ್ದಲಿಗಳ ಖರೀದಿ, ಗದ್ದೆ ಉಳುಮೆ ಮಾಡುವಾಗ ಮಳೆಯಿಂದ ರಕ್ಷಣೆ ಪಡೆಯಲು ಪ್ಲಾಸ್ಟಿಕ್ ಹೊದಿಕೆಗಳು ಹಾಗೂ ಭತ್ತ ಬಿತ್ತನೆ ಬೀಜಕ್ಕೆ ಸಿಂಪಡಿಸುವ ಕ್ರಿಮಿನಾಶಕಗಳನ್ನು ಕೊಂಡುಕೊಂಡರು. ಕಾಫಿ ತೋಟಗಳಿಗೆ ರಾಸಾಯನಿಕ ಗೊಬ್ಬರ ಹಾಕಲು ವಿಳಂಬವಾದ ಹಿನ್ನೆಲೆಯಲ್ಲಿ, ಬೆಳೆಗಾರರು ಕಾಫಿ ಬುಡವನ್ನು ಸ್ವಚ್ಛಗೊಳಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇನ್ನೆರಡು ದಿನಗಳ ಕಾಲ ಮಳೆ ಬಿಡುವು ಕೊಟ್ಟರೆ ಕಾಫಿ ತೋಟದ ಕೆಲಸಗಳನ್ನು ಮುಂದುವರಿಸಬಹುದು ಎಂದು ಕಾಫಿ ಬೆಳೆಗಾರ ದಿವಾಕರ್ ಕೂತಿ ಹೇಳಿದರು.

ಕಾಫಿ ಗಿಡದ ಚಿಗುರು ತೆಗೆದು, ರಾಸಾಯನಿಕ ಗೊಬ್ಬರ ಹಾಕಿ ಶಿಲೀಂಧ್ರನಾಶಕ ಸಿಂಪಡಿಸುವುದು ಅನಿವಾರ್ಯವಾಗಿದೆ. ಈಗ ಕಾರ್ಮಿಕರ ಕೊರತೆಯಿಂದ ನಿಗದಿತ ಸಮಯದಲ್ಲಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ಬೆಳೆಗಾರರು. ತಾಲ್ಲೂಕಿನ ಶಾಂತಳ್ಳಿ ಹೋಬಳಿಯಾದ್ಯಂತ ಕೃಷಿ ಚಟುವಟಿಕೆ ಹೆಚ್ಚು ಬಿರುಸುಗೊಂಡಿದೆ. ಟ್ರಾಕ್ಟರ್, ಎತ್ತುಗಳ ಮೂಲಕ ಉಳುಮೆ ಶುರುವಾಗಿದೆ. ದೀರ್ಘಾವಽ ತಳಿಗಳ ಸಸಿಮಡಿ ಮಾಡುತ್ತಿದ್ದು, ಗದ್ದೆಗಳನ್ನು ಉಳುಮೆ ಕಾರ್ಯಕ್ಕೆ ಸಿದ್ಧಪಡಿಸುವ ಸಂಬಂಧ ಕೆಲವು ರೈತರು ಟಿಲ್ಲರ್, ಟ್ರಾಕ್ಟರ್ ಇನ್ನಿತರೆ ಯಂತ್ರೋಪಕರಣಗಳ ಮೊರೆ ಹೋಗಿದ್ದಾರೆ. ಸೂಕ್ತ ವ್ಯವಸ್ಥೆ ಇಲ್ಲದವವರು ಸಾಂಪ್ರಾದಾಯಕ ಜೋಡೆತ್ತಿಗೆ ನೇಗಿಲು ಕಟ್ಟಿಕೊಂಡು ಉಳುಮೆ ಮಾಡುತ್ತಿದ್ದಾರೆ.

ಮಳೆ ಇದ್ದಾಗಲೇ ಸಸಿಮಡಿ ಮಾಡಿಕೊಂಡು ಗದ್ದೆಯ ಮಣ್ಣನ್ನು ಹದಗೊಳಿಸಬೇಕು, ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆ ಸುರಿದಿದೆ. ವ್ಯಾಪ್ತಿಯ ಕುಂಬಾರಗಡಿಗೆ, ಸೂರ್ಲಬ್ಬಿ, ಮಂಕ್ಯಾ, ಗರ್ವಾಲೆ, ಕಿಕ್ಕರಹಳ್ಳಿ ಗ್ರಾಮಗಳಲ್ಲಿ ಕೃಷಿಕರಿಗೆ ಸದ್ಯಕ್ಕೆ ಭತ್ತವೇ ಜೀವನಾಧಾರ ಬೆಳೆಯಾಗಿದೆ. ಈ ಕಾರಣದಿಂದ ಭತ್ತದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

” ವಾಡಿಕೆಯಂತೆ ಜೂನ್ ಎರಡನೇ ವಾರದಲ್ಲಿ ಮಳೆ ಪ್ರಾರಂಭವಾಗಿದ್ದರೆ, ದೊಡ್ಡಮಟ್ಟದ ಸಮಸ್ಯೆಯಾಗುತ್ತಿರಲಿಲ್ಲ. ಆದರೆ, ಈ ಬಾರಿ ಬೇಗನೆ ಮಳೆ ಸುರಿದಿದ್ದು, ಕೆಲಸಗಳು ವಿಳಂಬವಾಗಿವೆ. ಶೀಘ್ರದಲ್ಲಿ ಕೆಲಸಗಳನ್ನು ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಪ್ರತಿ ವರ್ಷವೂ ಈ ಅಕಾಲಿಕ ಮಳೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಬೇಕಾಗಿದೆ.”

-ಶರಣ್ ಹರಗ, ಕೃಷಿಕರು, ಸೋಮವಾರಪೇಟೆ

” ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಭತ್ತ ಸಸಿ ಮಾಡಲು ರೈತರು ಮುಂದಾಗಿದ್ದಾರೆ. ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜ ಸಬ್ಸಿಡಿಯಲ್ಲಿ ದೊರೆಯುತ್ತದೆ. ಇಂಟಾನ್, ತುಂಗ, ಬಿ.ಆರ್.ಅಥಿರಾ, ಐಆರ್೬೪, ಎಂಟಿಯು ೧೦೦೧ ಭತ್ತದ ಬೀಜವನ್ನು ರೈತರಿಗೆ ವಿತರಿಸಲಾಗುವುದು.”

-ಕೆ.ಪಿ.ವೀರಣ್ಣ, ಕೃಷಿ ಸಹಾಯಕ ನಿರ್ದೇಶಕ, ಸೋಮವಾರಪೇಟೆ

ಕಾಫಿ ಬೆಳೆಯೇ ಹೆಚ್ಚು: 

ಸೋಮವಾರಪೇಟೆ ತಾಲ್ಲೂಕಿನಲ್ಲಿ ವಾರ್ಷಿಕವಾಗಿ ೯,೪೦೦ ಹೆಕ್ಟೆರ್ ಭತ್ತ, ೩,೮೦೦ ಹೆಕ್ಟೆರ್‌ನಲ್ಲಿ ಮುಸುಕಿನ ಜೋಳ, ಬಾಳೆ, ಶುಂಠಿ ಬೆಳೆಯಲಾಗುತ್ತದೆ. ಹಿಂಗಾರುವಿನಲ್ಲಿ ೫೦೦ರಿಂದ ೬೦೦ ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ, ೩೦ ಹೆಕ್ಟೇರ್ ನಲ್ಲಿ ಹೊಗೆಸೊಪ್ಪು, ೪೦ ಹೆಕ್ಟೇರ್‌ನಲ್ಲಿ ರಾಗಿ ಬೆಳೆಯಲಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು ೨೮,೫೪೦ ಹೆ.ನಲ್ಲಿ ಕಾಫಿ ಬೆಳೆಯುತ್ತಿದ್ದು, ೨೨,೯೪೦ ಹೆ.ನಲ್ಲಿ ಅರೇಬಿಕಾ, ೫,೬೦೦ ಹೆ.ನಲ್ಲಿ ರೊಬೆಸ್ಟಾ ಬೆಳೆಯಲಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕಿನ ಅರೇಬಿಕಾ ಕಾಫಿಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಶೇ.೮೦ರಷ್ಟು ಮಂದಿ ಹಿಂಗಾರು ಮತ್ತು ಮುಂಗಾರು ಮಳೆಯನ್ನು ಆಶ್ರಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

2 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

4 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

6 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

6 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

7 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

11 hours ago