Andolana originals

ಮಳೆ : ಕಂಟ್ರೋಲ್‌ ರೂಂಗೆ ದೂರುಗಳ ಸುರಿಮಳೆ

10 ದಿನಗಳಲ್ಲಿ ಬರೋಬ್ಬರಿ 372ದೂರುಗಳು ದಾಖಲು; ಸಮಸ್ಯೆ ಇತ್ಯರ್ಥ

ಎಚ್. ಎಸ್. ದಿನೇಶ್ ಕುಮಾರ್
ಮೈಸೂರು: ಮಳೆಗಾಲ ಹಾಗೂ ಸಾಮಾನ್ಯ ಸಂದರ್ಭ ಗಳಲ್ಲಿ ತುರ್ತು ಕಾರ್ಯನಿರ್ವಹಣೆಗಾಗಿ ಮಹಾನಗರಪಾಲಿಕೆ 24*7 ಕೆಲಸ ಮಾಡುವ ನಿಯಂತ್ರಣ ಕೊಠಡಿಯನ್ನು ತೆರೆದಿದೆ. ಮಳೆ ಆರಂಭವಾದ ಕಳೆದ ೧೦ ದಿನಗಳಲ್ಲಿ ಕಂಟ್ರೋಲ್ ರೂಂಗೆ ಬರೋಬ್ಬರಿ ೩೭೨ ಮಂದಿ ದೂರು ದಾಖಲಿಸಿ ಸಮಸ್ಯೆಗೆ ಪರಿಹಾರ ಕಂಡು ಕೊಂಡಿದ್ದಾರೆ.

ಈ ಮೊದಲಾದರೆ ಸ್ಥಳೀಯರು ಆಯಾ ವಾರ್ಡ್‌ನ ನಗರಪಾಲಿಕೆ ಸದಸ್ಯರ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದರು. ಸದಸ್ಯರೂ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಚಾರ ತಿಳಿಸಿ ಸಮಸ್ಯೆ ಯನ್ನು ಬಗೆಹರಿಸುತ್ತಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ನಗರಪಾಲಿಕೆಗೆ ಚುನಾವಣೆ ನಡೆಯದ ಕಾರಣ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲ. ಇನ್ನು ಅಧಿಕಾರಿ ವರ್ಗ ಜನರಿಗೆ ಸ್ಪಂದಿಸುವುದು ತೀರಾ ಅಪರೂಪ. ಅವರು ಜನರ ಕೈಗೂ ಸಿಗುವುದಿಲ್ಲ. ದೂರವಾಣಿ ಸಂಪರ್ಕಕ್ಕೂ ದಕ್ಕುವುದಿಲ್ಲ. ಹೀಗಾಗಿ ಜನರಿಗೆ ಸದ್ಯಕ್ಕೆ ಆಶಾಕಿರಣದಂತಿರುವುದು ನಗರ ಪಾಲಿಕೆಯ ಕಂಟ್ರೋಲ್ ರೂಂ. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ನಗರಪಾಲಿಕೆ ಈ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಪ್ರಸ್ತುತ ನಗರಪಾಲಿಕೆ ಕಂಟ್ರೋಲ್ ರೂಂನಲ್ಲಿ ಮೂರು ಪಾಳಿಗಳಲ್ಲಿ ೭ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ ಓರ್ವ ಅಂಗವಿಕಲರೂ ಇದ್ದಾರೆ.

ನಗರದಾದ್ಯಂತ ಒಳಚರಂಡಿ, ಮೋರಿ ಸ್ವಚ್ಛತೆ, ಬೀದಿ ದೀಪ, ನಾಯಿಗಳ ಕಾಟ, ಮರ ಬಿದ್ದಲ್ಲಿ, ರಸ್ತೆಯಲ್ಲಿ ನೀರು ಹರಿಯುತ್ತಿದ್ದಲ್ಲಿ, ಖಾಲಿ ನಿವೇಶನ ಸ್ವಚ್ಛಗೊಳಿಸ ಬೇಕಾದಲ್ಲಿ, ಕಸ ಸಂಗ್ರಹಣೆಗೆ ಪೌರಕಾರ್ಮಿಕರು ಬಾರದಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಂ ಸಿಬ್ಬಂದಿಯನ್ನು ಸಂಪರ್ಕಿಸಬಹುದಾಗಿದೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಅವರು ನಿಮ್ಮ ಹೆಸರು, ಮೊಬೈಲ್ ಸಂಖ್ಯೆಯನ್ನು ನಮೂದು ಮಾಡಿಕೊ ಳ್ಳುತ್ತಾರೆ. ನಂತರ ಸಂಬಂಧಪಟ್ಟ ವಲಯ ಕಚೇರಿ ಅಽಕಾರಿಗಳಿಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿ ತಕ್ಷಣವೇ ಸಂಬಂಧಪಟ್ಟವರನ್ನು ಸ್ಥಳಕ್ಕೆ ಕಳುಹಿಸುವಂತೆ ತಿಳಿಸುತ್ತಾರೆ. ಅದರಂತೆ ಕಳೆದ ೧೦ ದಿನಗಳಲ್ಲಿ ಯುಜಿಡಿ, ಮರ ಉರುಳಿರುವುದು, ಮೋರಿ ಸ್ವಚ್ಛತೆ ಬಗ್ಗೆ ಸುಮಾರು ೩೭೨ ಮಂದಿ ಸಾರ್ವಜನಿಕರು ದೂರು ದಾಖಲಿಸಿ ದ್ದಾರೆ.

ಉಳಿದಂತೆ ರಸ್ತೆ ಕೆಲಸ ಆಗಿಲ್ಲ, ರಸ್ತೆಗಳು ಗುಂಡಿ ಬಿದ್ದಿವೆ, ಮೋರಿ ಕುಸಿತ ಸೇರಿದಂತೆ ಮುಂತಾದ ಕಾರಣ ಗಳಿಗಾಗಿ ೭೦ಕ್ಕೂ ಹೆಚ್ಚು ಮಂದಿ ಕಂಟ್ರೋಲ್ ರೂಂಗೆ ದೂರು ನೀಡಿದ್ದಾರೆ. ಇವುಗಳನ್ನು ಅಲ್ಲಿನ ಸಿಬ್ಬಂದಿ ವಲಯ ಕಚೇರಿಗಳ ಇಂಜಿನಿಯರಿಂಗ್ ವಿಭಾಗಕ್ಕೆ ರವಾನಿಸಿದ್ದಾರೆ. ತಕ್ಷಣವೇ ಸಿಬ್ಬಂದಿ ಕಾರ್ಯ ಪ್ರವೃತ್ತರಾಗುತ್ತಿದ್ದಾರೆ.

ಸಮಸ್ಯೆಗಳಿದಲ್ಲಿ ತಿಳಿಸಿ
ಮಳೆಯಿಂದ ನಿಮ್ಮ ಬಡಾವಣೆಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಹಾಗೂ ಅನಾಹುತಗಳ ಕುರಿತು ಚಿತ್ರ ಸಹಿತ ‘ಆಂದೋಲನ’ ಪತ್ರಿಕೆಗೆ ಕಳುಹಿಸಿ ಆ ಮೂಲಕ ಪರಿಹಾರ ಕಂಡುಕೊಳ್ಳಬಹುದು. 9071777071

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

8 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

11 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

12 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

12 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

13 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

13 hours ago