Andolana originals

ಮಳೆ : ಕಂಟ್ರೋಲ್‌ ರೂಂಗೆ ದೂರುಗಳ ಸುರಿಮಳೆ

10 ದಿನಗಳಲ್ಲಿ ಬರೋಬ್ಬರಿ 372ದೂರುಗಳು ದಾಖಲು; ಸಮಸ್ಯೆ ಇತ್ಯರ್ಥ

ಎಚ್. ಎಸ್. ದಿನೇಶ್ ಕುಮಾರ್
ಮೈಸೂರು: ಮಳೆಗಾಲ ಹಾಗೂ ಸಾಮಾನ್ಯ ಸಂದರ್ಭ ಗಳಲ್ಲಿ ತುರ್ತು ಕಾರ್ಯನಿರ್ವಹಣೆಗಾಗಿ ಮಹಾನಗರಪಾಲಿಕೆ 24*7 ಕೆಲಸ ಮಾಡುವ ನಿಯಂತ್ರಣ ಕೊಠಡಿಯನ್ನು ತೆರೆದಿದೆ. ಮಳೆ ಆರಂಭವಾದ ಕಳೆದ ೧೦ ದಿನಗಳಲ್ಲಿ ಕಂಟ್ರೋಲ್ ರೂಂಗೆ ಬರೋಬ್ಬರಿ ೩೭೨ ಮಂದಿ ದೂರು ದಾಖಲಿಸಿ ಸಮಸ್ಯೆಗೆ ಪರಿಹಾರ ಕಂಡು ಕೊಂಡಿದ್ದಾರೆ.

ಈ ಮೊದಲಾದರೆ ಸ್ಥಳೀಯರು ಆಯಾ ವಾರ್ಡ್‌ನ ನಗರಪಾಲಿಕೆ ಸದಸ್ಯರ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದರು. ಸದಸ್ಯರೂ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಚಾರ ತಿಳಿಸಿ ಸಮಸ್ಯೆ ಯನ್ನು ಬಗೆಹರಿಸುತ್ತಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ನಗರಪಾಲಿಕೆಗೆ ಚುನಾವಣೆ ನಡೆಯದ ಕಾರಣ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲ. ಇನ್ನು ಅಧಿಕಾರಿ ವರ್ಗ ಜನರಿಗೆ ಸ್ಪಂದಿಸುವುದು ತೀರಾ ಅಪರೂಪ. ಅವರು ಜನರ ಕೈಗೂ ಸಿಗುವುದಿಲ್ಲ. ದೂರವಾಣಿ ಸಂಪರ್ಕಕ್ಕೂ ದಕ್ಕುವುದಿಲ್ಲ. ಹೀಗಾಗಿ ಜನರಿಗೆ ಸದ್ಯಕ್ಕೆ ಆಶಾಕಿರಣದಂತಿರುವುದು ನಗರ ಪಾಲಿಕೆಯ ಕಂಟ್ರೋಲ್ ರೂಂ. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ನಗರಪಾಲಿಕೆ ಈ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಪ್ರಸ್ತುತ ನಗರಪಾಲಿಕೆ ಕಂಟ್ರೋಲ್ ರೂಂನಲ್ಲಿ ಮೂರು ಪಾಳಿಗಳಲ್ಲಿ ೭ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ ಓರ್ವ ಅಂಗವಿಕಲರೂ ಇದ್ದಾರೆ.

ನಗರದಾದ್ಯಂತ ಒಳಚರಂಡಿ, ಮೋರಿ ಸ್ವಚ್ಛತೆ, ಬೀದಿ ದೀಪ, ನಾಯಿಗಳ ಕಾಟ, ಮರ ಬಿದ್ದಲ್ಲಿ, ರಸ್ತೆಯಲ್ಲಿ ನೀರು ಹರಿಯುತ್ತಿದ್ದಲ್ಲಿ, ಖಾಲಿ ನಿವೇಶನ ಸ್ವಚ್ಛಗೊಳಿಸ ಬೇಕಾದಲ್ಲಿ, ಕಸ ಸಂಗ್ರಹಣೆಗೆ ಪೌರಕಾರ್ಮಿಕರು ಬಾರದಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಂ ಸಿಬ್ಬಂದಿಯನ್ನು ಸಂಪರ್ಕಿಸಬಹುದಾಗಿದೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಅವರು ನಿಮ್ಮ ಹೆಸರು, ಮೊಬೈಲ್ ಸಂಖ್ಯೆಯನ್ನು ನಮೂದು ಮಾಡಿಕೊ ಳ್ಳುತ್ತಾರೆ. ನಂತರ ಸಂಬಂಧಪಟ್ಟ ವಲಯ ಕಚೇರಿ ಅಽಕಾರಿಗಳಿಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿ ತಕ್ಷಣವೇ ಸಂಬಂಧಪಟ್ಟವರನ್ನು ಸ್ಥಳಕ್ಕೆ ಕಳುಹಿಸುವಂತೆ ತಿಳಿಸುತ್ತಾರೆ. ಅದರಂತೆ ಕಳೆದ ೧೦ ದಿನಗಳಲ್ಲಿ ಯುಜಿಡಿ, ಮರ ಉರುಳಿರುವುದು, ಮೋರಿ ಸ್ವಚ್ಛತೆ ಬಗ್ಗೆ ಸುಮಾರು ೩೭೨ ಮಂದಿ ಸಾರ್ವಜನಿಕರು ದೂರು ದಾಖಲಿಸಿ ದ್ದಾರೆ.

ಉಳಿದಂತೆ ರಸ್ತೆ ಕೆಲಸ ಆಗಿಲ್ಲ, ರಸ್ತೆಗಳು ಗುಂಡಿ ಬಿದ್ದಿವೆ, ಮೋರಿ ಕುಸಿತ ಸೇರಿದಂತೆ ಮುಂತಾದ ಕಾರಣ ಗಳಿಗಾಗಿ ೭೦ಕ್ಕೂ ಹೆಚ್ಚು ಮಂದಿ ಕಂಟ್ರೋಲ್ ರೂಂಗೆ ದೂರು ನೀಡಿದ್ದಾರೆ. ಇವುಗಳನ್ನು ಅಲ್ಲಿನ ಸಿಬ್ಬಂದಿ ವಲಯ ಕಚೇರಿಗಳ ಇಂಜಿನಿಯರಿಂಗ್ ವಿಭಾಗಕ್ಕೆ ರವಾನಿಸಿದ್ದಾರೆ. ತಕ್ಷಣವೇ ಸಿಬ್ಬಂದಿ ಕಾರ್ಯ ಪ್ರವೃತ್ತರಾಗುತ್ತಿದ್ದಾರೆ.

ಸಮಸ್ಯೆಗಳಿದಲ್ಲಿ ತಿಳಿಸಿ
ಮಳೆಯಿಂದ ನಿಮ್ಮ ಬಡಾವಣೆಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಹಾಗೂ ಅನಾಹುತಗಳ ಕುರಿತು ಚಿತ್ರ ಸಹಿತ ‘ಆಂದೋಲನ’ ಪತ್ರಿಕೆಗೆ ಕಳುಹಿಸಿ ಆ ಮೂಲಕ ಪರಿಹಾರ ಕಂಡುಕೊಳ್ಳಬಹುದು. 9071777071

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

3 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

5 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

6 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

7 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

9 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

10 hours ago