Andolana originals

ಅರಣ್ಯ ಪ್ರದೇಶದಲ್ಲಿ ಮಳೆ, ಪ್ರಾಣಿಗಳಿಗಿಲ್ಲ ನೀರಿನ ಚಿಂತೆ

ಯುಗಾದಿ ಮುನ್ನವೇ ಮಳೆಯ ಸಿಂಚನಕ್ಕೆ ಅಧಿಕಾರಿಗಳ ಮನದಲ್ಲಿ ಸಂತಸ; ಒಂದೂವರೆ ತಿಂಗಳಿನಿಂದ ಒಣಗಿದ್ದ ಕುರುಚಲು ಗಿಡಗಳಿಗೆ ನೀರಿನ ಆಸರೆ

ಕೆ. ಬಿ. ರಮೇಶನಾಯಕ

ಮೈಸೂರು: ತೀವ್ರ ಬಿಸಿಲಿನಿಂದ ಒಣಗಿದ್ದ ಅಭಯಾರಣ್ಯ ಪ್ರದೇಶಗಳಲ್ಲಿ ಭಾನುವಾರದಿಂದ ಸತತವಾಗಿ ೩ ದಿನಗಳು ಉತ್ತಮವಾದ ಮಳೆಯಾಗಿದ್ದು, ವನ್ಯಜೀವಿಗಳಿಗೆ ಕಾಡಿದ್ದ ಕುಡಿಯುವ ನೀರಿನ ಆತಂಕ ಸ್ವಲ್ಪ ದಿನಗಳ ಮಟ್ಟಿಗೆ ದೂರವಾಗಿದೆ.

ಕಾಡಿನಲ್ಲಿ ಇರುವ ಕೆರೆಗಳಿಗೆ ಟ್ಯಾಂಕರ್ ಮೂಲಕ ನೀರು ತುಂಬಿಸುವ ಕೆಲಸ ಮಾಡಲಾಗಿತ್ತಾದರೂ ಮೂರು ದಿನಗಳು ಬಿದ್ದ ಮಳೆಯಿಂದಾಗಿ ಕೆರೆಗಳಿಗೆ ನೀರು ಸೇರುವ ಜತೆಗೆ ಒಣಗಿದ್ದ ಕುರುಚಲು ಗಿಡಗಳಿಗೆ ನೀರಿನ ಆಸರೆಯಾಗಿದೆ. ಅದರಲ್ಲೂ ಮಲೆಮಹದೇಶ್ವರ ಬೆಟ್ಟ, ಬಿಆರ್‌ಟಿ ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶಗಳಲ್ಲಿ ಮಳೆಯಾಗಿರುವುದು ಅಽಕಾರಿಗಳಲ್ಲಿದ್ದ ಆತಂಕವನ್ನು ಕಡಿಮೆ ಮಾಡಿದೆ.

ಬೇಸಿಗೆ ಕಾಲ ಆಗಮನವಾಗುತ್ತಿದ್ದಂತೆ ಕಾಡಿನಲ್ಲಿ ಮರಗಿಡಗಳು ಒಣಗಿ, ಕೆರೆಕಟ್ಟೆಗಳು ಬರಿದಾಗಿ ವನ್ಯಜೀವಿಗಳು ಆಹಾರ, ನೀರು ಹುಡುಕಿಕೊಂಡು ನಾಡಿನತ್ತ ಬರುತ್ತಿದ್ದವು. ಅದರಲ್ಲೂ ಆನೆ, ಜಿಂಕೆ, ಹುಲಿ, ಚಿರತೆ ಮೊದಲಾದ ಪ್ರಾಣಿಗಳಿಗೆ ನೀರು ಸಿಗುವಂತೆ ಮಾಡಲು ಕೆರೆಗಳಿಗೆ ನೀರು ತುಂಬಿಸುವುದು ಮೊದಲಿನಿಂದಲೂ ನಡೆದುಕೊಂಡು ಬಂದಿತ್ತು. ಆದರೆ, ಯುಗಾದಿ ಹಬ್ಬಕ್ಕೆ ೧೦ ದಿನಗಳು ಇರುವಂತೆಯೇ ಮಳೆಯ ಆಗಮನವಾಗಿರುವುದು ಗಮನಾರ್ಹವಾಗಿದೆ.

ನಾಗರಹೊಳೆ ಪ್ರದೇಶದಲ್ಲಿ ಉತ್ತಮ ಮಳೆ: ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಯ ವೀರನಹೊಸಹಳ್ಳಿ, ಮತ್ತಿಗೋಡು, ಅಂತರಸಂತೆ, ಕಲ್ಲಹಳ್ಳ ಬಳಿ ಉತ್ತಮ ಮಳೆಯಾಗಿದ್ದರೆ, ಬಂಡೀಪುರ ಭಾಗದಲ್ಲಿ ಒಂದು ಸೆಂ. ಮೀಟರ್, ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಎರಡು ಸೆಂ. ಮೀಟರ್ ಮಳೆಯಾಗಿದೆ ಎಂದು ಹೇಳಲಾಗಿದೆ. ಸೋಮವಾರ ಸಂಜೆ ಸುರಿದ ಮಳೆಯು ಕಟ್ಟೆಗಳಿಗೆ ನೀರು ಹರಿದು ಬಂದಿದ್ದು, ಮರಗಿಡಗಳು, ಕುರುಚಲುಗಿಡಗಳಿಗೆ ನೀರು ಸಿಕ್ಕಿರುವುದರಿಂದ ಹಸಿರುಕಾಣಿಸಿಕೊಳ್ಳಲು ದಾರಿಯಾಗಿದೆ. ಒಂದೇ ಮಳೆಗೆ ಕನಿಷ್ಠ ಹತ್ತು ದಿನಗಳ ಕಾಲ ಹಸಿರಿನಿಂದ ಕೂಡಿರುವ ಜತೆಗೆ ಜಿಂಕೆ, ಆನೆಗಳು, ಕಡವೆ, ಹುಲಿಗಳಿಗೆ ನೀರು ಅಲ್ಲಲ್ಲಿ ದೊರೆಯಲಿದೆ ಎಂದು ಎಸಿಎಫ್ ಲಕ್ಷ್ಮೀಕಾಂತ್ ಹೇಳುತ್ತಾರೆ. ‌

ಕಾಡ್ಗಿಚ್ಚಿನ ಪ್ರಕರಣ ಇಲ್ಲ
ಕಳೆದ ಒಂದೂವರೆ ತಿಂಗಳಿಂದ ಬಂಡೀಪುರ, ನಾಗರಹೊಳೆ ಅರಣ್ಯ ಪ್ರದೇಶಗಳಲ್ಲಿ ಒಂದೇ ಒಂದು ಕಾಡ್ಗಿಚ್ಚಿನ ಪ್ರಕರಣ ಸಂಭವಿಸಿಲ್ಲ. ಬೇಸಿಗೆ ಕಾಲದಲ್ಲಿ ಉಂಟಾಗುವ ಕಾಡ್ಗಿಚ್ಚು ಅಥವಾ ದುಷ್ಕರ್ಮಿಗಳ ಕೃತ್ಯದಿಂದ ಕಾಡಂಚಿನ ಪ್ರದೇಶಗಳಿಗೆ ಬೆಂಕಿ ಬೀಳದಂತೆ ತಂಡಗಳನ್ನು ರಚನೆ ಮಾಡಿ ವಿಶೇಷ ನಿಗಾ ಇಡಲಾಗಿತ್ತು. ಅಲ್ಲಲ್ಲಿ ಫೈರ್‌ಲೈನ್ ಮಾಡಿಕೊಂಡು ನೀರನ್ನು ಸಿಂಪಡಿಸುವ ಕೆಲಸ ಮಾಡಿದ್ದರಿಂದ ಅರಣ್ಯ ಇಲಾಖೆ ಅಽಕಾರಿಗಳ ಯೋಜನೆ ಸಫಲವಾಗಿದೆ. ಇದಕ್ಕಾಗಿ ಅಗ್ನಿಶಾಮಕ ವಾಹನ ಮಾದರಿಯಲ್ಲಿಯೇ ಲಘು ವಾಹನ ತಯಾರಿಸಿ, ಇದರ ಬಳಕೆ ಕುರಿತು ಸಿಬ್ಬಂದಿಗೆ ತರಬೇತಿ ನೀಡಲಾಗಿತ್ತು ಎಂದು ಎಸಿಎ- ಲಕ್ಷ್ಮೀಕಾಂತ್ ಹೇಳಿದ್ದಾರೆ. ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ವಾಹನ ಬರುವುದು ತಡವಾಗುತ್ತದೆ. ಅಲ್ಲದೆ, ಕಿರಿದಾದ ಮತ್ತು ತಗ್ಗು ಪ್ರದೇಶಗಳಲ್ಲಿ ಸಂಚಾರ ಅಸಾಧ್ಯ. ಹೀಗಾಗಿ, ಇಲಾಖೆ ಈ ಬಾರಿ ಹೊಸ ಪ್ರಯೋಗಕ್ಕೆ ಮುಂದಾಗಿ, ರಾಷ್ಟ್ರೀಯ ಉದ್ಯಾನಗಳ ಉಪ ವಿಭಾಗಗಳಿಗೆ ತಲಾ ಒಂದೊಂದು ವಾಹನ ಸಿದ್ಧಪಡಿಸಿಕೊಂಡು ಇದರಲ್ಲಿ ೨ ಸಾವಿರ ಲೀಟರ್ ನೀರು ಸಂಗ್ರಹ ಸಾಮರ್ಥ್ಯದ ಟ್ಯಾಂಕ್ ಅಳವಡಿಸಲಾಗಿತ್ತು. ಇದಕ್ಕೆ ಪಂಪ್ ಜೋಡಿಸಲಾ ಗಿದ್ದು, ಇದು ಸುಮಾರು ೫೦ ಮೀಟರ್ ದೂರಕ್ಕೆ ನೀರು ಚಿಮ್ಮಿಸುವ ಸಾಮರ್ಥ್ಯ ಹೊಂದಿದೆ.

ಸೋಮವಾರ, ಮಂಗಳವಾರ ಮಳೆ ಬಿದ್ದಿರುವುದರಿಂದ ಒಂದಿಷ್ಟು ನೀರು ಕೆರೆಗಳಿಗೆ ಬಂದು ಸೇರಿದೆ. ಇದರಿಂದಾಗಿ ಕನಿಷ್ಠ ಹತ್ತು ದಿನಗಳ ಮಟ್ಟಿಗೆ ಅನುಕೂಲವಾಗುವ ಜತೆಗೆ ಹಸಿರು ಕಾಣಿಸಿಕೊಳ್ಳಲು ನೆರವಾಗಿದೆ. ಮುಂದಿನ ದಿನಗಳಲ್ಲಿ ಸ್ವಲ್ಪ ಸ್ವಲ್ಪ ಬಿದ್ದರೂ ಹಸಿರುಪ್ರದೇಶಗಳಿಗೆ ಅನುಕೂಲವಾಗಲಿದೆ. -ಲಕ್ಷ್ಮೀಕಾಂತ್,ಎಸಿಎಫ್‌

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

22 mins ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

3 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

3 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

3 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

4 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

4 hours ago