Andolana originals

ಮಳೆ ನೀರು ಚರಂಡಿಗೆ ಸೇರುತ್ತಿರುವ ಒಳಚರಂಡಿ ನೀರು

ಸಾಲೋಮನ್

ಸೊಳ್ಳೆ, ದುರ್ವಾಸನೆ, ರೋಗದ ಭೀತಿ

ದೂರು ಕೊಟ್ಟರೂ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ

೫ ವರ್ಷದಿಂದ ಚರಂಡಿಯಲ್ಲಿ ಹರಿಯುತ್ತಿದೆ ಬೋರ್‌ವೆಲ್ ನೀರು

ಮೈಸೂರು: ಈ ಸಾಲಿನ ಸ್ವಚ್ಛ ಸರ್ವೇಕ್ಷಣ್‌ಗೆ ಸಿದ್ಧಗೊಳ್ಳುತ್ತಿದ್ದೇವೆ ಎನ್ನುವ ಪಾಲಿಕೆ ಅಧಿಕಾರಿಗಳು ನಗರದ ಹೃದಯ ಭಾಗದ ಪ್ರಮುಖ ರಸ್ತೆಗಳ ಕಡೆ ಮಾತ್ರ ಗಮನಹರಿಸುತ್ತಿzರೆ. ಆದರೆ, ಬಡಾವಣೆಗಳಲ್ಲಿ ಅನೈರ್ಮಲ್ಯ ಇದ್ದೇ ಇದೆ ಎಂದು ಸಾರ್ವಜನಿಕರು ಆಕೋಶ ವ್ಯಕ್ತಪಡಿಸಿದ್ದಾರೆ.

ಮಳೆ ನೀರು ಚರಂಡಿಗೆ ಒಳಚರಂಡಿ ನೀರು ಸೇರಿ ಕೊಳೆತು ನಾರುತ್ತಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ.

ಮೈಸೂರಿನ ರಾಮಕೃಷ್ಣನಗರ ಬಡಾವಣೆಯ ಜೆ ಬ್ಲಾಕ್‌ನಲ್ಲಿ ಹಾದು ಹೋಗಿರುವ ಮಳೆ ನೀರು ಚರಂಡಿಗೆ ಮಳೆ ನೀರಿಗಿಂತಲೂ ಕಳೆದ ೫ ವರ್ಷಗಳಿಗೂ ಹೆಚ್ಚು ಕಾಲದಿಂದ ಬೋರ್‌ವೆಲ್ ನೀರು ಹರಿಯುತ್ತಿದೆ. ಇದರ ಜೊತೆಗೆ ಈ ಬಡಾವಣೆಯ ಒಳಚರಂಡಿ ನೀರಿನ ಪೈಪ್ ಒಡೆದು ಅನೇಕ ತಿಂಗಳಿಂದ ಇದೇ ಚರಂಡಿಗೆ ಸೇರುತ್ತಿದೆ.

ಈ ನೀರು ಕೂಡ ಸರಿಯಾಗಿ ಹರಿಯದ ಕಾರಣ ಇಡೀ ಚರಂಡಿ ಕೊಳೆತು ನಾರುತ್ತಿದೆ. ಚರಂಡಿಯಲ್ಲಿ ಕೇವಲ ಒಳಚರಂಡಿ ನೀರು ಮಾತ್ರ ಸೇರುತ್ತಿಲ್ಲ, ಸಾರ್ವಜನಿಕರು ಮನೆ ಕಸವನ್ನೂ ನಿತ್ಯ ಚರಂಡಿಗೆ ಬಿಸಾಡುತ್ತಿರುವುದರಿಂದ ಚರಂಡಿಯಲ್ಲಿ ನೀರು ನಿಂತು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.

ಸ್ಥಳೀಯರ ಪಾಡು ಹೇಳ ತೀರದು:

ರಾಮಕೃಷ್ಣ ನಗರ ಜೆ ಬ್ಲಾಕ್‌ನಲ್ಲಿ ನಿರ್ಮಿಸಿರುವ ಮಳೆ ನೀರು ಚರಂಡಿಗೆ ಸೇರಿದಂತೆ ವಾಸ ಮಾಡುತ್ತಿರುವವರ ಹಾಗೂ ಹತ್ತಿರದ ಇರುವ ಮನೆಗಳಲ್ಲಿ ವಾಸಿಸುವವರ ಪಾಡು ಹೇಳ ತೀರದು. ಅದರಲ್ಲೂ ಬೇಸಿಗೆಯಲ್ಲಿ ನರಕಯಾತನೆ. ಯಾವಾ ಗಲೂ ಬಾಗಿಲು, ಕಿಟಕಿ ಮುಚ್ಚಿಕೊಂಡೇ ಇರಬೇಕು. ಸೆಖೆ ಎಂದು ಬಾಗಿಲು ತೆರೆದರೆ ಸೊಳ್ಳೆಗಳು ಹಿಂಡು ಹಿಂಡಾಗಿ ಮನೆಗೆ ದಾಳಿ ಮಾಡುತ್ತವೆ. ಯಾವಾಗಲೂ ದುರ್ವಾಸನೆ ಬರುತ್ತದೆ.

ಸೊಳ್ಳೆಕಾಟ, ಈ ಕೆಟ್ಟ ವಾಸನೆಯಿಂದ ಯಾವ ರೋಗ ಬರುತ್ತೋ ಎಂಬ ಆತಂಕದ ಜೀವಿಸುತ್ತಿದ್ದೇವೆ. ಪಾಲಿಕೆಯವರಿಗೆ ಫೋನ್ ಮಾಡಿದರೆ ಸ್ಪಂದಿಸುತ್ತಿಲ್ಲ. ಇದೆಲ್ಲ ನಮ್ಮ ಕರ್ಮ ಎಂದುಕೊಂಡು ಅಸಹಾಯಕರಾಗಿದ್ದೇವೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಾರೆ.

” ಈ ವಿಚಾರ ನನಗೆ ಈಗಷ್ಟೇ ಗೊತ್ತಾಗಿರುವುದು. ಕೆಲವು ದಿನಗಳ ಹಿಂದಷ್ಟೇ ಅಧಿಕಾರವಹಿಸಿಕೊಂಡಿದ್ದೇನೆ. ಸಾರ್ವಜನಿಕರ ಸಮಸ್ಯೆ ಬಗ್ಗೆ ಖಂಡಿತ ಗಮನ ಕೊಡುತ್ತೇನೆ. ಆದಷ್ಟು ಬೇಗ ಪರಿಹರಿಸುತ್ತೇನೆ.”

ಶಿಲ್ಪ ಶರತ್, ಇಇ, ಒಳಚರಂಡಿ ವಿಭಾಗ, ಮಹಾನಗರ ಪಾಲಿಕೆ

” ಕಳೆದ ಐದಾರು ತಿಂಗಳಿಂದ ಇಲ್ಲಿ ಚರಂಡಿ ನೀರಿನ ಪೈಪ್ ಒಡೆದು ಕೊಳಚೆ ನೀರು ಚರಂಡಿಗೆ ಸೇರುತ್ತಿದೆ. ವಿಪರೀತ ಸೊಳ್ಳೆ ಹಾಗೂ ದುರ್ನಾತ, ಮನೆಯಲ್ಲಿ ಇರುವುದಕ್ಕೇ ಕಷ್ಟವಾಗಿದೆ. ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೂ ಸಮಸ್ಯೆಯನ್ನು ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.”

ಹರ್ಷಿತ, ಸ್ಥಳೀಯರು

” ಕಳೆದ ಹದಿನೈದು ವರ್ಷಗಳಿಂದಲೂ ಇದ್ದೇವೆ, ಈ ರೀತಿಯ ಸಮಸ್ಯೆ ಇರಲಿಲ್ಲ. ಕೊಳಚೆ ನೀರು ಚರಂಡಿಯಲ್ಲಿ ಹರಿಯಲು ಆರಂಭವಾದಾಗಿನಿಂದ ಅನೇಕ ಸಮಸ್ಯೆಗಳು, ಈ ಭಾಗದಲ್ಲಿರುವ ಹಿರಿಯರಿಗೆ ಆರೋಗ್ಯ ಕೆಡುತ್ತಿದೆ. ಪಾಲಿಕೆ ಸದಸ್ಯರಾಗಿದ್ದವರು ನಮ್ಮ ಫೋನ್ ತೆಗೆಯುತ್ತಿಲ್ಲ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ.”

ವಿಜಯ ರಾಧಾಕೃಷ್ಣ, ಸ್ಥಳೀಯರು

ಆಂದೋಲನ ಡೆಸ್ಕ್

Recent Posts

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

21 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

32 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

46 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

50 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

2 hours ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago