ಸಾಲೋಮನ್
ಸೊಳ್ಳೆ, ದುರ್ವಾಸನೆ, ರೋಗದ ಭೀತಿ
ದೂರು ಕೊಟ್ಟರೂ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ
೫ ವರ್ಷದಿಂದ ಚರಂಡಿಯಲ್ಲಿ ಹರಿಯುತ್ತಿದೆ ಬೋರ್ವೆಲ್ ನೀರು
ಮೈಸೂರು: ಈ ಸಾಲಿನ ಸ್ವಚ್ಛ ಸರ್ವೇಕ್ಷಣ್ಗೆ ಸಿದ್ಧಗೊಳ್ಳುತ್ತಿದ್ದೇವೆ ಎನ್ನುವ ಪಾಲಿಕೆ ಅಧಿಕಾರಿಗಳು ನಗರದ ಹೃದಯ ಭಾಗದ ಪ್ರಮುಖ ರಸ್ತೆಗಳ ಕಡೆ ಮಾತ್ರ ಗಮನಹರಿಸುತ್ತಿzರೆ. ಆದರೆ, ಬಡಾವಣೆಗಳಲ್ಲಿ ಅನೈರ್ಮಲ್ಯ ಇದ್ದೇ ಇದೆ ಎಂದು ಸಾರ್ವಜನಿಕರು ಆಕೋಶ ವ್ಯಕ್ತಪಡಿಸಿದ್ದಾರೆ.
ಮಳೆ ನೀರು ಚರಂಡಿಗೆ ಒಳಚರಂಡಿ ನೀರು ಸೇರಿ ಕೊಳೆತು ನಾರುತ್ತಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ.
ಮೈಸೂರಿನ ರಾಮಕೃಷ್ಣನಗರ ಬಡಾವಣೆಯ ಜೆ ಬ್ಲಾಕ್ನಲ್ಲಿ ಹಾದು ಹೋಗಿರುವ ಮಳೆ ನೀರು ಚರಂಡಿಗೆ ಮಳೆ ನೀರಿಗಿಂತಲೂ ಕಳೆದ ೫ ವರ್ಷಗಳಿಗೂ ಹೆಚ್ಚು ಕಾಲದಿಂದ ಬೋರ್ವೆಲ್ ನೀರು ಹರಿಯುತ್ತಿದೆ. ಇದರ ಜೊತೆಗೆ ಈ ಬಡಾವಣೆಯ ಒಳಚರಂಡಿ ನೀರಿನ ಪೈಪ್ ಒಡೆದು ಅನೇಕ ತಿಂಗಳಿಂದ ಇದೇ ಚರಂಡಿಗೆ ಸೇರುತ್ತಿದೆ.
ಈ ನೀರು ಕೂಡ ಸರಿಯಾಗಿ ಹರಿಯದ ಕಾರಣ ಇಡೀ ಚರಂಡಿ ಕೊಳೆತು ನಾರುತ್ತಿದೆ. ಚರಂಡಿಯಲ್ಲಿ ಕೇವಲ ಒಳಚರಂಡಿ ನೀರು ಮಾತ್ರ ಸೇರುತ್ತಿಲ್ಲ, ಸಾರ್ವಜನಿಕರು ಮನೆ ಕಸವನ್ನೂ ನಿತ್ಯ ಚರಂಡಿಗೆ ಬಿಸಾಡುತ್ತಿರುವುದರಿಂದ ಚರಂಡಿಯಲ್ಲಿ ನೀರು ನಿಂತು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.
ಸ್ಥಳೀಯರ ಪಾಡು ಹೇಳ ತೀರದು:
ರಾಮಕೃಷ್ಣ ನಗರ ಜೆ ಬ್ಲಾಕ್ನಲ್ಲಿ ನಿರ್ಮಿಸಿರುವ ಮಳೆ ನೀರು ಚರಂಡಿಗೆ ಸೇರಿದಂತೆ ವಾಸ ಮಾಡುತ್ತಿರುವವರ ಹಾಗೂ ಹತ್ತಿರದ ಇರುವ ಮನೆಗಳಲ್ಲಿ ವಾಸಿಸುವವರ ಪಾಡು ಹೇಳ ತೀರದು. ಅದರಲ್ಲೂ ಬೇಸಿಗೆಯಲ್ಲಿ ನರಕಯಾತನೆ. ಯಾವಾ ಗಲೂ ಬಾಗಿಲು, ಕಿಟಕಿ ಮುಚ್ಚಿಕೊಂಡೇ ಇರಬೇಕು. ಸೆಖೆ ಎಂದು ಬಾಗಿಲು ತೆರೆದರೆ ಸೊಳ್ಳೆಗಳು ಹಿಂಡು ಹಿಂಡಾಗಿ ಮನೆಗೆ ದಾಳಿ ಮಾಡುತ್ತವೆ. ಯಾವಾಗಲೂ ದುರ್ವಾಸನೆ ಬರುತ್ತದೆ.
ಸೊಳ್ಳೆಕಾಟ, ಈ ಕೆಟ್ಟ ವಾಸನೆಯಿಂದ ಯಾವ ರೋಗ ಬರುತ್ತೋ ಎಂಬ ಆತಂಕದ ಜೀವಿಸುತ್ತಿದ್ದೇವೆ. ಪಾಲಿಕೆಯವರಿಗೆ ಫೋನ್ ಮಾಡಿದರೆ ಸ್ಪಂದಿಸುತ್ತಿಲ್ಲ. ಇದೆಲ್ಲ ನಮ್ಮ ಕರ್ಮ ಎಂದುಕೊಂಡು ಅಸಹಾಯಕರಾಗಿದ್ದೇವೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಾರೆ.
” ಈ ವಿಚಾರ ನನಗೆ ಈಗಷ್ಟೇ ಗೊತ್ತಾಗಿರುವುದು. ಕೆಲವು ದಿನಗಳ ಹಿಂದಷ್ಟೇ ಅಧಿಕಾರವಹಿಸಿಕೊಂಡಿದ್ದೇನೆ. ಸಾರ್ವಜನಿಕರ ಸಮಸ್ಯೆ ಬಗ್ಗೆ ಖಂಡಿತ ಗಮನ ಕೊಡುತ್ತೇನೆ. ಆದಷ್ಟು ಬೇಗ ಪರಿಹರಿಸುತ್ತೇನೆ.”
ಶಿಲ್ಪ ಶರತ್, ಇಇ, ಒಳಚರಂಡಿ ವಿಭಾಗ, ಮಹಾನಗರ ಪಾಲಿಕೆ
” ಕಳೆದ ಐದಾರು ತಿಂಗಳಿಂದ ಇಲ್ಲಿ ಚರಂಡಿ ನೀರಿನ ಪೈಪ್ ಒಡೆದು ಕೊಳಚೆ ನೀರು ಚರಂಡಿಗೆ ಸೇರುತ್ತಿದೆ. ವಿಪರೀತ ಸೊಳ್ಳೆ ಹಾಗೂ ದುರ್ನಾತ, ಮನೆಯಲ್ಲಿ ಇರುವುದಕ್ಕೇ ಕಷ್ಟವಾಗಿದೆ. ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೂ ಸಮಸ್ಯೆಯನ್ನು ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.”
ಹರ್ಷಿತ, ಸ್ಥಳೀಯರು
” ಕಳೆದ ಹದಿನೈದು ವರ್ಷಗಳಿಂದಲೂ ಇದ್ದೇವೆ, ಈ ರೀತಿಯ ಸಮಸ್ಯೆ ಇರಲಿಲ್ಲ. ಕೊಳಚೆ ನೀರು ಚರಂಡಿಯಲ್ಲಿ ಹರಿಯಲು ಆರಂಭವಾದಾಗಿನಿಂದ ಅನೇಕ ಸಮಸ್ಯೆಗಳು, ಈ ಭಾಗದಲ್ಲಿರುವ ಹಿರಿಯರಿಗೆ ಆರೋಗ್ಯ ಕೆಡುತ್ತಿದೆ. ಪಾಲಿಕೆ ಸದಸ್ಯರಾಗಿದ್ದವರು ನಮ್ಮ ಫೋನ್ ತೆಗೆಯುತ್ತಿಲ್ಲ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ.”
ವಿಜಯ ರಾಧಾಕೃಷ್ಣ, ಸ್ಥಳೀಯರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…