Andolana originals

೨ನೇ ಬಾರಿಗೆ ಸಿಎಂ ಚಿನ್ನದ ಪದಕ ಪಡೆದ ರಮೇಶ್ ರಾವ್

ಮಂಜು ಕೋಟೆ

ಎಚ್.ಡಿ.ಕೋಟೆ: ಪಟ್ಟಣದ ವಾಸಿ ಪೊಲೀಸ್ ಮುಖ್ಯಪೇದೆ ರಮೇಶ್ ರಾವ್ ಎರಡನೇ ಬಾರಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಪಟ್ಟಣದ ಹನುಮಂತನಗರದ ನಿವಾಸಿ ರಮೇಶ್ ರಾವ್ ರವರು ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದರಿಂದ ರಾಜ್ಯ ಸರ್ಕಾರವು ಇವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಘೋಷಣೆ ಮಾಡಿದ್ದು, ಈ ಮೂಲಕ ಎರಡನೇ ಬಾರಿಗೆ ಮುಖ್ಯಮಂತ್ರಿ ಪದಕವನ್ನು ಗಳಿಸಿದಂತಾಗಿದೆ. ಏ.೨ರಂದು ಬೆಂಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ಪ್ರದಾನ ಮಾಡಲಿದ್ದಾರೆ.

ಬಡತನದಲ್ಲಿ ಜೀವನ ಮಾಡಿ, ಸರ್ಕಾರಿ ಶಾಲೆಗಳಲ್ಲಿ ಓದಿ ವಿವಿಧೆಡೆ ಕೆಲಸ ನಿರ್ವಹಿಸಿ ನಂತರ ಪೊಲೀಸ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಮೇಶ್ ರಾವ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿ, ನಕ್ಸಲ್ ತಂಡದ ನಾಯಕನಾದ ನಕ್ಸಲ್ ರವೀಂದ್ರ ಪತ್ತೆಗಾಗಿ ಮಾರುವೇಷದಲ್ಲಿ ತಿಂಗಳಾನುಗಟ್ಟಲೆ ಮನೆ ಬಿಟ್ಟು ಶೃಂಗೇರಿ, ಕುದುರೆ ಮುಖ, ಆಗುಂಬೆ, ಉಡುಪಿ ಜಿಲ್ಲೆಗಳ ದಟ್ಟವಾದ ಕಾಡಿನಲ್ಲಿ ಗುಪ್ತವಾಗಿ ಓಡಾಡಿಕೊಂಡು ಮಾಹಿತಿ ಕಲೆಹಾಕಿ ಕೋಟೆ ಹೊಂಡದ ಬಳಿ ರವೀಂದ್ರ ಬರುವ ಕುರಿತು ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ರಮೇಶ್ ರಾವ್‌ರವರು ಕಾಡಿನಲ್ಲಿ ರವೀಂದ್ರನನ್ನು ಭೇಟಿ ಮಾಡಿ ಶರಣಾಗತಿಗೆ ಮನವೊಲಿಸಿದ್ದರು. ಇದನ್ನು ಗಮನಿಸಿದ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಘೋಷಣೆ ಮಾಡಿದೆ. ಈ ಹಿಂದೆ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅನೇಕ ದರೋಡೆ, ಕೊಲೆ, ಕಳ್ಳತನ ಇನ್ನಿತರ ಪ್ರಕರಣಗಳನ್ನು ಭೇದಿಸಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ರಾವ್ ಅವರಿಗೆ ೨೦೧೨ರಲ್ಲಿ ಪ್ರಪ್ರಥಮವಾಗಿ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿತ್ತು. ಇದು ಕೋಟೆಗೆ ಲಭಿಸಿದ ಪ್ರಥಮ ಪದಕವಾಗಿತ್ತು. ಈಗ ೨ನೇ ಬಾರಿ ಪದಕ ಗಳಿಸಿರುವುದು ಜಿಲ್ಲೆ ಮತ್ತು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

11 hours ago