ಮಂಜು ಕೋಟೆ
ಎಚ್.ಡಿ.ಕೋಟೆ: ಪಟ್ಟಣದ ವಾಸಿ ಪೊಲೀಸ್ ಮುಖ್ಯಪೇದೆ ರಮೇಶ್ ರಾವ್ ಎರಡನೇ ಬಾರಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ.
ಪಟ್ಟಣದ ಹನುಮಂತನಗರದ ನಿವಾಸಿ ರಮೇಶ್ ರಾವ್ ರವರು ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದರಿಂದ ರಾಜ್ಯ ಸರ್ಕಾರವು ಇವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಘೋಷಣೆ ಮಾಡಿದ್ದು, ಈ ಮೂಲಕ ಎರಡನೇ ಬಾರಿಗೆ ಮುಖ್ಯಮಂತ್ರಿ ಪದಕವನ್ನು ಗಳಿಸಿದಂತಾಗಿದೆ. ಏ.೨ರಂದು ಬೆಂಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ಪ್ರದಾನ ಮಾಡಲಿದ್ದಾರೆ.
ಬಡತನದಲ್ಲಿ ಜೀವನ ಮಾಡಿ, ಸರ್ಕಾರಿ ಶಾಲೆಗಳಲ್ಲಿ ಓದಿ ವಿವಿಧೆಡೆ ಕೆಲಸ ನಿರ್ವಹಿಸಿ ನಂತರ ಪೊಲೀಸ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಮೇಶ್ ರಾವ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿ, ನಕ್ಸಲ್ ತಂಡದ ನಾಯಕನಾದ ನಕ್ಸಲ್ ರವೀಂದ್ರ ಪತ್ತೆಗಾಗಿ ಮಾರುವೇಷದಲ್ಲಿ ತಿಂಗಳಾನುಗಟ್ಟಲೆ ಮನೆ ಬಿಟ್ಟು ಶೃಂಗೇರಿ, ಕುದುರೆ ಮುಖ, ಆಗುಂಬೆ, ಉಡುಪಿ ಜಿಲ್ಲೆಗಳ ದಟ್ಟವಾದ ಕಾಡಿನಲ್ಲಿ ಗುಪ್ತವಾಗಿ ಓಡಾಡಿಕೊಂಡು ಮಾಹಿತಿ ಕಲೆಹಾಕಿ ಕೋಟೆ ಹೊಂಡದ ಬಳಿ ರವೀಂದ್ರ ಬರುವ ಕುರಿತು ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ರಮೇಶ್ ರಾವ್ರವರು ಕಾಡಿನಲ್ಲಿ ರವೀಂದ್ರನನ್ನು ಭೇಟಿ ಮಾಡಿ ಶರಣಾಗತಿಗೆ ಮನವೊಲಿಸಿದ್ದರು. ಇದನ್ನು ಗಮನಿಸಿದ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಘೋಷಣೆ ಮಾಡಿದೆ. ಈ ಹಿಂದೆ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅನೇಕ ದರೋಡೆ, ಕೊಲೆ, ಕಳ್ಳತನ ಇನ್ನಿತರ ಪ್ರಕರಣಗಳನ್ನು ಭೇದಿಸಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ರಾವ್ ಅವರಿಗೆ ೨೦೧೨ರಲ್ಲಿ ಪ್ರಪ್ರಥಮವಾಗಿ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿತ್ತು. ಇದು ಕೋಟೆಗೆ ಲಭಿಸಿದ ಪ್ರಥಮ ಪದಕವಾಗಿತ್ತು. ಈಗ ೨ನೇ ಬಾರಿ ಪದಕ ಗಳಿಸಿರುವುದು ಜಿಲ್ಲೆ ಮತ್ತು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…
ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…
ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…