Andolana originals

೨ನೇ ಬಾರಿಗೆ ಸಿಎಂ ಚಿನ್ನದ ಪದಕ ಪಡೆದ ರಮೇಶ್ ರಾವ್

ಮಂಜು ಕೋಟೆ

ಎಚ್.ಡಿ.ಕೋಟೆ: ಪಟ್ಟಣದ ವಾಸಿ ಪೊಲೀಸ್ ಮುಖ್ಯಪೇದೆ ರಮೇಶ್ ರಾವ್ ಎರಡನೇ ಬಾರಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಪಟ್ಟಣದ ಹನುಮಂತನಗರದ ನಿವಾಸಿ ರಮೇಶ್ ರಾವ್ ರವರು ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದರಿಂದ ರಾಜ್ಯ ಸರ್ಕಾರವು ಇವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಘೋಷಣೆ ಮಾಡಿದ್ದು, ಈ ಮೂಲಕ ಎರಡನೇ ಬಾರಿಗೆ ಮುಖ್ಯಮಂತ್ರಿ ಪದಕವನ್ನು ಗಳಿಸಿದಂತಾಗಿದೆ. ಏ.೨ರಂದು ಬೆಂಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ಪ್ರದಾನ ಮಾಡಲಿದ್ದಾರೆ.

ಬಡತನದಲ್ಲಿ ಜೀವನ ಮಾಡಿ, ಸರ್ಕಾರಿ ಶಾಲೆಗಳಲ್ಲಿ ಓದಿ ವಿವಿಧೆಡೆ ಕೆಲಸ ನಿರ್ವಹಿಸಿ ನಂತರ ಪೊಲೀಸ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಮೇಶ್ ರಾವ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿ, ನಕ್ಸಲ್ ತಂಡದ ನಾಯಕನಾದ ನಕ್ಸಲ್ ರವೀಂದ್ರ ಪತ್ತೆಗಾಗಿ ಮಾರುವೇಷದಲ್ಲಿ ತಿಂಗಳಾನುಗಟ್ಟಲೆ ಮನೆ ಬಿಟ್ಟು ಶೃಂಗೇರಿ, ಕುದುರೆ ಮುಖ, ಆಗುಂಬೆ, ಉಡುಪಿ ಜಿಲ್ಲೆಗಳ ದಟ್ಟವಾದ ಕಾಡಿನಲ್ಲಿ ಗುಪ್ತವಾಗಿ ಓಡಾಡಿಕೊಂಡು ಮಾಹಿತಿ ಕಲೆಹಾಕಿ ಕೋಟೆ ಹೊಂಡದ ಬಳಿ ರವೀಂದ್ರ ಬರುವ ಕುರಿತು ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ರಮೇಶ್ ರಾವ್‌ರವರು ಕಾಡಿನಲ್ಲಿ ರವೀಂದ್ರನನ್ನು ಭೇಟಿ ಮಾಡಿ ಶರಣಾಗತಿಗೆ ಮನವೊಲಿಸಿದ್ದರು. ಇದನ್ನು ಗಮನಿಸಿದ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಘೋಷಣೆ ಮಾಡಿದೆ. ಈ ಹಿಂದೆ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅನೇಕ ದರೋಡೆ, ಕೊಲೆ, ಕಳ್ಳತನ ಇನ್ನಿತರ ಪ್ರಕರಣಗಳನ್ನು ಭೇದಿಸಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ರಾವ್ ಅವರಿಗೆ ೨೦೧೨ರಲ್ಲಿ ಪ್ರಪ್ರಥಮವಾಗಿ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿತ್ತು. ಇದು ಕೋಟೆಗೆ ಲಭಿಸಿದ ಪ್ರಥಮ ಪದಕವಾಗಿತ್ತು. ಈಗ ೨ನೇ ಬಾರಿ ಪದಕ ಗಳಿಸಿರುವುದು ಜಿಲ್ಲೆ ಮತ್ತು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

28 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

29 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

31 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

33 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

37 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

41 mins ago