ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನತೆ ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳು, ಎಳನೀರು, ಕಬ್ಬಿನ ಹಾಲುಗಳತ್ತ ಮುಖ ಮಾಡುತ್ತಿದ್ದಾರೆ.
ತಾಲ್ಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಳವಾಗಿದ್ದು ಜನರು ಬಸವಳಿಯುತ್ತಿದ್ದಾರೆ. ಹೀಗಾಗಿ ಜನರು ತಂಪು ಪಾನೀಯ ಹಾಗೂ ಎಳನೀರಿನ ಮೊರೆ ಹೋಗುತ್ತಿದ್ದಾರೆ. ಇದರಿಂದ ತಂಪು ಪಾನೀಯಗಳಿಗೆ ಹಾಗೂ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ.
ತಾಲ್ಲೂಕು ರಾಜ್ಯದಲ್ಲೇ ಅತ್ಯಽಕ ಕಾಡುಪ್ರದೇಶ ಹೊಂದಿದ್ದರೂ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ನಿತ್ರಾಣರಾಗುವಂತಾಗಿದೆ.
ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲಿನ ಪರಿಣಾಮ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೆಲಸದ ನಿಮಿತ್ತ ಹೊರಬರುವ ಜನರು ಛತ್ರಿಯ ಮೊರೆ ಹೋಗಿದ್ದಾರೆ. ಬೆಳಿಗ್ಗೆ ೯ರ ವೇಳೆಗೆ ಆರಂಭವಾಗುವ ಎಳೆ ಬಿಸಿಲು ಜನರ ಮೈಸುಡಲು ಪ್ರಾರಂಭಿಸುತ್ತದೆ. ಸಂಜೆ ೫, ೬ ಗಂಟೆಯವರೆಗೂ ಬಿಸಿಲಿನ ಝಳ ಇರುವುದರಿಂದ ನಾಗರಿಕರು ದಣಿವಾರಿಸಿಕೊಳ್ಳಲು ಎಳನೀರು, ತಂಪುಪಾನೀಯ ಹಾಗೂ ಕಬ್ಬಿನ ಹಾಲಿಗೆ ಮೊರೆ ಹೋಗುತ್ತಿದ್ದಾರೆ. ಬೇಕರಿ, ಹೋಟೆಲ್ಗಳಲ್ಲಿ ತಂಪು ಪಾನೀಯಗಳ ಮಾರಾಟ ಹೆಚ್ಚಾಗಿದೆ. ಮಜ್ಜಿಗೆಗೆ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಕಲ್ಲಂಗಡಿ ಹಣ್ಣು, ಸೋಡಾ, ಶರಬತ್ತು, ಹಣ್ಣಿನ ಜ್ಯೂಸ್ಗಳ ವ್ಯಾಪಾರ ಜೋರಾಗಿದೆ.
ಬೇಸಿಗೆ ಸಂದರ್ಭದಲ್ಲಿ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ತಾಲ್ಲೂಕು ಮತ್ತು ಜಿಲ್ಲೆಯ ಅಕ್ಕಪಕ್ಕದ ತೋಟಗಳಿಂದ ಎಳನೀರು ಖರೀದಿಸಿ ತರಲಾಗುತ್ತಿದೆ. ತೋಟಗಳಲ್ಲಿಯೂ ಎಳನೀರು ಸಿಗುತ್ತಿಲ್ಲ. -ಮಹದೇವು, ಎಳನೀರು ವ್ಯಾಪಾರಿ
ಈ ಬಾರಿ ಬಿಸಿಲಿನ ತಾಪಮಾನ ಬಹಳ ಹೆಚ್ಚಾಗಿದೆ. ಮಧ್ಯಾಹ್ನದ ವೇಳೆಯಂತೂ ಮರದ ನೆರಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ತಾಪಕ್ಕೆ ತಲೆನೋವು ಬರುವ ಸಾಧ್ಯತೆ ಹೆಚ್ಚಿದೆ. ರಾಸಾಯನಿಕ ಮಿಶ್ರಿತ ತಂಪು ಪಾನೀಯ ಕುಡಿಯುವುದರ ಬದಲು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುವ ಎಳನೀರು, ಕಬ್ಬಿನಹಾಲು, ಕಲ್ಲಂಗಡಿ, ಹಣ್ಣಿನ ರಸಗಳನ್ನು ಸೇವಿಸುವುದು ಸೂಕ್ತ. –ಆರ್. ಡಿ. ಉಲ್ಲಾಸ್, ಸಾರ್ವಜನಿಕರು
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…