Andolana originals

ರಣಬಿಸಿಲು: ಕಲ್ಲಂಗಡಿ, ಎಳನೀರಿಗೆ ಮೊರೆ ಹೋದ ಜನತೆ

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನತೆ ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳು, ಎಳನೀರು, ಕಬ್ಬಿನ ಹಾಲುಗಳತ್ತ ಮುಖ ಮಾಡುತ್ತಿದ್ದಾರೆ.

ತಾಲ್ಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಳವಾಗಿದ್ದು ಜನರು ಬಸವಳಿಯುತ್ತಿದ್ದಾರೆ. ಹೀಗಾಗಿ ಜನರು ತಂಪು ಪಾನೀಯ ಹಾಗೂ ಎಳನೀರಿನ ಮೊರೆ ಹೋಗುತ್ತಿದ್ದಾರೆ. ಇದರಿಂದ ತಂಪು ಪಾನೀಯಗಳಿಗೆ ಹಾಗೂ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ.

ತಾಲ್ಲೂಕು ರಾಜ್ಯದಲ್ಲೇ ಅತ್ಯಽಕ ಕಾಡುಪ್ರದೇಶ ಹೊಂದಿದ್ದರೂ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ನಿತ್ರಾಣರಾಗುವಂತಾಗಿದೆ.

ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲಿನ ಪರಿಣಾಮ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೆಲಸದ ನಿಮಿತ್ತ ಹೊರಬರುವ ಜನರು ಛತ್ರಿಯ ಮೊರೆ ಹೋಗಿದ್ದಾರೆ. ಬೆಳಿಗ್ಗೆ ೯ರ ವೇಳೆಗೆ ಆರಂಭವಾಗುವ ಎಳೆ ಬಿಸಿಲು ಜನರ ಮೈಸುಡಲು ಪ್ರಾರಂಭಿಸುತ್ತದೆ. ಸಂಜೆ ೫, ೬ ಗಂಟೆಯವರೆಗೂ ಬಿಸಿಲಿನ ಝಳ ಇರುವುದರಿಂದ ನಾಗರಿಕರು ದಣಿವಾರಿಸಿಕೊಳ್ಳಲು ಎಳನೀರು, ತಂಪುಪಾನೀಯ ಹಾಗೂ ಕಬ್ಬಿನ ಹಾಲಿಗೆ ಮೊರೆ ಹೋಗುತ್ತಿದ್ದಾರೆ. ಬೇಕರಿ, ಹೋಟೆಲ್‌ಗಳಲ್ಲಿ ತಂಪು ಪಾನೀಯಗಳ ಮಾರಾಟ ಹೆಚ್ಚಾಗಿದೆ. ಮಜ್ಜಿಗೆಗೆ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಕಲ್ಲಂಗಡಿ ಹಣ್ಣು, ಸೋಡಾ, ಶರಬತ್ತು, ಹಣ್ಣಿನ ಜ್ಯೂಸ್‌ಗಳ ವ್ಯಾಪಾರ ಜೋರಾಗಿದೆ.

ಬೇಸಿಗೆ ಸಂದರ್ಭದಲ್ಲಿ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ತಾಲ್ಲೂಕು ಮತ್ತು ಜಿಲ್ಲೆಯ ಅಕ್ಕಪಕ್ಕದ ತೋಟಗಳಿಂದ ಎಳನೀರು ಖರೀದಿಸಿ ತರಲಾಗುತ್ತಿದೆ. ತೋಟಗಳಲ್ಲಿಯೂ ಎಳನೀರು ಸಿಗುತ್ತಿಲ್ಲ. -ಮಹದೇವು, ಎಳನೀರು ವ್ಯಾಪಾರಿ

ಈ ಬಾರಿ ಬಿಸಿಲಿನ ತಾಪಮಾನ ಬಹಳ ಹೆಚ್ಚಾಗಿದೆ. ಮಧ್ಯಾಹ್ನದ ವೇಳೆಯಂತೂ ಮರದ ನೆರಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ತಾಪಕ್ಕೆ ತಲೆನೋವು ಬರುವ ಸಾಧ್ಯತೆ ಹೆಚ್ಚಿದೆ. ರಾಸಾಯನಿಕ ಮಿಶ್ರಿತ ತಂಪು ಪಾನೀಯ ಕುಡಿಯುವುದರ ಬದಲು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುವ ಎಳನೀರು, ಕಬ್ಬಿನಹಾಲು, ಕಲ್ಲಂಗಡಿ, ಹಣ್ಣಿನ ರಸಗಳನ್ನು ಸೇವಿಸುವುದು ಸೂಕ್ತ. –ಆರ್. ಡಿ. ಉಲ್ಲಾಸ್, ಸಾರ್ವಜನಿಕರು

ಆಂದೋಲನ ಡೆಸ್ಕ್

Recent Posts

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

8 mins ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

52 mins ago

ಟಿ.ನರಸೀಪುರ: ಗುಂಜಾನರಸಿಂಹಸ್ವಾಮಿ ದರ್ಶನಕ್ಕೆ ಹರಿದುಬಂದ ಜನಸಾಗರ

ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…

1 hour ago

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

2 hours ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

2 hours ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

3 hours ago