Andolana originals

ರಣಬಿಸಿಲು: ಕಲ್ಲಂಗಡಿ, ಎಳನೀರಿಗೆ ಮೊರೆ ಹೋದ ಜನತೆ

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನತೆ ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳು, ಎಳನೀರು, ಕಬ್ಬಿನ ಹಾಲುಗಳತ್ತ ಮುಖ ಮಾಡುತ್ತಿದ್ದಾರೆ.

ತಾಲ್ಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಳವಾಗಿದ್ದು ಜನರು ಬಸವಳಿಯುತ್ತಿದ್ದಾರೆ. ಹೀಗಾಗಿ ಜನರು ತಂಪು ಪಾನೀಯ ಹಾಗೂ ಎಳನೀರಿನ ಮೊರೆ ಹೋಗುತ್ತಿದ್ದಾರೆ. ಇದರಿಂದ ತಂಪು ಪಾನೀಯಗಳಿಗೆ ಹಾಗೂ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ.

ತಾಲ್ಲೂಕು ರಾಜ್ಯದಲ್ಲೇ ಅತ್ಯಽಕ ಕಾಡುಪ್ರದೇಶ ಹೊಂದಿದ್ದರೂ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ನಿತ್ರಾಣರಾಗುವಂತಾಗಿದೆ.

ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲಿನ ಪರಿಣಾಮ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೆಲಸದ ನಿಮಿತ್ತ ಹೊರಬರುವ ಜನರು ಛತ್ರಿಯ ಮೊರೆ ಹೋಗಿದ್ದಾರೆ. ಬೆಳಿಗ್ಗೆ ೯ರ ವೇಳೆಗೆ ಆರಂಭವಾಗುವ ಎಳೆ ಬಿಸಿಲು ಜನರ ಮೈಸುಡಲು ಪ್ರಾರಂಭಿಸುತ್ತದೆ. ಸಂಜೆ ೫, ೬ ಗಂಟೆಯವರೆಗೂ ಬಿಸಿಲಿನ ಝಳ ಇರುವುದರಿಂದ ನಾಗರಿಕರು ದಣಿವಾರಿಸಿಕೊಳ್ಳಲು ಎಳನೀರು, ತಂಪುಪಾನೀಯ ಹಾಗೂ ಕಬ್ಬಿನ ಹಾಲಿಗೆ ಮೊರೆ ಹೋಗುತ್ತಿದ್ದಾರೆ. ಬೇಕರಿ, ಹೋಟೆಲ್‌ಗಳಲ್ಲಿ ತಂಪು ಪಾನೀಯಗಳ ಮಾರಾಟ ಹೆಚ್ಚಾಗಿದೆ. ಮಜ್ಜಿಗೆಗೆ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಕಲ್ಲಂಗಡಿ ಹಣ್ಣು, ಸೋಡಾ, ಶರಬತ್ತು, ಹಣ್ಣಿನ ಜ್ಯೂಸ್‌ಗಳ ವ್ಯಾಪಾರ ಜೋರಾಗಿದೆ.

ಬೇಸಿಗೆ ಸಂದರ್ಭದಲ್ಲಿ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ತಾಲ್ಲೂಕು ಮತ್ತು ಜಿಲ್ಲೆಯ ಅಕ್ಕಪಕ್ಕದ ತೋಟಗಳಿಂದ ಎಳನೀರು ಖರೀದಿಸಿ ತರಲಾಗುತ್ತಿದೆ. ತೋಟಗಳಲ್ಲಿಯೂ ಎಳನೀರು ಸಿಗುತ್ತಿಲ್ಲ. -ಮಹದೇವು, ಎಳನೀರು ವ್ಯಾಪಾರಿ

ಈ ಬಾರಿ ಬಿಸಿಲಿನ ತಾಪಮಾನ ಬಹಳ ಹೆಚ್ಚಾಗಿದೆ. ಮಧ್ಯಾಹ್ನದ ವೇಳೆಯಂತೂ ಮರದ ನೆರಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ತಾಪಕ್ಕೆ ತಲೆನೋವು ಬರುವ ಸಾಧ್ಯತೆ ಹೆಚ್ಚಿದೆ. ರಾಸಾಯನಿಕ ಮಿಶ್ರಿತ ತಂಪು ಪಾನೀಯ ಕುಡಿಯುವುದರ ಬದಲು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುವ ಎಳನೀರು, ಕಬ್ಬಿನಹಾಲು, ಕಲ್ಲಂಗಡಿ, ಹಣ್ಣಿನ ರಸಗಳನ್ನು ಸೇವಿಸುವುದು ಸೂಕ್ತ. –ಆರ್. ಡಿ. ಉಲ್ಲಾಸ್, ಸಾರ್ವಜನಿಕರು

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago