ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನತೆ ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳು, ಎಳನೀರು, ಕಬ್ಬಿನ ಹಾಲುಗಳತ್ತ ಮುಖ ಮಾಡುತ್ತಿದ್ದಾರೆ.
ತಾಲ್ಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಳವಾಗಿದ್ದು ಜನರು ಬಸವಳಿಯುತ್ತಿದ್ದಾರೆ. ಹೀಗಾಗಿ ಜನರು ತಂಪು ಪಾನೀಯ ಹಾಗೂ ಎಳನೀರಿನ ಮೊರೆ ಹೋಗುತ್ತಿದ್ದಾರೆ. ಇದರಿಂದ ತಂಪು ಪಾನೀಯಗಳಿಗೆ ಹಾಗೂ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ.
ತಾಲ್ಲೂಕು ರಾಜ್ಯದಲ್ಲೇ ಅತ್ಯಽಕ ಕಾಡುಪ್ರದೇಶ ಹೊಂದಿದ್ದರೂ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ನಿತ್ರಾಣರಾಗುವಂತಾಗಿದೆ.
ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲಿನ ಪರಿಣಾಮ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೆಲಸದ ನಿಮಿತ್ತ ಹೊರಬರುವ ಜನರು ಛತ್ರಿಯ ಮೊರೆ ಹೋಗಿದ್ದಾರೆ. ಬೆಳಿಗ್ಗೆ ೯ರ ವೇಳೆಗೆ ಆರಂಭವಾಗುವ ಎಳೆ ಬಿಸಿಲು ಜನರ ಮೈಸುಡಲು ಪ್ರಾರಂಭಿಸುತ್ತದೆ. ಸಂಜೆ ೫, ೬ ಗಂಟೆಯವರೆಗೂ ಬಿಸಿಲಿನ ಝಳ ಇರುವುದರಿಂದ ನಾಗರಿಕರು ದಣಿವಾರಿಸಿಕೊಳ್ಳಲು ಎಳನೀರು, ತಂಪುಪಾನೀಯ ಹಾಗೂ ಕಬ್ಬಿನ ಹಾಲಿಗೆ ಮೊರೆ ಹೋಗುತ್ತಿದ್ದಾರೆ. ಬೇಕರಿ, ಹೋಟೆಲ್ಗಳಲ್ಲಿ ತಂಪು ಪಾನೀಯಗಳ ಮಾರಾಟ ಹೆಚ್ಚಾಗಿದೆ. ಮಜ್ಜಿಗೆಗೆ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಕಲ್ಲಂಗಡಿ ಹಣ್ಣು, ಸೋಡಾ, ಶರಬತ್ತು, ಹಣ್ಣಿನ ಜ್ಯೂಸ್ಗಳ ವ್ಯಾಪಾರ ಜೋರಾಗಿದೆ.
ಬೇಸಿಗೆ ಸಂದರ್ಭದಲ್ಲಿ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ತಾಲ್ಲೂಕು ಮತ್ತು ಜಿಲ್ಲೆಯ ಅಕ್ಕಪಕ್ಕದ ತೋಟಗಳಿಂದ ಎಳನೀರು ಖರೀದಿಸಿ ತರಲಾಗುತ್ತಿದೆ. ತೋಟಗಳಲ್ಲಿಯೂ ಎಳನೀರು ಸಿಗುತ್ತಿಲ್ಲ. -ಮಹದೇವು, ಎಳನೀರು ವ್ಯಾಪಾರಿ
ಈ ಬಾರಿ ಬಿಸಿಲಿನ ತಾಪಮಾನ ಬಹಳ ಹೆಚ್ಚಾಗಿದೆ. ಮಧ್ಯಾಹ್ನದ ವೇಳೆಯಂತೂ ಮರದ ನೆರಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ತಾಪಕ್ಕೆ ತಲೆನೋವು ಬರುವ ಸಾಧ್ಯತೆ ಹೆಚ್ಚಿದೆ. ರಾಸಾಯನಿಕ ಮಿಶ್ರಿತ ತಂಪು ಪಾನೀಯ ಕುಡಿಯುವುದರ ಬದಲು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುವ ಎಳನೀರು, ಕಬ್ಬಿನಹಾಲು, ಕಲ್ಲಂಗಡಿ, ಹಣ್ಣಿನ ರಸಗಳನ್ನು ಸೇವಿಸುವುದು ಸೂಕ್ತ. –ಆರ್. ಡಿ. ಉಲ್ಲಾಸ್, ಸಾರ್ವಜನಿಕರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…