Andolana originals

ರಣಬಿಸಿಲು: ಕಲ್ಲಂಗಡಿ, ಎಳನೀರಿಗೆ ಮೊರೆ ಹೋದ ಜನತೆ

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನತೆ ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳು, ಎಳನೀರು, ಕಬ್ಬಿನ ಹಾಲುಗಳತ್ತ ಮುಖ ಮಾಡುತ್ತಿದ್ದಾರೆ.

ತಾಲ್ಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಳವಾಗಿದ್ದು ಜನರು ಬಸವಳಿಯುತ್ತಿದ್ದಾರೆ. ಹೀಗಾಗಿ ಜನರು ತಂಪು ಪಾನೀಯ ಹಾಗೂ ಎಳನೀರಿನ ಮೊರೆ ಹೋಗುತ್ತಿದ್ದಾರೆ. ಇದರಿಂದ ತಂಪು ಪಾನೀಯಗಳಿಗೆ ಹಾಗೂ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ.

ತಾಲ್ಲೂಕು ರಾಜ್ಯದಲ್ಲೇ ಅತ್ಯಽಕ ಕಾಡುಪ್ರದೇಶ ಹೊಂದಿದ್ದರೂ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ನಿತ್ರಾಣರಾಗುವಂತಾಗಿದೆ.

ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲಿನ ಪರಿಣಾಮ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೆಲಸದ ನಿಮಿತ್ತ ಹೊರಬರುವ ಜನರು ಛತ್ರಿಯ ಮೊರೆ ಹೋಗಿದ್ದಾರೆ. ಬೆಳಿಗ್ಗೆ ೯ರ ವೇಳೆಗೆ ಆರಂಭವಾಗುವ ಎಳೆ ಬಿಸಿಲು ಜನರ ಮೈಸುಡಲು ಪ್ರಾರಂಭಿಸುತ್ತದೆ. ಸಂಜೆ ೫, ೬ ಗಂಟೆಯವರೆಗೂ ಬಿಸಿಲಿನ ಝಳ ಇರುವುದರಿಂದ ನಾಗರಿಕರು ದಣಿವಾರಿಸಿಕೊಳ್ಳಲು ಎಳನೀರು, ತಂಪುಪಾನೀಯ ಹಾಗೂ ಕಬ್ಬಿನ ಹಾಲಿಗೆ ಮೊರೆ ಹೋಗುತ್ತಿದ್ದಾರೆ. ಬೇಕರಿ, ಹೋಟೆಲ್‌ಗಳಲ್ಲಿ ತಂಪು ಪಾನೀಯಗಳ ಮಾರಾಟ ಹೆಚ್ಚಾಗಿದೆ. ಮಜ್ಜಿಗೆಗೆ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಕಲ್ಲಂಗಡಿ ಹಣ್ಣು, ಸೋಡಾ, ಶರಬತ್ತು, ಹಣ್ಣಿನ ಜ್ಯೂಸ್‌ಗಳ ವ್ಯಾಪಾರ ಜೋರಾಗಿದೆ.

ಬೇಸಿಗೆ ಸಂದರ್ಭದಲ್ಲಿ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ತಾಲ್ಲೂಕು ಮತ್ತು ಜಿಲ್ಲೆಯ ಅಕ್ಕಪಕ್ಕದ ತೋಟಗಳಿಂದ ಎಳನೀರು ಖರೀದಿಸಿ ತರಲಾಗುತ್ತಿದೆ. ತೋಟಗಳಲ್ಲಿಯೂ ಎಳನೀರು ಸಿಗುತ್ತಿಲ್ಲ. -ಮಹದೇವು, ಎಳನೀರು ವ್ಯಾಪಾರಿ

ಈ ಬಾರಿ ಬಿಸಿಲಿನ ತಾಪಮಾನ ಬಹಳ ಹೆಚ್ಚಾಗಿದೆ. ಮಧ್ಯಾಹ್ನದ ವೇಳೆಯಂತೂ ಮರದ ನೆರಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ತಾಪಕ್ಕೆ ತಲೆನೋವು ಬರುವ ಸಾಧ್ಯತೆ ಹೆಚ್ಚಿದೆ. ರಾಸಾಯನಿಕ ಮಿಶ್ರಿತ ತಂಪು ಪಾನೀಯ ಕುಡಿಯುವುದರ ಬದಲು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುವ ಎಳನೀರು, ಕಬ್ಬಿನಹಾಲು, ಕಲ್ಲಂಗಡಿ, ಹಣ್ಣಿನ ರಸಗಳನ್ನು ಸೇವಿಸುವುದು ಸೂಕ್ತ. –ಆರ್. ಡಿ. ಉಲ್ಲಾಸ್, ಸಾರ್ವಜನಿಕರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

2 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

2 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

2 hours ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

2 hours ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

3 hours ago